AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಸಿಬ್ಬಂದಿಯನ್ನ ಎತ್ತಿಕಟ್ಟೋದು ಅಂದ್ರೇನು? -‘ಗೌರವಾಧ್ಯಕ್ಷ’ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಶ್ನೆ

ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ. ಸಿಎಂ ಯಾವರ್ಥದಲ್ಲಿ ಪ್ರಕಟಣೆ ಹೊರಡಿಸಿದ್ದಾರೆಂದು ಹೇಳಲಿ ಎಂದು ಹೇಳಿದರು.

ಸಾರಿಗೆ ಸಿಬ್ಬಂದಿಯನ್ನ ಎತ್ತಿಕಟ್ಟೋದು ಅಂದ್ರೇನು? -‘ಗೌರವಾಧ್ಯಕ್ಷ’ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಶ್ನೆ
B.S.ಯಡಿಯೂರಪ್ಪ (ಎಡ); ಕೋಡಿಹಳ್ಳಿ ಚಂದ್ರಶೇಖರ್​ (ಬಲ)
KUSHAL V
| Updated By: ಸಾಧು ಶ್ರೀನಾಥ್​|

Updated on:Dec 12, 2020 | 3:46 PM

Share

ಬೆಂಗಳೂರು: ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷರಾಗಿ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್‌ರನ್ನ ನೌಕರರು ಆಯ್ಕೆ ಮಾಡಿದ್ದಾರೆ. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್‌ರನ್ನ ಆಯ್ಕೆ ಮಾಡಿದ್ದಾರೆ.

ಈ ನಡುವೆ, ಸಿಎಂ ಮಾಧ್ಯಮ ಪ್ರಕಟಣೆಗೆ ಚಂದ್ರಶೇಖರ್​ ತಿರುಗೇಟು ಕೊಟ್ಟಿದ್ದು ಸಾರಿಗೆ ಸಿಬ್ಬಂದಿ ಎತ್ತಿಕಟ್ಟುವುದು ಅಂದ್ರೇನು? ಎಂದು ಸಿಎಂಗೆ ನೇರ ಪ್ರಶ್ನೆ ಹಾಕಿದ್ದಾರೆ. ಸಿಎಂ ಯಾವರ್ಥದಲ್ಲಿ ಪ್ರಕಟಣೆ ಹೊರಡಿಸಿದ್ದಾರೆಂದು ಹೇಳಲಿ. 4 ನಿಗಮದ ಸಿಬ್ಬಂದಿ ಸ್ವಯಂಪ್ರೇರಿತವಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಯಾರನ್ನೂ ಬಲವಂತವಾಗಿ ಮುಷ್ಕರಕ್ಕೆ ಕರೆದುಕೊಂಡು ಬಂದಿಲ್ಲ. ಯಾರೊಬ್ಬರಿಗೂ ಕರಪತ್ರ ಕೊಟ್ಟು ಮುಷ್ಕರಕ್ಕೆ ಕರೆತಂದಿಲ್ಲ ಎಂದು ಹೇಳಿದರು.

ನಿಮ್ಮ ಮುಂದೆ ನೌಕರರು ಇಟ್ಟಿರುವ ವಾದ ಸಲ್ಲದ ವಾದವೇ? ಎಂದು ಸಿಎಂ ಬಿಎಸ್​ವೈಗೆ ಕೋಡಿಹಳ್ಳಿ ಚಂದ್ರಶೇಖರ್​ ನೇರ ಪ್ರಶ್ನೆ ಹಾಕಿದ್ದಾರೆ. ಜೊತೆಗೆ, ಮುಖ್ಯಮಂತ್ರಿಗಳು ಯಾವ ಅರ್ಥದಲ್ಲಿ ಪ್ರಸ್ತಾಪ ಮಾಡಿದರು. ಅವರು ನಿಮ್ಮ ಕಾರ್ಯಕರ್ತರೇ? ಎಂದು ಸಿಎಂ ಸ್ಪಷ್ಟ ಪಡಿಸಬೇಕು. ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಿಎಂ ಕಡೆಯಿಂದ ಬಂದಿರುವುದು ಹೊಸ ವಿಷಯ. ಇದನ್ನ ಕೂಡ ಈಗ ಚರ್ಚೆ ಮಾಡ್ತಿವಿ. ಪ್ರಾರಂಭದ ಮೊದಲ ದಿನದಿಂದ ಈ ಬಗ್ಗೆ ಮಾತಾಡಿದ್ದೀವಿ. ಸಚಿವರು ಬಂದು ಮನವಿ ಪಡೆದಿಲ್ಲ. ನೀವು ಬಂದಿಲ್ಲವಾದರೂ ಬೇರೆ ಸಚಿವರನ್ನ ಕೂಡ ಕಳಿಸಿಲ್ಲ. ಸರ್ಕಾರ ಇದನ್ನ ಕನ್ಫ್ಯೂಸ್ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ. ಅವರು ಈವರೆಗೆ ನಮ್ಮನ್ನ ಕರೆದಿಲ್ಲ. ನಾವು ಎಲ್ಲಿ ಹೋಗಿ ಯಾರನ್ನ ಭೇಟಿಮಾಡಿ ಚರ್ಚೆ ಮಾಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕರೆ: ಮುಷ್ಕರ ಬಿಟ್ಟು ಕೆಲಸಕ್ಕೆ ಮರಳಿದ ನಂತರ ಮಾತುಕತೆ

Published On - 3:41 pm, Sat, 12 December 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!