AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ

ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ.

Koo ಆ್ಯಪ್​ ಮಾಹಿತಿ ಕದಿಯಬಹುದು ಎಂದ ಹ್ಯಾಕರ್ಸ್​​: ತಿರುಗೇಟು ನೀಡಿದ ಸಿಇಒ
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 9:40 PM

Share

ಭಾರತದಲ್ಲಿ ಟ್ವಿಟರ್​ಗೆ ಬದಲಿಯಾಗಿ ಕೂ ಆ್ಯಪ್​ ಬಳಕೆ ಆರಂಭವಾಗಿದೆ. ಕೇಂದ್ರ ಸರ್ಕಾರ ಹಾಗೂ ಟ್ವಿಟರ್​ ನಡುವಣ ಸಂಘರ್ಷದಿಂದ ಕೂ ಆ್ಯಪ್​ನ ಜನಪ್ರಿಯತೆ ಹೆಚ್ಚಿದೆ. ಅಷ್ಟೇ ಅಲ್ಲ, ಕೇಂದ್ರ ಸರ್ಕಾರವೇ ಕೂಗೆ ಆದ್ಯತೆ ನೀಡುತ್ತಿದೆ. ಈ ಮಧ್ಯೆ, ಕೂ ಆ್ಯಪ್​​ನಲ್ಲಿರುವ ಮಾಹಿತಿಯನ್ನು ಸುಲಭವಾಗಿ ಹ್ಯಾಕ್​ ಮಾಡಬಹುದು ಎಂದು ಹ್ಯಾಕರ್ಸ್​ಗಳು ಹೇಳಿದ್ದಾರೆ. ಇದಕ್ಕೆ ಕೂ ಆ್ಯಪ್​ನವರು ಸರಿಯಾದ ರೀತಿಯಲ್ಲಿ ತಿರುಗೇಟು ನೀಡಿದ್ದಾರೆ.

ಮಾನಿಕರ್ ಎಲಿಯಟ್ ಆಲ್ಡರ್ಸನ್ ಎಂದು ಕರೆಯಲ್ಪಡುವ ಫ್ರೆಂಚ್​ ಸೈಬರ್​ ಭದ್ರತಾ ಸಂಶೋಧಕರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅವರು ಹೇಳುವ ಪ್ರಕಾರ ಕೂ ಬಳಕೆದಾರರ, ಇ-ಮೇಲ್​ ಐಡಿ, ಲಿಂಗ, ಜನ್ಮದಿನಾಂಕ ಮಾಹಿತಿಯನ್ನು ಸುಲಭವಾಗಿ ಕದಿಯಬಹುದು. ಕೂ ಆ್ಯಪ್​ನಿಂದ ಈ ಮಾಹಿತಿ ಕದಿಯಲು ತೆಗೆದುಕೊಂಡಿದ್ದು ಕೇವಲ 30 ನಿಮಿಷ ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಕದ್ದ ಮಾಹಿತಿಯ ಸ್ಕ್ರೀನ್​ಶಾಟ್​ ಕೂಡ ಹಾಕಿದ್ದಾರೆ.

ಇದಕ್ಕೆ ಕೂ ಸಹ ಸಂಸ್ಥಾಪಕ ಹಾಗೂ ಸಿಇಒ ಅಪ್ರಮೇಯ ರಾಧಾಕೃಷ್ಣ ಉತ್ತರಿಸಿದ್ದಾರೆ. ಇವರು ಕದ್ದಿದ್ದೇನೆ ಎಂದು ಹೇಳಿಕೊಂಡಿರುವ ಮಾಹಿತಿ ಕೂ ಪ್ರೊಫೈಲ್​ನಲ್ಲೇ ಕಾಣುತ್ತದೆ. ಬಳಕೆದಾರರು ಸಾರ್ವಜನಿಕವಾಗಿಯೇ ಈ ಮಾಹಿತಿ ಹಂಚಿಕೊಂಡಿರುತ್ತಾರೆ. ಹೀಗಿರುವಾಗ ಇದನ್ನು ಮಾಹಿತಿ ಸೋರಿಕೆ ಎಂದು ಕರೆಯೋಕೆ ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.

ಕೂ ಆ್ಯಪ್​ ಮೊಟ್ಟ ಮೊದಲ ಬಾರಿಗೆ ಲಾಂಚ್​ ಆಗಿದ್ದು 2020 ಮಾರ್ಚ್​ ತಿಂಗಳಲ್ಲಿ. ಇದು ಬೆಂಗಳೂರು ಮೂಲದ ಸ್ಟಾರ್ಟ್​​-ಅಪ್​. ಭಾರತದಲ್ಲಿ ಟ್ವಿಟರ್​ಗೆ​ ಬದಲಿ ತಾಣ ಕೂ ಆಗಲಿದೆ ಎನ್ನುವುದು ಅನೇಕರ ಅಭಿಪ್ರಾಯ. ಆತ್ಮನಿರ್ಭರ ಆ್ಯಪ್​ ಚಾಲೆಂಜ್​ ಅನ್ನು ಕೂ ಗೆದ್ದಿದೆ. ಹೀಗಾಗಿ ಸರ್ಕಾರದಿಂದ ಈ ಆ್ಯಪ್​ಗೆ ಮತ್ತಷ್ಟು ಬೆಂಬಲ ಸಿಗುವ ಸಾಧ್ಯತೆ ಇದೆ. ಇಂಗ್ಲಿಷ್​ ಮಾತ್ರ ಅಲ್ಲದೆ, ಕನ್ನಡ ಸೇರಿ ಹಲವು ಭಾರತೀಯ ಭಾಷೆಗಳಲ್ಲಿ ಇದನ್ನು ಬಳಸಬಹುದು.

ಇದನ್ನೂ ಓದಿ: ಇದೇನಿದು Koo.. ಏನಿದರ ವಿಶೇಷತೆ? ಕೇಂದ್ರ ಸರ್ಕಾರ ಈ ಆ್ಯಪ್​ಗೆ ಮಹತ್ವ ಕೊಡ್ತಿರೋದೇಕೆ?

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು