AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ

ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 12, 2021 | 9:40 PM

ಭಾರತದಲ್ಲಿ ಟ್ವಿಟರ್​ಗೆ ಬದಲಿಯಾಗಿ ಕೂ ಆ್ಯಪ್​ ಬಳಕೆ ಆರಂಭವಾಗಿದೆ. ಕೇಂದ್ರ ಸರ್ಕಾರ ಹಾಗೂ ಟ್ವಿಟರ್​ ನಡುವಣ ಸಂಘರ್ಷದಿಂದ ಕೂ ಆ್ಯಪ್​ನ ಜನಪ್ರಿಯತೆ ಹೆಚ್ಚಿದೆ. ಅಷ್ಟೇ ಅಲ್ಲ, ಕೇಂದ್ರ ಸರ್ಕಾರವೇ ಕೂಗೆ ಆದ್ಯತೆ ನೀಡುತ್ತಿದೆ. ಈ ಮಧ್ಯೆ, ಕೂ ಆ್ಯಪ್​​ನಲ್ಲಿರುವ ಮಾಹಿತಿಯನ್ನು ಸುಲಭವಾಗಿ ಹ್ಯಾಕ್​ ಮಾಡಬಹುದು ಎಂದು ಹ್ಯಾಕರ್ಸ್​ಗಳು ಹೇಳಿದ್ದಾರೆ. ಇದಕ್ಕೆ ಕೂ ಆ್ಯಪ್​ನವರು ಸರಿಯಾದ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

ಮಾನಿಕರ್ ಎಲಿಯಟ್ ಆಲ್ಡರ್ಸನ್ ಎಂದು ಕರೆಯಲ್ಪಡುವ ಫ್ರೆಂಚ್​ ಸೈಬರ್​ ಭದ್ರತಾ ಸಂಶೋಧಕರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅವರು ಹೇಳುವ ಪ್ರಕಾರ ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಕದ್ದ ಮಾಹಿತಿಯ ಸ್ಕ್ರೀನ್​ಶಾಟ್​ ಕೂಡ ಹಾಕಿದ್ದಾರೆ.

ಇದಕ್ಕೆ ಕೂ ಸಹ ಸಂಸ್ಥಾಪಕ ಹಾಗೂ ಸಿಇಒ ಅಪ್ರಮೇಯ ರಾಧಾಕೃಷ್ಣ ಉತ್ತರಿಸಿದ್ದಾರೆ. ಇವರು ಕದ್ದಿದ್ದೇನೆ ಎಂದು ಹೇಳಿಕೊಂಡಿರುವ ಮಾಹಿತಿ ಕೂ ಪ್ರೊಫೈಲ್​ನಲ್ಲೇ ಕಾಣುತ್ತದೆ. ಬಳಕೆದಾರರು ಸಾರ್ವಜನಿಕವಾಗಿಯೇ ಈ ಮಾಹಿತಿ ಹಂಚಿಕೊಂಡಿರುತ್ತಾರೆ. ಹೀಗಿರುವಾಗ ಇದನ್ನು ಮಾಹಿತಿ ಸೋರಿಕೆ ಎಂದು ಕರೆಯೋಕೆ ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

ಕೂ ಆ್ಯಪ್​ ಮೊಟ್ಟ ಮೊದಲ ಬಾರಿಗೆ ಲಾಂಚ್​ ಆಗಿದ್ದು 2020 ಮಾರ್ಚ್​ ತಿಂಗಳಲ್ಲಿ. ಇದು ಬೆಂಗಳೂರು ಮೂಲದ ಸ್ಟಾರ್ಟ್​​-ಅಪ್​. ಭಾರತದಲ್ಲಿ ಟ್ವಿಟರ್​ಗೆ​ ಬದಲಿ ತಾಣ ಕೂ ಆಗಲಿದೆ ಎನ್ನುವುದು ಅನೇಕರ ಅಭಿಪ್ರಾಯ. ಆತ್ಮನಿರ್ಭರ ಆ್ಯಪ್​ ಚಾಲೆಂಜ್​ ಅನ್ನು ಕೂ ಗೆದ್ದಿದೆ. ಹೀಗಾಗಿ ಸರ್ಕಾರದಿಂದ ಈ ಆ್ಯಪ್​ಗೆ ಮತ್ತಷ್ಟು ಬೆಂಬಲ ಸಿಗುವ ಸಾಧ್ಯತೆ ಇದೆ. ಇಂಗ್ಲಿಷ್​ ಮಾತ್ರ ಅಲ್ಲದೆ, ಕನ್ನಡ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಇದನ್ನು ಬಳಸಬಹುದು.

ಇದನ್ನೂ ಓದಿ: ಇದೇನಿದು Koo.. ಏನಿದರ ವಿಶೇಷತೆ? ಕೇಂದ್ರ ಸರ್ಕಾರ ಈ ಆ್ಯಪ್​ಗೆ ಮಹತ್ವ ಕೊಡ್ತಿರೋದೇಕೆ?

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ