ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ. ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ […]

ಬೆಳಗಾವಿಯಲ್ಲಿ ನಾಯಿಯ ಜೀವ ಉಳಿಸಲು ಹೋಗಿ ಪ್ರಾಣ ತೆತ್ತ ಪಿಎಸ್​ಐ
ಸಾಧು ಶ್ರೀನಾಥ್​

Updated on: Apr 23, 2020 | 10:45 AM

ಬೆಳಗಾವಿ: ಕೊರೊನಾ ಭದ್ರತೆಗೆ ತೆರಳುತ್ತಿದ್ದಾಗ ಅಡ್ಡಬಂದ ನಾಯಿಯ ಜೀವ ಉಳಿಸಲು ಹೋಗಿ PSI ಎಂ.ಜಿ.ಗಣಾಚಾರಿ ಮೃತಪಟ್ಟಿರುವ ಘಟನೆ ಯಳ್ಳೂರು ಗ್ರಾಮದ ಬಳಿ ನಡೆದಿದೆ. ಯಳ್ಳೂರು ಗ್ರಾಮದಿಂದ ಪೊಲೀಸ್ ಠಾಣೆಗೆ ಬರುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದಿದೆ. ಈ ವೇಳೆ ನಾಯಿಯ ಜೀವ ಉಳಿಸಲು ಹೋಗಿ ಬೈಕ್​ ಸ್ಕಿಡ್ ಆಗಿದೆ.

ಬೈಕ್​ನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಎಂ.ಜಿ.ಗಣಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:06 am, Sat, 18 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us