AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಮ್ಸ್ ವೈದ್ಯರ ಆ ಮಹಾ ಎಡವಟ್ಟು ಏನು? ಅಂತ್ಯಕ್ರಿಯೆ ವೇಳೆ ಗ್ರಾಮಸ್ಥರ ಆತಂಕ ಏನು?

ಹುಬ್ಬಳ್ಳಿ: ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟಾಗಿದೆ. ಕೊರೊನಾ ರಿಪೋರ್ಟ್ ಬರೋ ಮುನ್ನವೇ ಸೋಂಕಿತ ವೃದ್ಧನ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಇಡೀ ಊರಿನ ಜನರು ಭಾಗಿಯಾಗಿದ್ದಾರೆ. ಈಗ ಊರಿಗೆ ಊರೇ ಕಂಗಾಲಾಗಿದೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ 73 ವರ್ಷದ ವೃದ್ಧ ಜೂನ್ 22ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ವೃದ್ಧನ ಗಂಟಲು ದ್ರವ ತೆಗೆದುಕೊಂಡು ಕೊರೊನಾ ಪರೀಕ್ಷೆಗೆ ಕಳುಹಿಸಿದ್ದರು. ಆದರೆ ಅನಾರೋಗ್ಯದಿಂದ ಜೂನ್ 24ರಂದು ವೃದ್ಧ ಮೃತಪಟ್ಟಿದ್ದಾರೆ. ಕೂಡಲೇ […]

ಕಿಮ್ಸ್ ವೈದ್ಯರ ಆ ಮಹಾ ಎಡವಟ್ಟು ಏನು? ಅಂತ್ಯಕ್ರಿಯೆ ವೇಳೆ ಗ್ರಾಮಸ್ಥರ ಆತಂಕ ಏನು?
ಆಯೇಷಾ ಬಾನು
| Edited By: |

Updated on:Jun 29, 2020 | 11:13 AM

Share

ಹುಬ್ಬಳ್ಳಿ: ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟಾಗಿದೆ. ಕೊರೊನಾ ರಿಪೋರ್ಟ್ ಬರೋ ಮುನ್ನವೇ ಸೋಂಕಿತ ವೃದ್ಧನ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಇಡೀ ಊರಿನ ಜನರು ಭಾಗಿಯಾಗಿದ್ದಾರೆ. ಈಗ ಊರಿಗೆ ಊರೇ ಕಂಗಾಲಾಗಿದೆ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ 73 ವರ್ಷದ ವೃದ್ಧ ಜೂನ್ 22ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ವೃದ್ಧನ ಗಂಟಲು ದ್ರವ ತೆಗೆದುಕೊಂಡು ಕೊರೊನಾ ಪರೀಕ್ಷೆಗೆ ಕಳುಹಿಸಿದ್ದರು. ಆದರೆ ಅನಾರೋಗ್ಯದಿಂದ ಜೂನ್ 24ರಂದು ವೃದ್ಧ ಮೃತಪಟ್ಟಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ವೃದ್ಧನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.

ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿರುವ ಬಗ್ಗೆ ಮಾಹಿತಿ ನೀಡಿಲ್ಲ. ಕೊರೊನಾ ಬಗ್ಗೆ ಯೋಚಿಸದೆ ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಊರಿನ ಜನ ಸೇರಿದಂತೆ ಅನೇಕ ಮಂದಿ ಭಾಗಿಯಾಗಿದ್ದರು. ಶನಿವಾರ ಸೋಂಕಿತರ ಪಟ್ಟಿ ಬಿಡುಗಡೆಯಾದಾಗ ವರದಿಯಲ್ಲಿ ಮೃತ ವೃದ್ಧನಿಗೆ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ರೋಗಿ ನಂಬರ್ 11406 ಎಂದು ವೃದ್ಧನನ್ನ ಗುರುತಿಸಲಾಗಿದೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಸಾಕಷ್ಟು ಜನರು ಭಾಗಿಯಾಗಿದ್ರು. ಕಿಮ್ಸ್ ವೈದ್ಯರ ಎಡವಟ್ಟಿನಿಂದ ಗ್ರಾಮಸ್ಥರಿಗೆಲ್ಲಾ ಕೊರೊನಾ ಭೀತಿ ಶುರುವಾಗಿದೆ.

Published On - 10:47 am, Mon, 29 June 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್