AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಸಿಬ್ಬಂದಿಯನ್ನ ಎತ್ತಿಕಟ್ಟೋದು ಅಂದ್ರೇನು? -‘ಗೌರವಾಧ್ಯಕ್ಷ’ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಶ್ನೆ

ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ. ಸಿಎಂ ಯಾವರ್ಥದಲ್ಲಿ ಪ್ರಕಟಣೆ ಹೊರಡಿಸಿದ್ದಾರೆಂದು ಹೇಳಲಿ ಎಂದು ಹೇಳಿದರು.

ಸಾರಿಗೆ ಸಿಬ್ಬಂದಿಯನ್ನ ಎತ್ತಿಕಟ್ಟೋದು ಅಂದ್ರೇನು? -‘ಗೌರವಾಧ್ಯಕ್ಷ’ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಶ್ನೆ
B.S.ಯಡಿಯೂರಪ್ಪ (ಎಡ); ಕೋಡಿಹಳ್ಳಿ ಚಂದ್ರಶೇಖರ್​ (ಬಲ)
KUSHAL V
| Edited By: |

Updated on:Dec 12, 2020 | 3:46 PM

Share

ಬೆಂಗಳೂರು: ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷರಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್‌ರನ್ನ ನೌಕರರು ಆಯ್ಕೆ ಮಾಡಿದ್ದಾರೆ. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್‌ರನ್ನ ಆಯ್ಕೆ ಮಾಡಿದ್ದಾರೆ.

ಈ ನಡುವೆ, ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ. ಸಿಎಂ ಯಾವರ್ಥದಲ್ಲಿ ಪ್ರಕಟಣೆ ಹೊರಡಿಸಿದ್ದಾರೆಂದು ಹೇಳಲಿ. 4 ನಿಗಮದ ಸಿಬ್ಬಂದಿ ಸ್ವಯಂಪ್ರೇರಿತವಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಯಾರನ್ನೂ ಬಲವಂತವಾಗಿ ಮುಷ್ಕರಕ್ಕೆ ಕರೆದುಕೊಂಡು ಬಂದಿಲ್ಲ. ಯಾರೊಬ್ಬರಿಗೂ ಕರಪತ್ರ ಕೊಟ್ಟು ಮುಷ್ಕರಕ್ಕೆ ಕರೆತಂದಿಲ್ಲ ಎಂದು ಹೇಳಿದರು.

ನಿಮ್ಮ ಮುಂದೆ ನೌಕರರು ಇಟ್ಟಿರುವ ವಾದ ಸಲ್ಲದ ವಾದವೇ? ಎಂದು ಸಿಎಂ ಬಿಎಸ್​ವೈಗೆ ಕೋಡಿಹಳ್ಳಿ ಚಂದ್ರಶೇಖರ್​ ನೇರ ಪ್ರಶ್ನೆ ಹಾಕಿದ್ದಾರೆ. ಜೊತೆಗೆ, ಮುಖ್ಯಮಂತ್ರಿಗಳು ಯಾವ ಅರ್ಥದಲ್ಲಿ ಪ್ರಸ್ತಾಪ ಮಾಡಿದರು. ಅವರು ನಿಮ್ಮ ಕಾರ್ಯಕರ್ತರೇ? ಎಂದು ಸಿಎಂ ಸ್ಪಷ್ಟ ಪಡಿಸಬೇಕು. ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಿಎಂ ಕಡೆಯಿಂದ ಬಂದಿರುವುದು ಹೊಸ ವಿಷಯ. ಇದನ್ನ ಕೂಡ ಈಗ ಚರ್ಚೆ ಮಾಡ್ತಿವಿ. ಪ್ರಾರಂಭದ ಮೊದಲ ದಿನದಿಂದ ಈ ಬಗ್ಗೆ ಮಾತಾಡಿದ್ದೀವಿ. ಸಚಿವರು ಬಂದು ಮನವಿ ಪಡೆದಿಲ್ಲ. ನೀವು ಬಂದಿಲ್ಲವಾದರೂ ಬೇರೆ ಸಚಿವರನ್ನ ಕೂಡ ಕಳಿಸಿಲ್ಲ. ಸರ್ಕಾರ ಇದನ್ನ ಕನ್ಫ್ಯೂಸ್ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ. ಅವರು ಈವರೆಗೆ ನಮ್ಮನ್ನ ಕರೆದಿಲ್ಲ. ನಾವು ಎಲ್ಲಿ ಹೋಗಿ ಯಾರನ್ನ ಭೇಟಿಮಾಡಿ ಚರ್ಚೆ ಮಾಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕರೆ: ಮುಷ್ಕರ ಬಿಟ್ಟು ಕೆಲಸಕ್ಕೆ ಮರಳಿದ ನಂತರ ಮಾತುಕತೆ

Published On - 3:41 pm, Sat, 12 December 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?