AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Scene Create ಮಾಡಬೇಡಿ ಎಂದ ಶಾಸಕ, ಬೆಂಬಲಿಗರಿಗೆ ಫುಲ್​ ಕ್ಲಾಸ್​!

ಮೈಸೂರು: ಜಿಲ್ಲೆಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸೋಂಕಿತರ ಕಡೆಗಣನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸ್ಥಳೀಯ ಶಾಸಕ ರಾಮ್​ದಾಸ್​ ಸೋಂಕಿತರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಕ್ಷೇತ್ರದ ವಿದ್ಯಾರಣ್ಯಪುರಂನಲ್ಲಿರುವ ಸೋಂಕಿತನ ಕುಟುಂಬಸ್ಥರು ಶಾಸಕ ಮತ್ತು ಆತನ ಬೆಂಬಲಿಗರ ಜೊತೆ ವಾಗ್ವಾದಕ್ಕೆ ಇಳಿದರು. ಶಾಸಕ ರಾಮದಾಸ್ ಜೊತೆ ಮಾತಿನ ಚಕಮಕಿಗೆ ಇಳಿದ ಕುಟುಂಬಸ್ಥರು ಸೋಂಕಿತರು ತಮ್ಮ ಮನೆಯಲ್ಲೇ ಇದ್ರೂ ಯಾರೂ ಕ್ಯಾರೇ ಅಂತಿಲ್ಲ. ಸೊಂಕಿತರ ಮನೆ ಸೇರಿದಂತೆ ಆಸುಪಾಸಿನಲ್ಲಿ ಸ್ಯಾನಿಟೈಸ್ ಮಾಡಿಲ್ಲ. ವಾರದಿಂದ ಮನೆಯಲ್ಲಿ ಸಂಗ್ರಹವಾದ ಕಸ […]

Scene Create ಮಾಡಬೇಡಿ ಎಂದ ಶಾಸಕ, ಬೆಂಬಲಿಗರಿಗೆ ಫುಲ್​ ಕ್ಲಾಸ್​!
KUSHAL V
| Edited By: |

Updated on:Jul 28, 2020 | 6:47 PM

Share

ಮೈಸೂರು: ಜಿಲ್ಲೆಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸೋಂಕಿತರ ಕಡೆಗಣನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸ್ಥಳೀಯ ಶಾಸಕ ರಾಮ್​ದಾಸ್​ ಸೋಂಕಿತರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಕ್ಷೇತ್ರದ ವಿದ್ಯಾರಣ್ಯಪುರಂನಲ್ಲಿರುವ ಸೋಂಕಿತನ ಕುಟುಂಬಸ್ಥರು ಶಾಸಕ ಮತ್ತು ಆತನ ಬೆಂಬಲಿಗರ ಜೊತೆ ವಾಗ್ವಾದಕ್ಕೆ ಇಳಿದರು.

ಶಾಸಕ ರಾಮದಾಸ್ ಜೊತೆ ಮಾತಿನ ಚಕಮಕಿಗೆ ಇಳಿದ ಕುಟುಂಬಸ್ಥರು ಸೋಂಕಿತರು ತಮ್ಮ ಮನೆಯಲ್ಲೇ ಇದ್ರೂ ಯಾರೂ ಕ್ಯಾರೇ ಅಂತಿಲ್ಲ. ಸೊಂಕಿತರ ಮನೆ ಸೇರಿದಂತೆ ಆಸುಪಾಸಿನಲ್ಲಿ ಸ್ಯಾನಿಟೈಸ್ ಮಾಡಿಲ್ಲ. ವಾರದಿಂದ ಮನೆಯಲ್ಲಿ ಸಂಗ್ರಹವಾದ ಕಸ ತೆಗೆದುಕೊಂಡು ಹೋಗಿಲ್ಲ ಎಂದು ತಮ್ಮ ಆಕ್ರೋಶ ಹೊರಹಾಕಿದರು.

Scene create ಮಾಡಬೇಡಿ ಎಂದಿದ್ದಕ್ಕೆ ಕುಟುಂಬಸ್ಥರಿಂದ ತರಾಟೆ ಜೊತೆಗೆ, ಸಹಾಯವಾಣಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ. ನೀವು ಬರುತ್ತೀರೆಂದು ಇಂದು ರಸ್ತೆಯನ್ನ ಗುಡಿಸಿ ಸ್ವಚ್ಛ ಮಾಡಿದ್ದಾರೆ ಎಂದು ಸಿಟ್ಟಿನಿಂದ ಮಾತನಾಡಿದರು. ಸ್ಥಳೀಯ ಪಾಲಿಕೆ ಸದಸ್ಯ ರಾಮಪ್ರಸಾದ್ ಅವರು ಬಂದು ಹೋಗಿದ್ದಾರೆ. ಪ್ರತಿಯೊಂದಕ್ಕೂ ಅವರನ್ನೇ ಕೇಳಬೇಕಿದೆ. ನೀವು ಈಗ ಬಂದಿದ್ದೀರಾ ಎಂದು ಸ್ಥಳೀಯರು ರಾಮದಾಸ್‌ಗೆ ಪ್ರಶ್ನೆ ಮಾಡಿದರು.

ಇದೇ ವೇಳೆ ಶಾಸಕ ರಾಮ್​ದಾಸ್​ರ ಬೆಂಬಲಿಗನೊಬ್ಬ scene create ಮಾಡಬೇಡಿ ಎಂದನಂತೆ. ಇದರಿಂದ ಮತ್ತಷ್ಟು ಕೆರಳಿದ ಸೋಂಕಿತನ ಕುಟುಂಬಸ್ಥರು ನಮ್ಮ ಸಮಸ್ಯೆಯನ್ನು ಬಗೆಹರಿಸಲು ಕೇಳ್ತಿದ್ದೀವಿ. ಇದಕ್ಕೆ ಸೀನ್ ಕ್ರಿಯೇಟ್ ಮಾಡಬೇಡಿ ಅಂದರೆ ಏನರ್ಥ ಎಂದು ಶಾಸಕರನ್ನ ಸಿಕ್ಕಾಪಟ್ಟೆ ತರಾಟೆಗೆ ತೆದೆದುಕೊಂಡರು.

ಈ ವೇಳೆ ಸಮಸ್ಯೆ ಬಗೆಹರಿಸಲು ಯತ್ನಿಸಿದ ರಾಮದಾಸ್ ನಿಮ್ಮ ಮನೆ ಬಾಗಿಲಿಗೆ ಬಂದರೂ ಈ ರೀತಿ ಹೇಳ್ತೀರಾ. ಸೋಂಕು ನಿಯಂತ್ರಣಕ್ಕಾಗಿ ಕಳೆದ ನಾಲ್ಕು ತಿಂಗಳಿಂದ ಅವಿರತವಾಗಿ ದುಡಿಯತ್ತಿದ್ದೇವೆ. ಆದರೂ ಜನರಿಂದ ಈ ರೀತಿಯ ಮಾತುಗಳನ್ನು ಕೇಳಬೇಕಾಗಿದೆ ಎಂದು ಜನರನ್ನು ಸಮಾಧಾನಪಡಿಸಲು ಮುಂದಾದರು.

ಜೊತೆಗೆ, ಅಲ್ಲೇ ನೆರೆದಿದ್ದ ಅಧಿಕಾರಿಗಳಿಗೆ ಮಹಾನಗರ ಪಾಲಿಕೆ ಸತ್ತು ಹೋಗಿದ್ಯಾ? ಎಂದು ಖಾರವಾಗಿ ಪ್ರಶ್ನಿಸಿದರು. ನಿಮ್ಮ ಅಯೋಗ್ಯತನದಿಂದ ನಾವು ಜನರಿಂದ ಇಂಥ ಮಾತುಗಳನ್ನು ಕೇಳಬೇಕಾಗಿದೆ ಎಂದು ಅಧಿಕಾರಿಗಳನ್ನು ರಾಮದಾಸ್ ತರಾಟೆಗೆ ತೆಗೆದುಕೊಂಡರು.

Published On - 1:43 pm, Tue, 28 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ