AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಾಧಿಕಾರಿಯ ತಾರತಮ್ಯದ ವಿರುದ್ಧ ಸಿಡಿದೆದ್ದ KIMS ಸಿಬ್ಬಂದಿ

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೊಂದಾಗಿರುವ ಕಿಮ್ಸ್​ನ ನರ್ಸ್, ಆಯಾ ಮತ್ತು ವಾರ್ಡ್​ ಬಾಯ್​ಗಳು ಆಸ್ಪತ್ರೆಯ ಆಡಳಿತಾತ್ಮಕ ವೈದ್ಯಾಧಿಕಾರಿ ಡಾ. ವಿನೋದ್ ಅವರ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ ನಡೆಸಿದರು. ತಮ್ಮ ಕೆಲಸವನ್ನು ನಿಲ್ಲಿಸಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಗೆ ಕುಳಿತ ಸಿಬ್ಬಂದಿಯ ಆರೋಪವೇನೆಂದರೆ, ಕೊರೊನಾ ವಾರ್ಡ್​ಗಳಲ್ಲಿ ಬಹಳಷ್ಟು ನರ್ಸ್ ಮತ್ತು ವಾರ್ಡ್​ ಬಾಯ್​ಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೊದಲಿದ್ದ ಒಂದು ವಾರ ಕೆಲಸ-ಒಂದು ವಾರ ಕ್ವಾರಂಟೈನ್ ವ್ಯವಸ್ಥೆಯನ್ನು ಡಾ. ವಿನೋದ್ ರದ್ದು ಮಾಡಿ ಬಿಡುವಿಲ್ಲದಂತೆ ದುಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಐವರು ನರ್ಸ್​ಗಳು […]

ವೈದ್ಯಾಧಿಕಾರಿಯ ತಾರತಮ್ಯದ ವಿರುದ್ಧ ಸಿಡಿದೆದ್ದ KIMS ಸಿಬ್ಬಂದಿ
KUSHAL V
| Edited By: |

Updated on:Jul 31, 2020 | 12:18 AM

Share

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೊಂದಾಗಿರುವ ಕಿಮ್ಸ್​ನ ನರ್ಸ್, ಆಯಾ ಮತ್ತು ವಾರ್ಡ್​ ಬಾಯ್​ಗಳು ಆಸ್ಪತ್ರೆಯ ಆಡಳಿತಾತ್ಮಕ ವೈದ್ಯಾಧಿಕಾರಿ ಡಾ. ವಿನೋದ್ ಅವರ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ ನಡೆಸಿದರು.

ತಮ್ಮ ಕೆಲಸವನ್ನು ನಿಲ್ಲಿಸಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಗೆ ಕುಳಿತ ಸಿಬ್ಬಂದಿಯ ಆರೋಪವೇನೆಂದರೆ, ಕೊರೊನಾ ವಾರ್ಡ್​ಗಳಲ್ಲಿ ಬಹಳಷ್ಟು ನರ್ಸ್ ಮತ್ತು ವಾರ್ಡ್​ ಬಾಯ್​ಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೊದಲಿದ್ದ ಒಂದು ವಾರ ಕೆಲಸ-ಒಂದು ವಾರ ಕ್ವಾರಂಟೈನ್ ವ್ಯವಸ್ಥೆಯನ್ನು ಡಾ. ವಿನೋದ್ ರದ್ದು ಮಾಡಿ ಬಿಡುವಿಲ್ಲದಂತೆ ದುಡಿಸಿಕೊಳ್ಳುತ್ತಿದ್ದಾರೆ.

ಇದರಿಂದಾಗಿ ಐವರು ನರ್ಸ್​ಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಡ್ಯೂಟಿ ಅವಧಿ ಮೀರಿ ಕೆಲಸ ಮಾಡುವಂತೆ ವಿನೋದ್ ಒತ್ತಡ ಹೇರುತ್ತಿದ್ದಾರೆ ಎಂದು ಪ್ರತಿಭಟನಾನಿರತ ಸಿಬ್ಬಂದಿ ಆರೋಪಿಸಿದರು. ಇದಲ್ಲದೆ, PPE ಕಿಟ್ ಹಂಚುವುದರಲ್ಲೂ ಡಾ. ವಿನೋದ್ ತಾರತಮ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿದ ನರ್ಸ್​ಗಳು ತಮಗೆ ನ್ಯಾಯ ಒದಗಿಸುವ ಭರವಸೆ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದರು.

Published On - 5:33 pm, Wed, 29 July 20

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ