AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರ ಯೋಧನ ಅಂತಿಮ ಆಸೆಗೂ ಬೆಂಕಿ ಇಟ್ಟ ಕ್ರೂರಿ ಕೊರೊನಾ

ಕೊಡಗು: ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬದುಕಿರುವ ಹಲವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಕೊರೊನಾ ಅಟ್ಟಹಾಸಕ್ಕೆ ಜನರು ತಮ್ಮ ಬದುಕಿನ ಆಸೆಯನ್ನೇ ಕಳೆದುಕೊಂಡಿದ್ದಾರೆ. ಬದುಕಿದ್ದಾಗ ನೆಮ್ಮದಿಯಿಂದ ಇರಲು ಬಿಡದ ಕೊರೊನಾ ಇದೀಗ ಸತ್ತ ಮೇಲೂ ಜನರನ್ನ ಕಾಡಲು ಶುರು ಮಾಡಿದೆ. ಚೀನಾ, ಪಾಕ್​ ಯುದ್ಧದಲ್ಲಿ ಭಾಗಿಯಾಗಿದ್ದರು: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಒಂಟಿಯಂಗಡಿ ಗ್ರಾಮದ ನಿವಾಸಿ ಸೋಮೆಯಂಡ ಕಾರಿಯಪ್ಪನವರು 1962ರ ಚೀನಾ ಹಾಗೂ 1965ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾಗಿಯಾಗಿದ್ದರು. […]

ವೀರ ಯೋಧನ ಅಂತಿಮ ಆಸೆಗೂ ಬೆಂಕಿ ಇಟ್ಟ ಕ್ರೂರಿ ಕೊರೊನಾ
ಸಾಧು ಶ್ರೀನಾಥ್​
| Edited By: |

Updated on: Jun 26, 2020 | 4:52 PM

Share

ಕೊಡಗು: ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬದುಕಿರುವ ಹಲವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಕೊರೊನಾ ಅಟ್ಟಹಾಸಕ್ಕೆ ಜನರು ತಮ್ಮ ಬದುಕಿನ ಆಸೆಯನ್ನೇ ಕಳೆದುಕೊಂಡಿದ್ದಾರೆ. ಬದುಕಿದ್ದಾಗ ನೆಮ್ಮದಿಯಿಂದ ಇರಲು ಬಿಡದ ಕೊರೊನಾ ಇದೀಗ ಸತ್ತ ಮೇಲೂ ಜನರನ್ನ ಕಾಡಲು ಶುರು ಮಾಡಿದೆ.

ಚೀನಾ, ಪಾಕ್​ ಯುದ್ಧದಲ್ಲಿ ಭಾಗಿಯಾಗಿದ್ದರು: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಒಂಟಿಯಂಗಡಿ ಗ್ರಾಮದ ನಿವಾಸಿ ಸೋಮೆಯಂಡ ಕಾರಿಯಪ್ಪನವರು 1962ರ ಚೀನಾ ಹಾಗೂ 1965ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾಗಿಯಾಗಿದ್ದರು. ಸೇನೆಯಿಂದ ನಿವೃತ್ತಿ ಹೊಂದಿದ ಬಳಿಕ ಕೆಲ ವರ್ಷ ಮಹಾರಾಷ್ಟ್ರದ ಪುಣೆಯ ಟೆಲ್ಕೋ ಸಂಸ್ಥೆಯಲ್ಲಿ ಸೆಕ್ಯುರಿಟಿ ಇಂಚಾರ್ಜ್ ಆಗಿ ಕಾರ್ಯ ನಿರ್ವಹಿಸಿದರು. ನಂತರ ಅವರು ತಮ್ಮ ಪತ್ನಿಯೊಂದಿಗೆ ಸ್ವಗ್ರಾಮವಾದ ಒಂಟಿಯಂಗಡಿಯಲ್ಲಿ ನೆಲಸಿದ್ದರು.

ದೇಹವನ್ನು ದಾನ ಮಾಡಲು ಬಯಸಿದ್ದರು: ಕೆಲ ವರ್ಷಗಳ ಹಿಂದೆ ತಮ್ಮ ಪತ್ನಿಯನ್ನು ಕಳೆದುಕೊಂಡರು. ಸರಳ ವ್ಯಕ್ತಿತ್ವದ ಕಾರಿಯಪ್ಪನವರು ತಮ್ಮ ಮರಣದ ನಂತರ ಅವರ ದೇಹವನ್ನು ಸುಟ್ಟು ಬೂದಿ ಮಾಡುವ ಬದಲು ವೈದ್ಯಕೀಯ ವಿದ್ಯಾರ್ಥಿಗಳ ಸಂಶೋಧನೆಗೆ ಬಳಸಿಕೊಳ್ಳಲು ಇಚ್ಛಿಸಿದ್ದರು. ಅದರಂತೆ ಕಾರಿಯಪ್ಪನವರು ಮರಣದ ನಂತರ ತಮ್ಮ ದೇಹವನ್ನು ಮೈಸೂರಿನ ಖಾಸಗಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲು ಬಯಸಿದ್ದರು. ಸುಮಾರು 15 ವರ್ಷಗಳ ಹಿಂದೆಯೇ ತಮ್ಮ ಸ್ವ-ಇಚ್ಛೆಯಿಂದ ಕಾಲೇಜಿಗೆ ಒಪ್ಪಿಗೆ ಪತ್ರ ಬರೆದುಕೊಟ್ಟು ಸಾರ್ಥಕತೆ ಮೆರೆದಿದ್ದರು.

ಆದರೆ, ಕೇವಲ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಕಾರಿಯಪ್ಪನವರಿಗೆ ದೂರವಾಣಿ ಕರೆ ಮಾಡಿದ್ದರು. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್​ ಕೊರತೆ ಇದೆ. ಮತ್ತು ಕೊರೊನಾ ಹರಡುವ ಭೀತಿಯಿಂದ ಮರಣದ ಬಳಿಕ ತಮ್ಮ ದೇಹವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಜೊತೆಗೆ, ತಮ್ಮ ಮರಣದ ನಂತರ ದೇಹದ ಅಂತ್ಯಕ್ರಿಯೆಯನ್ನು ನೆರವೇರಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಕೂಡ ಸೂಚಿಸಿದರು.

ಕೊಡವ ಸಂಪ್ರದಾಯದಂತೆ ಅಂತ್ಯಕ್ರಿಯೆ: ದುರಾದೃಷ್ಟವಶಾತ್ 90ವರ್ಷದ ಕಾರಿಯಪ್ಪನವರು ಜೂನ್ 24ರ ಮುಂಜಾನೆ ವಯೋಸಹಜ ಕಾಯಿಲೆಯಿಂದ ಮರಣ ಹೊಂದಿದರು. ಮೃತರ ಅಂತ್ಯಕ್ರಿಯೆನ್ನು ಕುಟುಂಬದವರು ಕೊಡವ ಸಂಪ್ರದಾಯದಂತೆ ಚಿತೆಗೆ ಬೆಂಕಿ ಹಚ್ಚುವ ಮೂಲಕ ತಮ್ಮ ತೋಟದಲ್ಲಿಯೇ ನೆರವೇರಿಸಿದರು. ಜೀವಿತಾವಧಿಯಲ್ಲಿ ಏನನ್ನೂ ಬಯಸದ ಹಿರಿಯ ಸೇನಾನಿಯ ಕೊನೆಯ ಆಸೆಯೂ ಈಡೇರಲಿಲ್ಲ. ಒಟ್ಟಿನಲ್ಲಿ, ಮರಣದ ಬಳಿಕ ತಮ್ಮ ದೇಹವನ್ನು ಉನ್ನತ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎನ್ನುವ ಕೊನೆಯ ಆಸೆಯನ್ನು ಕೂಡಾ ಕೊರೊನಾ ಕಿತ್ತುಕೊಂಡಿದೆ ಎನ್ನುವುದೇ ದುಃಖದ ಸಂಗತಿ. -ಸುರೇಶ್ ಬಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು