ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ […]

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?
ಸಾಧು ಶ್ರೀನಾಥ್​

Updated on: Jan 16, 2020 | 2:35 PM

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಸಾದಕ ಬಾಧಕಗಳ ಚರ್ಚೆ ಬಳಿಕ ದರ ಪ್ರಕಟ ಮಾಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಕೆಎಂಎಫ್ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಖಾಸಗಿ ಅವರ ಹಾಲಿನಿ ದರಕ್ಕೂ ನಂದಿನ ಹಾಲಿನ ದರಕ್ಕೂ ಭಾರಿ ವ್ಯತ್ಯಾಸವಿದೆ. ಇದರಿಂದ ಕಳೆದ ಮೂರು ವರ್ಷಗಳಿಂದ ಹಾಲಿನ ದರದಲ್ಲಿ ಹೆಚ್ಚಳ ಮಾಡಿಲ್ಲ ಹಾಗಾಗಿ ಈ ಬಾರಿ ಹೆಚ್ಚಳ ಮಾಡುವುದು ಬಹುತೇಕ ಖಚಿತ ಎಂದು ದರ ಹೆಚ್ಚಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us