AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ […]

ಕೊರೊನಾ ಹಳೇ ರೋಗ.. ಮುಂದೆ ಗಾಳಿಯಿಂದ ಮತ್ತೊಂದು ರೋಗ ಬರಲಿದೆ -ಕೋಡಿಹಳ್ಳಿ ಶ್ರೀ ಭವಿಷ್ಯ
KUSHAL V
|

Updated on: Nov 23, 2020 | 1:58 PM

Share

ದಾವಣಗೆರೆ: ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ನಗರದಲ್ಲಿ ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಕೊರೊನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದರು. ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ ಈ ರೋಗ ಹೆಚ್ಚಾಗಲಿದೆ. ಆಷಾಢ ಮತ್ತು ಕಾರ್ತೀಕ ಮಾಸದಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವುದು ಎಂದು ಶ್ರೀಗಳು ಭವಿಷ್ಯ ನುಡಿದರು.

ಶ್ರೀಮಂತ ಮಣಿಪುರದ ರಾಜನಿಗೆ ಮಗ ಹುಟ್ಟಿ ಸಮುದ್ರ ರಾಜ್ಯಭಾರ ಮಾಡುತ್ತಿದ್ದರೇ, ಯುದ್ಧವಿಲ್ಲದೆ ಸಾಮ್ರಾಜ್ಯ ಸರ್ವನಾಶವಾದಿತು ನೋಡಾ ಎಂದ ಸ್ವಾಮೀಜಿ ಯಾವುದೇ ಯುದ್ಧಗಳಿಲ್ಲದೆ ಸಮಾಜ ಸರ್ವನಾಶವಾಗುವ ಕಾಲವಿದು ಎಂದು ಸ್ವಾಮೀಜಿ ಭವಿಷ್ಯ ನುಡಿದರು.

‘ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ’ ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ. ಇದಕ್ಕೆ ಬರುವ ಜನವರಿವರೆಗೆ ಸಮಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯವಾಣಿ ನುಡಿದಿದ್ದಾರೆ. ಪರೋಕ್ಷವಾಗಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದ ಸ್ವಾಮೀಜಿ ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಇದೇ ರೀತಿ ನಮ್ಮ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ವಿಪ್ಲವ ಆಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದರು. ಸಿಎಂ ಬಿಎಸ್​ವೈ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಶ್ರೀಗಳು ಉತ್ತರಿಸಿದರು.

Follow Us
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ