ಸೋಂಕಿತನಿಗೆ ಸರ್ಜರಿ ಮಾಡಿದ ವೈದ್ಯರು, ಸಿಬ್ಬಂದಿಗೆ ಕ್ವಾರಂಟೈನ್​ ಪೀಕಲಾಟ! ಎಲ್ಲಿ?

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಸೋಂಕಿತನಿಗೆ ಶಸ್ತ್ರಚಿಕಿತ್ಸೆ ಮಾಡಿ ಕಿಮ್ಸ್ ವೈದ್ಯಕೀಯ ತಂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಧಾರವಾಡದ ವ್ಯಕ್ತಿಗೆ ವೈದ್ಯರು ಆಪರೇಷನ್ ಮಾಡಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ಬಳಿಕ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಶಸ್ತ್ರಚಿಕಿತ್ಸೆ ಬಳಿಕ ಧಾರವಾಡದ 705ನೇ ಕೊರೊನಾ ಸೋಂಕಿತ ಚೇತರಿಸಿಕೊಳ್ಳುತ್ತಿದ್ದಾನೆ. ಗಂಟಲು ದ್ರವ ಪರೀಕ್ಷೆ ಬಳಿಕ ಆತನಿಗೆ ಸೋಂಕು ತಗುಲಿರುವು ಪತ್ತೆಯಾಗಿದೆ. ಹಾಗಾಗಿ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಐವರು ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.

ಸೋಂಕಿತನಿಗೆ ಸರ್ಜರಿ ಮಾಡಿದ ವೈದ್ಯರು, ಸಿಬ್ಬಂದಿಗೆ ಕ್ವಾರಂಟೈನ್​ ಪೀಕಲಾಟ! ಎಲ್ಲಿ?
ಸಾಧು ಶ್ರೀನಾಥ್​

Updated on: May 08, 2020 | 6:00 PM

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಸೋಂಕಿತನಿಗೆ ಶಸ್ತ್ರಚಿಕಿತ್ಸೆ ಮಾಡಿ ಕಿಮ್ಸ್ ವೈದ್ಯಕೀಯ ತಂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಧಾರವಾಡದ ವ್ಯಕ್ತಿಗೆ ವೈದ್ಯರು ಆಪರೇಷನ್ ಮಾಡಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ಬಳಿಕ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸದ್ಯ ಶಸ್ತ್ರಚಿಕಿತ್ಸೆ ಬಳಿಕ ಧಾರವಾಡದ 705ನೇ ಕೊರೊನಾ ಸೋಂಕಿತ ಚೇತರಿಸಿಕೊಳ್ಳುತ್ತಿದ್ದಾನೆ. ಗಂಟಲು ದ್ರವ ಪರೀಕ್ಷೆ ಬಳಿಕ ಆತನಿಗೆ ಸೋಂಕು ತಗುಲಿರುವು ಪತ್ತೆಯಾಗಿದೆ. ಹಾಗಾಗಿ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ಐವರು ವೈದ್ಯರು ಮತ್ತು 6 ಅರೆ ವೈದ್ಯಕೀಯ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.

Published On - 3:37 pm, Fri, 8 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us