AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಇನ್ನೂ ಹೆಚ್ಚಾಗಲಿದೆ: ಕೋಲಾರದಲ್ಲಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ

ಕೊರೊನಾ ಇನ್ನೂ ಹೆಚ್ಚಾಗಲಿದೆ. ಆದಾಗ್ಯೂ ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಭವಿಷ್ಯ ಹೇಳಿದ್ದಾರೆ.

ಕೊರೊನಾ ಇನ್ನೂ ಹೆಚ್ಚಾಗಲಿದೆ: ಕೋಲಾರದಲ್ಲಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ
ಕೊರೊನಾ ಇನ್ನೂ ಹೆಚ್ಚಾಗಲಿದೆ: ಕೋಲಾರದಲ್ಲಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ
TV9 Web
| Edited By: ಸಾಧು ಶ್ರೀನಾಥ್​|

Updated on:Jul 30, 2021 | 3:10 PM

Share

ಕೋಲಾರ: ಅರಸೀಕೆರೆ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾತರ ಇದೆ. ಕೊರೊನಾ ಇನ್ನೂ ಹೆಚ್ಚಾಗಲಿದೆ. ಆದಾಗ್ಯೂ ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಭವಿಷ್ಯ ಹೇಳಿದ್ದಾರೆ.

ಅಶುಭ ನುಡಿಗಳು ಈಗ ಬೇಡ. ಕುಂಭದಲ್ಲಿ ಗುರುಗ್ರಹ ಅಂದ್ರೆ ತುಂಬುವವು ಕೆರೆ ಕಟ್ಟೆ. ಜಲಗಂಡಾಂತರ ಇನ್ನೂ ಇದೆ. ನೂತನ‌ ಸಿಎಂ ಬಗ್ಗೆ ಈಗಲೇ ಏನನ್ನು ಹೇಳಬಾರದು. ಏನನ್ನು ಅಶುಭ ನುಡಿಯಬಾರದು. ಕಾರ್ತಿಕ ಮಾಸ ಕಳೆದ ನಂತರ ಹೇಳುತ್ತೇನೆ ಎಂದು ಕೋಲಾರ ತಾಲ್ಲೂಕು ಲಕ್ಷ್ಮೀಸಾಗರ ಗ್ರಾಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಮಾರ್ಮಿಕವಾಗಿ ಹೇಳಿದ್ದಾರೆ.

ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಕಾರವಾರದಲ್ಲಿ ಈ ಹಿಂದೆ ನುಡಿದಿದ್ದ ಭವಿಷ್ಯ ಹೀಗಿತ್ತು: ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ ಎಂದು ಕರ್ನಾಟಕ ರಾಜಕೀಯ (Karnataka Politics) ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.  ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ ಓಡಿಹೋಗಿತ್ತು. ಸನ್ಯಾಸಿಯೊಬ್ಬನ ಎದುರು ಹಾದು ಜಿಂಕೆ ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ದ್ವಂದ್ವ ಉಂಟಾಯಿತು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಉಂಟಾಯಿತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಸದ್ಯವೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದು ಶ್ರೀಗಳು ಹೇಳಿದ್ದರು.

ಸಂಕ್ರಾಂತಿಯ ಒಳಗೆ ಬಹುದೊಡ್ಡ ಅವಘಡ ಆಗಲಿದೆ. ಜಗತ್ತನ್ನು ತಲ್ಲಣಿಸುವ ಅವಘಡ ಆಗಲಿದೆ. ಆಗಸ್ಟ್ 3ನೇ ವಾರದಿಂದ ರೋಗ ರುಜಿನಗಳು ಹೆಚ್ಚಾಗಲಿವೆ. ಜನವರಿವರೆಗೂ ರೋಗ ರುಜಿನಗಳು ಹೀಗೆಯೇ ಇರಲಿವೆ. ಜನ ಭೀತಿಯಿಂದ ಸಾಯ್ತಿದ್ದಾರೆ ಹೊರತು ಕಾಯಿಲೆಯಿಂದಲ್ಲ ಎಂದೂ ಸಹ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆಗ ಭವಿಷ್ಯ ಹೇಳಿದ್ದರು. ನವೆಂಬರ್‌ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದೂ ಅವರು ನುಡಿದಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಚಾರ: ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಭವಿಷ್ಯ

(kodi mutt Seer sri shivananda Shivayogi Rajendra swamiji prediction in kolar coronavirus will increase)

Published On - 3:01 pm, Fri, 30 July 21

Follow Us
Web contact
Web contact

TV9 Kannada

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ