15 ದಿನಗಳಿಂದ ಕಾಫಿ ತೋಟಕ್ಕೆ ಬರುತ್ತಿದ್ದ ಕಿಂಗ್ ಕೋಬ್ರಾ ಕೊನೆಗೂ ಸೆರೆ!

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ತೆಕ್ಕೂರು ಗ್ರಾಮದಲ್ಲಿ ಬೃಹತ್ ಗಾತ್ರದ ಕಿಂಗ್ ಕೋಬ್ರಾ ಕಾಣಿಸಿಕೊಂಡಿದೆ. ಮಹೇಶ್ ಎಂಬವರ ಕಾಫಿ ತೋಟದಲ್ಲಿ ಕಿಂಗ್ ಕೋಬ್ರಾ ಪತ್ತೆಯಾಗಿದ್ದು, ಕಾಳಿಂಗ ಸರ್ಪವನ್ನು ಕಂಡು ಅಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಕಳೆದ 15ದಿನಗಳಿಂದ ಕಾಫಿ ತೋಟಕ್ಕೆ ಕಾಳಿಂಗ ಸರ್ಪ ಬರುತ್ತಿತ್ತು. ಕಾಳಿಂಗ ಸರ್ಪವನ್ನು ಕಂಡು ಕಾರ್ಮಿಕರು ಭಯಭೀತರಾಗಿದ್ದರು. ಹೀಗಾಗಿ ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಬಳಿಕ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಅರಣ್ಯಕ್ಕೆ ಬಿಟ್ಟಿದ್ದಾರೆ.

15 ದಿನಗಳಿಂದ ಕಾಫಿ ತೋಟಕ್ಕೆ ಬರುತ್ತಿದ್ದ ಕಿಂಗ್ ಕೋಬ್ರಾ ಕೊನೆಗೂ ಸೆರೆ!

Updated on: Feb 18, 2020 | 2:40 PM

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ತೆಕ್ಕೂರು ಗ್ರಾಮದಲ್ಲಿ ಬೃಹತ್ ಗಾತ್ರದ ಕಿಂಗ್ ಕೋಬ್ರಾ ಕಾಣಿಸಿಕೊಂಡಿದೆ. ಮಹೇಶ್ ಎಂಬವರ ಕಾಫಿ ತೋಟದಲ್ಲಿ ಕಿಂಗ್ ಕೋಬ್ರಾ ಪತ್ತೆಯಾಗಿದ್ದು, ಕಾಳಿಂಗ ಸರ್ಪವನ್ನು ಕಂಡು ಅಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.

ಕಳೆದ 15ದಿನಗಳಿಂದ ಕಾಫಿ ತೋಟಕ್ಕೆ ಕಾಳಿಂಗ ಸರ್ಪ ಬರುತ್ತಿತ್ತು. ಕಾಳಿಂಗ ಸರ್ಪವನ್ನು ಕಂಡು ಕಾರ್ಮಿಕರು ಭಯಭೀತರಾಗಿದ್ದರು. ಹೀಗಾಗಿ ಉರಗ ಪ್ರೇಮಿ ಸ್ನೇಕ್ ಅರ್ಜುನ್ ಎಂಬುವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಬಳಿಕ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಅರಣ್ಯಕ್ಕೆ ಬಿಟ್ಟಿದ್ದಾರೆ.




Published On - 2:08 pm, Tue, 18 February 20