AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಸಿಬ್ಬಂದಿಯನ್ನ ಎತ್ತಿಕಟ್ಟೋದು ಅಂದ್ರೇನು? -‘ಗೌರವಾಧ್ಯಕ್ಷ’ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಶ್ನೆ

ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ. ಸಿಎಂ ಯಾವರ್ಥದಲ್ಲಿ ಪ್ರಕಟಣೆ ಹೊರಡಿಸಿದ್ದಾರೆಂದು ಹೇಳಲಿ ಎಂದು ಹೇಳಿದರು.

ಸಾರಿಗೆ ಸಿಬ್ಬಂದಿಯನ್ನ ಎತ್ತಿಕಟ್ಟೋದು ಅಂದ್ರೇನು? -‘ಗೌರವಾಧ್ಯಕ್ಷ’ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಶ್ನೆ
B.S.ಯಡಿಯೂರಪ್ಪ (ಎಡ); ಕೋಡಿಹಳ್ಳಿ ಚಂದ್ರಶೇಖರ್​ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on:Dec 12, 2020 | 3:46 PM

Share

ಬೆಂಗಳೂರು: ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷರಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್‌ರನ್ನ ನೌಕರರು ಆಯ್ಕೆ ಮಾಡಿದ್ದಾರೆ. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್‌ರನ್ನ ಆಯ್ಕೆ ಮಾಡಿದ್ದಾರೆ.

ಈ ನಡುವೆ, ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ. ಸಿಎಂ ಯಾವರ್ಥದಲ್ಲಿ ಪ್ರಕಟಣೆ ಹೊರಡಿಸಿದ್ದಾರೆಂದು ಹೇಳಲಿ. 4 ನಿಗಮದ ಸಿಬ್ಬಂದಿ ಸ್ವಯಂಪ್ರೇರಿತವಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಯಾರನ್ನೂ ಬಲವಂತವಾಗಿ ಮುಷ್ಕರಕ್ಕೆ ಕರೆದುಕೊಂಡು ಬಂದಿಲ್ಲ. ಯಾರೊಬ್ಬರಿಗೂ ಕರಪತ್ರ ಕೊಟ್ಟು ಮುಷ್ಕರಕ್ಕೆ ಕರೆತಂದಿಲ್ಲ ಎಂದು ಹೇಳಿದರು.

ನಿಮ್ಮ ಮುಂದೆ ನೌಕರರು ಇಟ್ಟಿರುವ ವಾದ ಸಲ್ಲದ ವಾದವೇ? ಎಂದು ಸಿಎಂ ಬಿಎಸ್​ವೈಗೆ ಕೋಡಿಹಳ್ಳಿ ಚಂದ್ರಶೇಖರ್​ ನೇರ ಪ್ರಶ್ನೆ ಹಾಕಿದ್ದಾರೆ. ಜೊತೆಗೆ, ಮುಖ್ಯಮಂತ್ರಿಗಳು ಯಾವ ಅರ್ಥದಲ್ಲಿ ಪ್ರಸ್ತಾಪ ಮಾಡಿದರು. ಅವರು ನಿಮ್ಮ ಕಾರ್ಯಕರ್ತರೇ? ಎಂದು ಸಿಎಂ ಸ್ಪಷ್ಟ ಪಡಿಸಬೇಕು. ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಿಎಂ ಕಡೆಯಿಂದ ಬಂದಿರುವುದು ಹೊಸ ವಿಷಯ. ಇದನ್ನ ಕೂಡ ಈಗ ಚರ್ಚೆ ಮಾಡ್ತಿವಿ. ಪ್ರಾರಂಭದ ಮೊದಲ ದಿನದಿಂದ ಈ ಬಗ್ಗೆ ಮಾತಾಡಿದ್ದೀವಿ. ಸಚಿವರು ಬಂದು ಮನವಿ ಪಡೆದಿಲ್ಲ. ನೀವು ಬಂದಿಲ್ಲವಾದರೂ ಬೇರೆ ಸಚಿವರನ್ನ ಕೂಡ ಕಳಿಸಿಲ್ಲ. ಸರ್ಕಾರ ಇದನ್ನ ಕನ್ಫ್ಯೂಸ್ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ. ಅವರು ಈವರೆಗೆ ನಮ್ಮನ್ನ ಕರೆದಿಲ್ಲ. ನಾವು ಎಲ್ಲಿ ಹೋಗಿ ಯಾರನ್ನ ಭೇಟಿಮಾಡಿ ಚರ್ಚೆ ಮಾಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕರೆ: ಮುಷ್ಕರ ಬಿಟ್ಟು ಕೆಲಸಕ್ಕೆ ಮರಳಿದ ನಂತರ ಮಾತುಕತೆ

Published On - 3:41 pm, Sat, 12 December 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು