AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಾಧಿಕಾರಿಯ ತಾರತಮ್ಯದ ವಿರುದ್ಧ ಸಿಡಿದೆದ್ದ KIMS ಸಿಬ್ಬಂದಿ

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೊಂದಾಗಿರುವ ಕಿಮ್ಸ್​ನ ನರ್ಸ್, ಆಯಾ ಮತ್ತು ವಾರ್ಡ್​ ಬಾಯ್​ಗಳು ಆಸ್ಪತ್ರೆಯ ಆಡಳಿತಾತ್ಮಕ ವೈದ್ಯಾಧಿಕಾರಿ ಡಾ. ವಿನೋದ್ ಅವರ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ ನಡೆಸಿದರು. ತಮ್ಮ ಕೆಲಸವನ್ನು ನಿಲ್ಲಿಸಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಗೆ ಕುಳಿತ ಸಿಬ್ಬಂದಿಯ ಆರೋಪವೇನೆಂದರೆ, ಕೊರೊನಾ ವಾರ್ಡ್​ಗಳಲ್ಲಿ ಬಹಳಷ್ಟು ನರ್ಸ್ ಮತ್ತು ವಾರ್ಡ್​ ಬಾಯ್​ಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೊದಲಿದ್ದ ಒಂದು ವಾರ ಕೆಲಸ-ಒಂದು ವಾರ ಕ್ವಾರಂಟೈನ್ ವ್ಯವಸ್ಥೆಯನ್ನು ಡಾ. ವಿನೋದ್ ರದ್ದು ಮಾಡಿ ಬಿಡುವಿಲ್ಲದಂತೆ ದುಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಐವರು ನರ್ಸ್​ಗಳು […]

ವೈದ್ಯಾಧಿಕಾರಿಯ ತಾರತಮ್ಯದ ವಿರುದ್ಧ ಸಿಡಿದೆದ್ದ KIMS ಸಿಬ್ಬಂದಿ
KUSHAL V
| Edited By: |

Updated on:Jul 31, 2020 | 12:18 AM

Share

ಬೆಂಗಳೂರು: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೊಂದಾಗಿರುವ ಕಿಮ್ಸ್​ನ ನರ್ಸ್, ಆಯಾ ಮತ್ತು ವಾರ್ಡ್​ ಬಾಯ್​ಗಳು ಆಸ್ಪತ್ರೆಯ ಆಡಳಿತಾತ್ಮಕ ವೈದ್ಯಾಧಿಕಾರಿ ಡಾ. ವಿನೋದ್ ಅವರ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ ನಡೆಸಿದರು.

ತಮ್ಮ ಕೆಲಸವನ್ನು ನಿಲ್ಲಿಸಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಗೆ ಕುಳಿತ ಸಿಬ್ಬಂದಿಯ ಆರೋಪವೇನೆಂದರೆ, ಕೊರೊನಾ ವಾರ್ಡ್​ಗಳಲ್ಲಿ ಬಹಳಷ್ಟು ನರ್ಸ್ ಮತ್ತು ವಾರ್ಡ್​ ಬಾಯ್​ಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೊದಲಿದ್ದ ಒಂದು ವಾರ ಕೆಲಸ-ಒಂದು ವಾರ ಕ್ವಾರಂಟೈನ್ ವ್ಯವಸ್ಥೆಯನ್ನು ಡಾ. ವಿನೋದ್ ರದ್ದು ಮಾಡಿ ಬಿಡುವಿಲ್ಲದಂತೆ ದುಡಿಸಿಕೊಳ್ಳುತ್ತಿದ್ದಾರೆ.

ಇದರಿಂದಾಗಿ ಐವರು ನರ್ಸ್​ಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಡ್ಯೂಟಿ ಅವಧಿ ಮೀರಿ ಕೆಲಸ ಮಾಡುವಂತೆ ವಿನೋದ್ ಒತ್ತಡ ಹೇರುತ್ತಿದ್ದಾರೆ ಎಂದು ಪ್ರತಿಭಟನಾನಿರತ ಸಿಬ್ಬಂದಿ ಆರೋಪಿಸಿದರು. ಇದಲ್ಲದೆ, PPE ಕಿಟ್ ಹಂಚುವುದರಲ್ಲೂ ಡಾ. ವಿನೋದ್ ತಾರತಮ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿದ ನರ್ಸ್​ಗಳು ತಮಗೆ ನ್ಯಾಯ ಒದಗಿಸುವ ಭರವಸೆ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದರು.

Published On - 5:33 pm, Wed, 29 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!