AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ

ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 12, 2021 | 9:40 PM

Share

ಭಾರತದಲ್ಲಿ ಟ್ವಿಟರ್​ಗೆ ಬದಲಿಯಾಗಿ ಕೂ ಆ್ಯಪ್​ ಬಳಕೆ ಆರಂಭವಾಗಿದೆ. ಕೇಂದ್ರ ಸರ್ಕಾರ ಹಾಗೂ ಟ್ವಿಟರ್​ ನಡುವಣ ಸಂಘರ್ಷದಿಂದ ಕೂ ಆ್ಯಪ್​ನ ಜನಪ್ರಿಯತೆ ಹೆಚ್ಚಿದೆ. ಅಷ್ಟೇ ಅಲ್ಲ, ಕೇಂದ್ರ ಸರ್ಕಾರವೇ ಕೂಗೆ ಆದ್ಯತೆ ನೀಡುತ್ತಿದೆ. ಈ ಮಧ್ಯೆ, ಕೂ ಆ್ಯಪ್​​ನಲ್ಲಿರುವ ಮಾಹಿತಿಯನ್ನು ಸುಲಭವಾಗಿ ಹ್ಯಾಕ್​ ಮಾಡಬಹುದು ಎಂದು ಹ್ಯಾಕರ್ಸ್​ಗಳು ಹೇಳಿದ್ದಾರೆ. ಇದಕ್ಕೆ ಕೂ ಆ್ಯಪ್​ನವರು ಸರಿಯಾದ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

ಮಾನಿಕರ್ ಎಲಿಯಟ್ ಆಲ್ಡರ್ಸನ್ ಎಂದು ಕರೆಯಲ್ಪಡುವ ಫ್ರೆಂಚ್​ ಸೈಬರ್​ ಭದ್ರತಾ ಸಂಶೋಧಕರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅವರು ಹೇಳುವ ಪ್ರಕಾರ ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಕದ್ದ ಮಾಹಿತಿಯ ಸ್ಕ್ರೀನ್​ಶಾಟ್​ ಕೂಡ ಹಾಕಿದ್ದಾರೆ.

ಇದಕ್ಕೆ ಕೂ ಸಹ ಸಂಸ್ಥಾಪಕ ಹಾಗೂ ಸಿಇಒ ಅಪ್ರಮೇಯ ರಾಧಾಕೃಷ್ಣ ಉತ್ತರಿಸಿದ್ದಾರೆ. ಇವರು ಕದ್ದಿದ್ದೇನೆ ಎಂದು ಹೇಳಿಕೊಂಡಿರುವ ಮಾಹಿತಿ ಕೂ ಪ್ರೊಫೈಲ್​ನಲ್ಲೇ ಕಾಣುತ್ತದೆ. ಬಳಕೆದಾರರು ಸಾರ್ವಜನಿಕವಾಗಿಯೇ ಈ ಮಾಹಿತಿ ಹಂಚಿಕೊಂಡಿರುತ್ತಾರೆ. ಹೀಗಿರುವಾಗ ಇದನ್ನು ಮಾಹಿತಿ ಸೋರಿಕೆ ಎಂದು ಕರೆಯೋಕೆ ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

ಕೂ ಆ್ಯಪ್​ ಮೊಟ್ಟ ಮೊದಲ ಬಾರಿಗೆ ಲಾಂಚ್​ ಆಗಿದ್ದು 2020 ಮಾರ್ಚ್​ ತಿಂಗಳಲ್ಲಿ. ಇದು ಬೆಂಗಳೂರು ಮೂಲದ ಸ್ಟಾರ್ಟ್​​-ಅಪ್​. ಭಾರತದಲ್ಲಿ ಟ್ವಿಟರ್​ಗೆ​ ಬದಲಿ ತಾಣ ಕೂ ಆಗಲಿದೆ ಎನ್ನುವುದು ಅನೇಕರ ಅಭಿಪ್ರಾಯ. ಆತ್ಮನಿರ್ಭರ ಆ್ಯಪ್​ ಚಾಲೆಂಜ್​ ಅನ್ನು ಕೂ ಗೆದ್ದಿದೆ. ಹೀಗಾಗಿ ಸರ್ಕಾರದಿಂದ ಈ ಆ್ಯಪ್​ಗೆ ಮತ್ತಷ್ಟು ಬೆಂಬಲ ಸಿಗುವ ಸಾಧ್ಯತೆ ಇದೆ. ಇಂಗ್ಲಿಷ್​ ಮಾತ್ರ ಅಲ್ಲದೆ, ಕನ್ನಡ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಇದನ್ನು ಬಳಸಬಹುದು.

ಇದನ್ನೂ ಓದಿ: ಇದೇನಿದು Koo.. ಏನಿದರ ವಿಶೇಷತೆ? ಕೇಂದ್ರ ಸರ್ಕಾರ ಈ ಆ್ಯಪ್​ಗೆ ಮಹತ್ವ ಕೊಡ್ತಿರೋದೇಕೆ?

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್