ಉಗ್ರರ ಫೈರಿಂಗ್‌: ಕೋಲಾರದ ಯುವಯೋಧ ಪ್ರಶಾಂತ್ ಹುತಾತ್ಮ

ಕೋಲಾರ: ಉಗ್ರರ ಜೊತೆಗಿನ ಫೈರಿಂಗ್‌ನಲ್ಲಿ ರಾಜ್ಯದ ಯೋಧ ಹುತಾತ್ಮರಾಗಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಕಣಿಂಬೆಲೆ ಗ್ರಾಮದ ಪ್ರಶಾಂತ್(25) ನಿನ್ನೆ ಸಂಜೆ ಜಮ್ಮು- ಕಾಶ್ಮೀರದಲ್ಲಿ ಉಗ್ರವಾದಿಗಳ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧ ಪ್ರಶಾಂತ್ ಸೆವೆಂಟೀನ್ ಮದ್ರಾಸ್ ರೆಜಿಮೆಂಟ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ಸಂಜೆ ಜಮ್ಮು- ಕಾಶ್ಮೀರದಲ್ಲಿ ಉಗ್ರರ ಜೊತೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಉಗ್ರರ ಗುಂಡಿಗೆ ಯೋಧ ಪ್ರಶಾಂತ್ ಹುತಾತ್ಮರಾಗಿದ್ದಾರೆ. ಇಗಾಗಲೇ ತಂದೆಯನ್ನು ಕಳೆದುಕೊಂಡಿರುವ ಯೋಧ ಪ್ರಾಶಂತ್ ಮನೆಯವರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ನಾಳೆ ಬಂಗಾರಪೇಟೆಯ […]

ಉಗ್ರರ ಫೈರಿಂಗ್‌: ಕೋಲಾರದ ಯುವಯೋಧ ಪ್ರಶಾಂತ್ ಹುತಾತ್ಮ
ಸಾಧು ಶ್ರೀನಾಥ್​

Updated on: Feb 27, 2020 | 12:00 PM

ಕೋಲಾರ: ಉಗ್ರರ ಜೊತೆಗಿನ ಫೈರಿಂಗ್‌ನಲ್ಲಿ ರಾಜ್ಯದ ಯೋಧ ಹುತಾತ್ಮರಾಗಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಕಣಿಂಬೆಲೆ ಗ್ರಾಮದ ಪ್ರಶಾಂತ್(25) ನಿನ್ನೆ ಸಂಜೆ ಜಮ್ಮು- ಕಾಶ್ಮೀರದಲ್ಲಿ ಉಗ್ರವಾದಿಗಳ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧ ಪ್ರಶಾಂತ್ ಸೆವೆಂಟೀನ್ ಮದ್ರಾಸ್ ರೆಜಿಮೆಂಟ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ಸಂಜೆ ಜಮ್ಮು- ಕಾಶ್ಮೀರದಲ್ಲಿ ಉಗ್ರರ ಜೊತೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ಉಗ್ರರ ಗುಂಡಿಗೆ ಯೋಧ ಪ್ರಶಾಂತ್ ಹುತಾತ್ಮರಾಗಿದ್ದಾರೆ. ಇಗಾಗಲೇ ತಂದೆಯನ್ನು ಕಳೆದುಕೊಂಡಿರುವ ಯೋಧ ಪ್ರಾಶಂತ್ ಮನೆಯವರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ.

ನಾಳೆ ಬಂಗಾರಪೇಟೆಯ ಸ್ವಗ್ರಾಮ ಕಣಿಂಬೆಲೆಗೆ ಹುತಾತ್ಮ ಯೋಧನ ಪಾರ್ಥಿವ ಶರೀರವನ್ನು ಸರ್ಕಾರಿ ಗೌರವಗಳ ಮೂಲಕ ಕಳಿಸುವಂತೆ ಸೇನೆಯಿಂದ ಸಂದೇಶ ರವಾನೆಯಾಗಿದೆ.

Published On - 11:55 am, Thu, 27 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us