ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಯಾರು?: ಹೆಚ್ ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವೆ ಕೋಳಿ ಜಗಳ ಮುಂದುವರಿದಿದೆ. ಇಂದು ತುಮಕೂರಿನಲ್ಲಿ ಸಿದ್ದಾರಮಯ್ಯನವರು ಕುಮಾರಸ್ವಾಮಿಯನ್ನು ಪೆದ್ದ ಅಂತ ಹೀಯಾಳಿಸಿದ ನಂತರ ರೊಚ್ಚಿಗೆದ್ದಿರುವ ಜೆಡಿಎಸ್ ನಾಯಕ ಸರಣಿ ಟ್ವೀಟ್ಗಳ ಮೂಲಕ ತಿರುಗೇಟು ನೀಡಿದ್ದಾರೆ. ‘‘ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ,’’ ಎಂದು ಕುಮಾರಸ್ವಾಮಿ ಮೊದಲ ಟ್ವೀಟ್ನಲ್ಲಿ […]

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವೆ ಕೋಳಿ ಜಗಳ ಮುಂದುವರಿದಿದೆ. ಇಂದು ತುಮಕೂರಿನಲ್ಲಿ ಸಿದ್ದಾರಮಯ್ಯನವರು ಕುಮಾರಸ್ವಾಮಿಯನ್ನು ಪೆದ್ದ ಅಂತ ಹೀಯಾಳಿಸಿದ ನಂತರ ರೊಚ್ಚಿಗೆದ್ದಿರುವ ಜೆಡಿಎಸ್ ನಾಯಕ ಸರಣಿ ಟ್ವೀಟ್ಗಳ ಮೂಲಕ ತಿರುಗೇಟು ನೀಡಿದ್ದಾರೆ.
‘‘ಅಧಿಕಾರದಲ್ಲಿದ್ದಾಗ
ಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ,’’ ಎಂದು ಕುಮಾರಸ್ವಾಮಿ ಮೊದಲ ಟ್ವೀಟ್ನಲ್ಲಿ ಹೇಳಿದ್ದಾರೆ.
ಸಿದ್ದರಾಮಯ್ಯ ಕೇವಲ ಅಗ್ಗದ ಯೋಜನೆಗಳ ಮೂಲಕ ಜನಪ್ರಿಯರಾಗಿದ್ದರು ಆದರೆ, ಜನರನ್ನು ಹಾಗೆ ಮರಳು ಮಾಡುವುದು ಸಾಧ್ಯವಿಲ್ಲ, ಕಳೆದ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಪಾಠ ಕಲಿಸಿದರು ಎಂದು ಕುಮಾರಸ್ವಾಮಿ ಎರಡನೇ ಟ್ವೀಟ್ನಲ್ಲಿ ಹೇಳಿದ್ದಾರೆ.
‘‘ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್ಗೆ ಪಾಠ ಕಲಿಸಲಿದ್ದಾರೆ@hd_kumaraswamy’’
ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗಲು ಕಾಂಗ್ರೆಸ್ ಕೂಡ ಕಾರಣ ಎಂದು ಕುಮಾರಸ್ವಾಮಿ ಆಪಾದಿಸಿದ್ದಾರೆ.
‘‘ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ‘ವಾಡ ಕೂಡ ಕಾರಣ, @hd_kumaraswamy’’
ರಾಮ ಭಕ್ತ ಹನುಮನಂತಿದ್ದ ತಮ್ಮಅನುಯಾಯಿಗಳನ್ನು ಖುದ್ದು ಸಿದ್ದರಾಮಯ್ಯನವರೇ ಬಿಜೆಪಿಗೆ ರವಾನಿಸಿದರು ಅಂತಲೂ ಕುಮಾರಸ್ವಾಮಿ ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.
‘‘ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ‘ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ‘ದಲ್ಲಿ ಕುಳಿತಿದ್ದ ‘ರಾಮ‘ನಿಗೂ ಗೊತ್ತಿತ್ತು@hd_kumaraswamy’’
ಸಮ್ಮಿಶ್ರ ಸರ್ಕಾರ ಉರುಳಲು ಸಿದ್ದರಾಮಯ್ಯನರೇ ಕಾರಣ ಎಂದು ಆರೋಪಿಸಿರುವ ಜೆಡಿಎಸ್ ನಾಯಕ, ತಾವು ಮುಖ್ಯಮಂತ್ರಿಯಾಗಿದ್ದಾಗ ಅನುಭವಿಸಿದ ಅಸಹಾಯಕತೆಯನ್ನು ತಮ್ಮ ಕೊನೆಯ ಟ್ವೀಟ್ ಮೂಲಕ ಹೊರಹಾಕಿದ್ದಾರೆ.
‘‘ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದನಾಗಿದ್ದು ವಿಪರ್ಯಾಸ@hd_kumaraswamy”




