AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1999ರಲ್ಲಿ ಎಸ್​.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಮೊಳಗಿಸಿದ್ದರು, ನಾವೂ ಮತ್ತೆ ಇಲ್ಲಿಂದಲೇ ಪಾಂಚಜನ್ಯ ಮೊಳಗಿಸ್ತೇವೆ -ಡಿ.ಕೆ.ಶಿವಕುಮಾರ್

ಡಿಕೆ ಶಿವಕುಮಾರ್ ಕೋಲಾರಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ರಾಮಸಂದ್ರದ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. ಬೃಹತ್ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ.

1999ರಲ್ಲಿ ಎಸ್​.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಮೊಳಗಿಸಿದ್ದರು, ನಾವೂ ಮತ್ತೆ ಇಲ್ಲಿಂದಲೇ ಪಾಂಚಜನ್ಯ ಮೊಳಗಿಸ್ತೇವೆ -ಡಿ.ಕೆ.ಶಿವಕುಮಾರ್
ಮುಳಬಾಗಿಲಿನ ದರ್ಗಾಗೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Mar 01, 2021 | 2:34 PM

Share

ಕೋಲಾರ: ಪಕ್ಷ ಸಂಘಟನೆ ನಿಟ್ಟಿನಲ್ಲಿ ಇಂದು ಡಿಕೆ ಶಿವಕುಮಾರ್ ಕೋಲಾರಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ರಾಮಸಂದ್ರದ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. ಬೃಹತ್ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ಕೋಲಾರದವರೆಗೆ ಡಿಕೆಶಿ ಱಲಿ ಮಾಡಿದ್ದಾರೆ. ಈ ವೇಳೆ ಡಿಕೆಶಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಾಥ್ ನೀಡಿದ್ದಾರೆ. 1999ರಲ್ಲಿ ಎಸ್​.ಎಂ.ಕೃಷ್ಣ ಇದೇ ಕೋಲಾರ ಜಿಲ್ಲೆಯಿಂದ ಪಾಂಚಜನ್ಯ ಕಾಂಗ್ರೆಸ್​ ಯಾತ್ರೆ ಆರಂಭಿಸಿದ್ರು. ಇದೀಗ ನಾವು ಇಲ್ಲಿಂದಲೇ ಆರಂಭಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕುರುಡುಮಲೆ ಗಣೇಶನಿಗೆ ಡಿಕೆಶಿ ಪೂಜೆ ಇನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಗೆ ತೆರಳಿದ ಡಿ.ಕೆ.ಶಿವಕುಮಾರ್, ಕುರುಡುಮಲೆ ಗಣೇಶ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಕೋಲಾರದಲ್ಲಿ ಜನಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಇಂದು ಕುರುಡುಮಲೆಗೆ ಭೇಟಿ ನೀಡಿ ವಿನಾಯಕನಿಗೆ ಪೂಜೆ ಸಲ್ಲಿಸಲಾಗಿದೆ. 1999ರಲ್ಲಿ ಎಸ್.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಯಾತ್ರೆ ಆರಂಭಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದರು. ಈಗ ಅದೇ ರೀತಿ ನಾನು ಪಾಂಚಜನ್ಯ ಮೊಳಗಿಸಲಿದ್ದೇನೆ. ತನ್ವೀರ್ ಸೇಠ್​ರನ್ನ ಭೇಟಿ ಮಾಡಿ ಚರ್ಚೆ ಮಾಡುವೆ ಎಂದು ರಾಮಸಂದ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಇನ್ನು ಡಿಕೆಶಿಗೆ ರಾಮಲಿಂಗಾರೆಡ್ಡಿ, ಕೆ.ಆರ್.ರಮೇಶ್ ಕುಮಾರ್, ಕೆ.ಹೆಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಸಾಥ್ ನೀಡಿದ್ರು.

DK Shivakumar

ಬೃಹತ್ ಹಾರ ಹಾಕಿ, ಬೆಳ್ಳಿ ಗದೆ ನೀಡಿ ಡಿಕೆಶಿಯನ್ನು ಸ್ವಾಗತಿಸಿದ ಕಾರ್ಯಕರ್ತರು

ಮೈಸೂರು ಪಾಲಿಕೆ ಮೇಯರ್ ಚುನಾವಣೆ ಗೊಂದಲ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ ಇದೊಂದು ಸಣ್ಣ ವಿಚಾರ, ನಾವು ಇದನ್ನ ಬಗೆಹರಿಸಿಕೊಳ್ತೇವೆ ಎಂದು ಹೇಳಿದ್ದಾರೆ. ನಾನು JDS ಶಾಸಕ ಸಾ.ರಾ.ಮಹೇಶ್‌ಗೆ ಕರೆ ಮಾಡಿದ್ದು ನಿಜ. ಮೇಯರ್ ಸ್ಥಾನ ನೀಡುವ ಸಂಬಂಧ ಮಾತು ಕೊಟ್ಟಿದ್ದರು. ಅದರಂತೆ ಈ ಬಾರಿ ನಮಗೆ ಮೇಯರ್ ಸ್ಥಾನ ನೀಡಬೇಕಿತ್ತು. ಆದರೆ ಈ ಬಾರಿ ಮೇಯರ್ ಸ್ಥಾನವನ್ನು ನಮಗೆ ನೀಡಿಲ್ಲ. ಈ ಗೊಂದಲ ಬಗ್ಗೆ ಚರ್ಚಿಸಲು ತನ್ವೀರ್ ಸೇಠ್‌ ಕರೆದಿದ್ದೆ. ಇದೊಂದು ಸಣ್ಣ ವಿಚಾರ, ನಾವು ಬಗೆಹರಿಸಿಕೊಳ್ಳುತ್ತೇವೆ. ಸ್ಥಳೀಯ ರಾಜಕೀಯದಲ್ಲಿ ಈ ರೀತಿ ಇದ್ದೆ ಇರುತ್ತೆ. ಮದುವೆಗಾಗಿ ಸಿದ್ದರಾಮಯ್ಯ ನವದೆಹಲಿಗೆ ಹೋಗಿದ್ದಾರೆ. ನಮ್ಮ ಮನೆ ಕಾರ್ಯಕ್ರಮ ಹಿನ್ನೆಲೆ ನಾನು ಹೋಗಿಲ್ಲ ಎಂದರು.

ದರ್ಗಾಗೆ ಡಿಕೆಶಿ ಭೇಟಿ ಮುಳಬಾಗಿಲು ಪಟ್ಟಣದಲ್ಲಿರುವ ಪುರಾತನ ಇತಿಹಾಸ ಹೋದಿರುವ ಹೈದರ್ ಸಾಬ್ ದರ್ಗಾಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿಕೆಶಿ ಜೊತೆ ಸ್ಥಳೀಯ ಮುಖಂಡರು ಹಾಗೂ ರಾಜ್ಯ ನಾಯಕರು ಭಾಗಿಯಾಗಿದ್ದರು.

DK Shivakumar

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಅದ್ಧೂರಿ ಸ್ವಾಗತ

ಇದನ್ನೂ ಓದಿ: ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬೆಳ್ಳಿಯ ಹೆಲಿಕ್ಯಾಪ್ಟರ್ ಕಾಣಿಕೆ ಅರ್ಪಿಸಿದ ಡಿಕೆ ಶಿವಕುಮಾರ್

Published On - 2:04 pm, Mon, 1 March 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’