Karnataka Dam Water Level: ಕೆಆರ್​ಎಸ್​ ಭರ್ತಿಗೆ 4 ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರವಾಗಿ ಮಳೆ ಸುರಿಯುತ್ತಿದ್ದು, ಕನ್ನಂಬಾಡಿ ಅಣೆಕಟ್ಟೆಗೆ ಬಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಹಳೆ ಮೈಸೂರು ಭಾಗದ ಜನರ ಜೀವನಾಡಿ, ಕೆಆರ್​ಎಸ್ ಜಲಾಶಯ ಭರ್ತಿ ಸನಿಹಕ್ಕೆ ಬಂದಿದೆ. ಹಾಗಿದ್ದರೆ ಕೆಆರ್​​ಎಸ್​ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water Level: ಕೆಆರ್​ಎಸ್​ ಭರ್ತಿಗೆ 4 ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us
|

Updated on: Jul 21, 2024 | 7:33 AM

ಕೃಷ್ಣರಾಜಸಾಗರ ಡ್ಯಾಂ ಭರ್ತಿಯಾಗಲು ಕೇವಲ ನಾಲ್ಕು ಅಡಿ ಮಾತ್ರ ಬಾಕಿ ಇದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಲಾಯಶದಿಂದ ಕಾವೇರಿ ನದಿಗೆ 10 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್​ಎಸ್ ಜಲಾಶಯದಲ್ಲಿ ಇದೀಗ 120 ಅಡಿ ನೀರು ಇದೆ. ಜಲಾಶಯ ಭರ್ತಿಯಾಗಲು ಕೇವಲ ನಾಲ್ಕು ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ ಪ್ರತಿದಿನ 51 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೆಆರ್​ಎಸ್​ ಸೇರಿದಂತೆ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ (Karnataka Dam Water Level) ವಿವರ ಹೀಗಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 97.42 25.41 84,751 55,063
ತುಂಗಭದ್ರಾ ಜಲಾಶಯ (Tungabhadra Dam) 497.71 105.79 65.11 9.99 1,18,299 391
ಮಲಪ್ರಭಾ ಜಲಾಶಯ (Malaprabha Dam) 633.80 37.73 14.48 6.81 11976 194
ಕೆ.ಆರ್.ಎಸ್ (KRS Dam) 38.04 49.45 42.33 15.65 60918 2361
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 62.88 24.04 52366 0
ಕಬಿನಿ ಜಲಾಶಯ (Kabini Dam) 696.13 19.52 17.49 11.86 37963 33625
ಭದ್ರಾ ಜಲಾಶಯ (Bhadra Dam) 657.73 71.54 45.04 27.81 40612 169
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.65 7.33 24720 522
ಹೇಮಾವತಿ ಜಲಾಶಯ (Hemavathi Dam) 890.58 37.10 34.06 16.17 34432 250
ವರಾಹಿ ಜಲಾಶಯ (Varahi Dam) 594.36 31.10 9.44 4.78 8578 0
ಹಾರಂಗಿ ಜಲಾಶಯ (Harangi Dam)​​ 871.38 8.50 6.75 4.73 12890 10,000
ಸೂಫಾ (Supa Dam) 564.00 145.33 57.40 34.96 24142 0
ನಾರಾಯಣಪುರ ಜಲಾಶಯ (Narayanpura Dam) 492.25 33.31 30.07 13.96 70626 405
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.98 24.78 0 147

ಮತ್ತೊಂದು ಕಡೆ ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳು ಇಂದು ಸಂಜೆ ವೇಳೆಗೆ ಭರ್ತಿಯಾಗುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂಜಾಗ್ರತ ಕ್ರಮವಾಗಿ ಜಲಾಶಯದ ಹತ್ತು ಕ್ರೆಸ್ಟ್ ಗೇಟ್​ಗಳ ಮೂಲಕ 15 ಸಾವಿರ ಕ್ಯೂಸೆಕ್ ನೀರನ್ನ ಕಾವೇರಿ ನದಿಗೆ ಬಿಟ್ಟಿದ್ದಾರೆ. ಹೀಗಾಗಿ ಕಾವೇರಿಗೆ ಮತ್ತೆ ಜೀವಕಳೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?