AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಸಿಗದೆ ನರಳಿ ನರಳಿ.. KSRP ಕಾನ್ಸ್​ಟೇಬಲ್ ಸಾವು, ಎಲ್ಲಿ?

ಬಾಗಲಕೋಟೆ: ಲೋ ಬಿಪಿ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ KSRP ಕಾನ್ಸ್​ಟೇಬಲ್ ಗೆ ಆಸ್ಪತ್ರೆಯಲ್ಲಿ ಕೋವಿಡ್ ವರದಿ ಇಲ್ಲ ಎಂಬ ಕಾರಣದಿಂದಾಗಿ ಬೆಡ್ ನೀಡಿಲ್ಲ. ಇದರಿಂದಾಗಿ ಕಾನ್ಸ್​ಟೇಬಲ್ ಚಿಕಿತ್ಸೆ ಸಿಗದೆ ನರಳಿ ನರಳಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ KSRP ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕಾನ್ಸ್​ಟೇಬಲ್, ಅನಾರೋಗ್ಯದ ಕಾರಣದಿಂದಾಗಿ ಬಾಗಲಕೋಟೆಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಕೋವಿಡ್ ವರದಿ ಇಲ್ಲ ಎಂಬ ಕಾರಣ ಹೇಳಿ ಆಸ್ಪತ್ರೆಯ ವೈದ್ಯರು ಕಾನ್ಸ್​ಟೇಬಲ್ ಗೆ ಚಿಕಿತ್ಸೆ […]

ಚಿಕಿತ್ಸೆ ಸಿಗದೆ ನರಳಿ ನರಳಿ.. KSRP ಕಾನ್ಸ್​ಟೇಬಲ್ ಸಾವು, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 28, 2020 | 1:01 PM

Share

ಬಾಗಲಕೋಟೆ: ಲೋ ಬಿಪಿ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ KSRP ಕಾನ್ಸ್​ಟೇಬಲ್ ಗೆ ಆಸ್ಪತ್ರೆಯಲ್ಲಿ ಕೋವಿಡ್ ವರದಿ ಇಲ್ಲ ಎಂಬ ಕಾರಣದಿಂದಾಗಿ ಬೆಡ್ ನೀಡಿಲ್ಲ. ಇದರಿಂದಾಗಿ ಕಾನ್ಸ್​ಟೇಬಲ್ ಚಿಕಿತ್ಸೆ ಸಿಗದೆ ನರಳಿ ನರಳಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ KSRP ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕಾನ್ಸ್​ಟೇಬಲ್, ಅನಾರೋಗ್ಯದ ಕಾರಣದಿಂದಾಗಿ ಬಾಗಲಕೋಟೆಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಕೋವಿಡ್ ವರದಿ ಇಲ್ಲ ಎಂಬ ಕಾರಣ ಹೇಳಿ ಆಸ್ಪತ್ರೆಯ ವೈದ್ಯರು ಕಾನ್ಸ್​ಟೇಬಲ್ ಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ರಾತ್ರಿ ಒಂದು ಗಂಟೆವರೆಗೂ ಆಸ್ಪತ್ರೆಯ ಮುಂದೆ ಇರುವ ಗಣಪತಿ ದೇವಸ್ಥಾನದಲ್ಲಿಯೇ ಕಾನ್ಸ್​ಟೇಬಲ್ ನರಳುತ್ತಾ ಮಲಗಿದ್ದಾರೆ.

ಕೊನೆಗೆ ಖಾಸಗಿ ವೈದ್ಯರೊಬ್ಬರ ಹೇಳಿಕೆಯ ನಂತರ ಆಸ್ಪತ್ರೆ ಸಿಬ್ಬಂದಿ ಕಾನ್ಸ್​ಟೇಬಲ್ ಗೆ ಬೆಡ್ ವ್ಯವಸ್ಥೆ ಮಾಡಿದ್ದಾರಾದರೂ, ಯಾವುದೇ ಚಿಕಿತ್ಸೆ ನೀಡಲು ಹತ್ತಿರ ಸುಳಿಯದೆ ನಿರ್ಲಕ್ಷ ತೋರಿದ್ದಾರೆ. ಇದರಿಂದ ಮುಂಜಾನೆ 4 ಗಂಟೆವರೆಗೂ ಬೆಡ್ ಮೇಲೆ ನರಳಾಡಿದ ಕಾನ್ಸ್ಟೇಬಲ್ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ.

ಕಾನ್ಸ್​ಟೇಬಲ್ ಸಾವಿನ ನಂತರ ವ್ಯಕ್ತಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿರುವ ವೈದ್ಯರ ವಿರುದ್ಧ ಕಾನ್ಸ್​ಟೇಬಲ್ ಪತ್ನಿ ಕಿಡಿಕಾರಿದ್ದು, ನನ್ನ ಪತಿಯ ಸಾವಿಗೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷವೇ ಕಾರಣವೆಂದು ಕಣ್ಣೀರಿಟ್ಟಿದ್ದಾರೆ.

Published On - 12:22 pm, Tue, 28 July 20

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ