AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ

ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 9:40 PM

Share

ಭಾರತದಲ್ಲಿ ಟ್ವಿಟರ್​ಗೆ ಬದಲಿಯಾಗಿ ಕೂ ಆ್ಯಪ್​ ಬಳಕೆ ಆರಂಭವಾಗಿದೆ. ಕೇಂದ್ರ ಸರ್ಕಾರ ಹಾಗೂ ಟ್ವಿಟರ್​ ನಡುವಣ ಸಂಘರ್ಷದಿಂದ ಕೂ ಆ್ಯಪ್​ನ ಜನಪ್ರಿಯತೆ ಹೆಚ್ಚಿದೆ. ಅಷ್ಟೇ ಅಲ್ಲ, ಕೇಂದ್ರ ಸರ್ಕಾರವೇ ಕೂಗೆ ಆದ್ಯತೆ ನೀಡುತ್ತಿದೆ. ಈ ಮಧ್ಯೆ, ಕೂ ಆ್ಯಪ್​​ನಲ್ಲಿರುವ ಮಾಹಿತಿಯನ್ನು ಸುಲಭವಾಗಿ ಹ್ಯಾಕ್​ ಮಾಡಬಹುದು ಎಂದು ಹ್ಯಾಕರ್ಸ್​ಗಳು ಹೇಳಿದ್ದಾರೆ. ಇದಕ್ಕೆ ಕೂ ಆ್ಯಪ್​ನವರು ಸರಿಯಾದ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

ಮಾನಿಕರ್ ಎಲಿಯಟ್ ಆಲ್ಡರ್ಸನ್ ಎಂದು ಕರೆಯಲ್ಪಡುವ ಫ್ರೆಂಚ್​ ಸೈಬರ್​ ಭದ್ರತಾ ಸಂಶೋಧಕರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅವರು ಹೇಳುವ ಪ್ರಕಾರ ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಕದ್ದ ಮಾಹಿತಿಯ ಸ್ಕ್ರೀನ್​ಶಾಟ್​ ಕೂಡ ಹಾಕಿದ್ದಾರೆ.

ಇದಕ್ಕೆ ಕೂ ಸಹ ಸಂಸ್ಥಾಪಕ ಹಾಗೂ ಸಿಇಒ ಅಪ್ರಮೇಯ ರಾಧಾಕೃಷ್ಣ ಉತ್ತರಿಸಿದ್ದಾರೆ. ಇವರು ಕದ್ದಿದ್ದೇನೆ ಎಂದು ಹೇಳಿಕೊಂಡಿರುವ ಮಾಹಿತಿ ಕೂ ಪ್ರೊಫೈಲ್​ನಲ್ಲೇ ಕಾಣುತ್ತದೆ. ಬಳಕೆದಾರರು ಸಾರ್ವಜನಿಕವಾಗಿಯೇ ಈ ಮಾಹಿತಿ ಹಂಚಿಕೊಂಡಿರುತ್ತಾರೆ. ಹೀಗಿರುವಾಗ ಇದನ್ನು ಮಾಹಿತಿ ಸೋರಿಕೆ ಎಂದು ಕರೆಯೋಕೆ ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

ಕೂ ಆ್ಯಪ್​ ಮೊಟ್ಟ ಮೊದಲ ಬಾರಿಗೆ ಲಾಂಚ್​ ಆಗಿದ್ದು 2020 ಮಾರ್ಚ್​ ತಿಂಗಳಲ್ಲಿ. ಇದು ಬೆಂಗಳೂರು ಮೂಲದ ಸ್ಟಾರ್ಟ್​​-ಅಪ್​. ಭಾರತದಲ್ಲಿ ಟ್ವಿಟರ್​ಗೆ​ ಬದಲಿ ತಾಣ ಕೂ ಆಗಲಿದೆ ಎನ್ನುವುದು ಅನೇಕರ ಅಭಿಪ್ರಾಯ. ಆತ್ಮನಿರ್ಭರ ಆ್ಯಪ್​ ಚಾಲೆಂಜ್​ ಅನ್ನು ಕೂ ಗೆದ್ದಿದೆ. ಹೀಗಾಗಿ ಸರ್ಕಾರದಿಂದ ಈ ಆ್ಯಪ್​ಗೆ ಮತ್ತಷ್ಟು ಬೆಂಬಲ ಸಿಗುವ ಸಾಧ್ಯತೆ ಇದೆ. ಇಂಗ್ಲಿಷ್​ ಮಾತ್ರ ಅಲ್ಲದೆ, ಕನ್ನಡ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಇದನ್ನು ಬಳಸಬಹುದು.

ಇದನ್ನೂ ಓದಿ: ಇದೇನಿದು Koo.. ಏನಿದರ ವಿಶೇಷತೆ? ಕೇಂದ್ರ ಸರ್ಕಾರ ಈ ಆ್ಯಪ್​ಗೆ ಮಹತ್ವ ಕೊಡ್ತಿರೋದೇಕೆ?

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ