
ರಾಯಚೂರು: ಕಳೆದ ಮೂರು ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದರಿಂದ ಜಲವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗ್ತಿತ್ತು. ಈ ನಡುವೆ, ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕೈಗಾರಿಕಾ ಘಟಕಗಳಿಂದ ವಿದ್ಯುತ್ ಬೇಡಿಕೆ ಸಹ ಕುಸಿದಿತ್ತು. ಹಾಗಾಗಿ, ಕರ್ನಾಟಕ ವಿದ್ಯುತ್ ನಿಗಮ ರಾಜ್ಯದ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು.
ಇದೇ ರೀತಿ, ಜಿಲ್ಲೆಯ ಯರಮರಸ ಬಳಿ ಇರುವ YTPS ಸ್ಥಾವರದ ಎರಡು ಘಟಕಗಳ ಪೈಕಿ 810 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿರುವ ಒಂದು ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಇಂದಿನಿಂದ ಆರಂಭಿಸಲಾಗಿದೆ. -ಸಿದ್ದು ಬಿರಾದಾರ್
Published On - 6:16 pm, Sun, 11 October 20