AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಮ್ಸ್ ವೈದ್ಯರ ಆ ಮಹಾ ಎಡವಟ್ಟು ಏನು? ಅಂತ್ಯಕ್ರಿಯೆ ವೇಳೆ ಗ್ರಾಮಸ್ಥರ ಆತಂಕ ಏನು?

ಹುಬ್ಬಳ್ಳಿ: ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟಾಗಿದೆ. ಕೊರೊನಾ ರಿಪೋರ್ಟ್ ಬರೋ ಮುನ್ನವೇ ಸೋಂಕಿತ ವೃದ್ಧನ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಇಡೀ ಊರಿನ ಜನರು ಭಾಗಿಯಾಗಿದ್ದಾರೆ. ಈಗ ಊರಿಗೆ ಊರೇ ಕಂಗಾಲಾಗಿದೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ 73 ವರ್ಷದ ವೃದ್ಧ ಜೂನ್ 22ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ವೃದ್ಧನ ಗಂಟಲು ದ್ರವ ತೆಗೆದುಕೊಂಡು ಕೊರೊನಾ ಪರೀಕ್ಷೆಗೆ ಕಳುಹಿಸಿದ್ದರು. ಆದರೆ ಅನಾರೋಗ್ಯದಿಂದ ಜೂನ್ 24ರಂದು ವೃದ್ಧ ಮೃತಪಟ್ಟಿದ್ದಾರೆ. ಕೂಡಲೇ […]

ಕಿಮ್ಸ್ ವೈದ್ಯರ ಆ ಮಹಾ ಎಡವಟ್ಟು ಏನು? ಅಂತ್ಯಕ್ರಿಯೆ ವೇಳೆ ಗ್ರಾಮಸ್ಥರ ಆತಂಕ ಏನು?
ಆಯೇಷಾ ಬಾನು
| Edited By: |

Updated on:Jun 29, 2020 | 11:13 AM

Share

ಹುಬ್ಬಳ್ಳಿ: ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟಾಗಿದೆ. ಕೊರೊನಾ ರಿಪೋರ್ಟ್ ಬರೋ ಮುನ್ನವೇ ಸೋಂಕಿತ ವೃದ್ಧನ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಇಡೀ ಊರಿನ ಜನರು ಭಾಗಿಯಾಗಿದ್ದಾರೆ. ಈಗ ಊರಿಗೆ ಊರೇ ಕಂಗಾಲಾಗಿದೆ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ 73 ವರ್ಷದ ವೃದ್ಧ ಜೂನ್ 22ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ವೃದ್ಧನ ಗಂಟಲು ದ್ರವ ತೆಗೆದುಕೊಂಡು ಕೊರೊನಾ ಪರೀಕ್ಷೆಗೆ ಕಳುಹಿಸಿದ್ದರು. ಆದರೆ ಅನಾರೋಗ್ಯದಿಂದ ಜೂನ್ 24ರಂದು ವೃದ್ಧ ಮೃತಪಟ್ಟಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ವೃದ್ಧನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.

ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿರುವ ಬಗ್ಗೆ ಮಾಹಿತಿ ನೀಡಿಲ್ಲ. ಕೊರೊನಾ ಬಗ್ಗೆ ಯೋಚಿಸದೆ ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಊರಿನ ಜನ ಸೇರಿದಂತೆ ಅನೇಕ ಮಂದಿ ಭಾಗಿಯಾಗಿದ್ದರು. ಶನಿವಾರ ಸೋಂಕಿತರ ಪಟ್ಟಿ ಬಿಡುಗಡೆಯಾದಾಗ ವರದಿಯಲ್ಲಿ ಮೃತ ವೃದ್ಧನಿಗೆ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ರೋಗಿ ನಂಬರ್ 11406 ಎಂದು ವೃದ್ಧನನ್ನ ಗುರುತಿಸಲಾಗಿದೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಸಾಕಷ್ಟು ಜನರು ಭಾಗಿಯಾಗಿದ್ರು. ಕಿಮ್ಸ್ ವೈದ್ಯರ ಎಡವಟ್ಟಿನಿಂದ ಗ್ರಾಮಸ್ಥರಿಗೆಲ್ಲಾ ಕೊರೊನಾ ಭೀತಿ ಶುರುವಾಗಿದೆ.

Published On - 10:47 am, Mon, 29 June 20

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ