AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?

ದೆಹಲಿ: ವಸೂಲಾಗದ ಸಾಲದ ಪ್ರಮಾಣ ಹೆಚ್ಚಾದ ಕಾರಣ ಆರ್ಥಿಕ ಸಂಕಷ್ಟ ಸ್ಥಿತಿಯಲ್ಲಿದ್ದ ಲಕ್ಷ್ಮೀ ವಿಲಾಸ್​ ಬ್ಯಾಂಕ್​ ಮೇಲೆ ಭಾರತೀಯ ರಿಸರ್ವ್​ ಬ್ಯಾಂಕ್ ಮೊರಟೋರಿಯಂ ಹೇರಿದ ನಂತರ ಷೇರುಪೇಟೆಯಲ್ಲಿ ಕಂಪನಿಯ ಷೇರು ಮೌಲ್ಯ ನಿರಂತರ ಕುಸಿತ ಕಂಡಿದೆ. ಗ್ರಾಹಕರಿಗೆ ತಿಂಗಳಿಗೆ ₹ 25,000ದವರೆಗೆ ಮಾತ್ರ ಹಣ ಹಿಂಪಡೆಯಲು ಆರ್​ಬಿಐ ಅವಕಾಶ ನೀಡಿದ್ದು ಠೇವಣಿ ಇಟ್ಟಿರುವ ಹಣ ಏನಾಗಬಹುದು ಎಂಬ ಆತಂಕವನ್ನು ಗ್ರಾಹಕರು ಎದುರಿಸುತ್ತಿದ್ದಾರೆ. ನಿರಂತರವಾಗಿ ಕುಸಿಯುತ್ತಿರುವ ಷೇರುಮೌಲ್ಯವು ಹೂಡಿಕೆದಾರರ ಹಣವನ್ನು ಡೋಲಾಯಮಾನ ಪರಿಸ್ಥಿತಿಗೆ ತಳ್ಳಿದೆ. ಬ್ಯಾಂಕ್​ನ ಷೇರುಮೌಲ್ಯವು ಸತತ […]

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?
ಸಿಂಗಾಪುರ ಮೂಲದ ಬ್ಯಾಂಕ್​ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನ
Skanda
| Edited By: |

Updated on:Nov 24, 2020 | 4:19 PM

Share

ದೆಹಲಿ: ವಸೂಲಾಗದ ಸಾಲದ ಪ್ರಮಾಣ ಹೆಚ್ಚಾದ ಕಾರಣ ಆರ್ಥಿಕ ಸಂಕಷ್ಟ ಸ್ಥಿತಿಯಲ್ಲಿದ್ದ ಲಕ್ಷ್ಮೀ ವಿಲಾಸ್​ ಬ್ಯಾಂಕ್​ ಮೇಲೆ ಭಾರತೀಯ ರಿಸರ್ವ್​ ಬ್ಯಾಂಕ್ ಮೊರಟೋರಿಯಂ ಹೇರಿದ ನಂತರ ಷೇರುಪೇಟೆಯಲ್ಲಿ ಕಂಪನಿಯ ಷೇರು ಮೌಲ್ಯ ನಿರಂತರ ಕುಸಿತ ಕಂಡಿದೆ. ಗ್ರಾಹಕರಿಗೆ ತಿಂಗಳಿಗೆ ₹ 25,000ದವರೆಗೆ ಮಾತ್ರ ಹಣ ಹಿಂಪಡೆಯಲು ಆರ್​ಬಿಐ ಅವಕಾಶ ನೀಡಿದ್ದು ಠೇವಣಿ ಇಟ್ಟಿರುವ ಹಣ ಏನಾಗಬಹುದು ಎಂಬ ಆತಂಕವನ್ನು ಗ್ರಾಹಕರು ಎದುರಿಸುತ್ತಿದ್ದಾರೆ. ನಿರಂತರವಾಗಿ ಕುಸಿಯುತ್ತಿರುವ ಷೇರುಮೌಲ್ಯವು ಹೂಡಿಕೆದಾರರ ಹಣವನ್ನು ಡೋಲಾಯಮಾನ ಪರಿಸ್ಥಿತಿಗೆ ತಳ್ಳಿದೆ.

ಬ್ಯಾಂಕ್​ನ ಷೇರುಮೌಲ್ಯವು ಸತತ ಆರನೇ ದಿನ ಕುಸಿತ ಕಂಡಿದೆ. ನಕಾರಾತ್ಮಕ ಸುದ್ದಿಗಳ ಪರಿಣಾಮ ಈವರೆಗೆ ಷೇರುಮೌಲ್ಯ ಶೇ.53ರಷ್ಟು ಕುಸಿದಿದೆ. ಮಂಗಳವಾರ ಒಂದೇ ದಿನದ ವಹಿವಾಟಿನಲ್ಲಿ ಷೇರುಮೌಲ್ಯ ಶೇ.9.88 ಕಡಿಮೆಯಾಗಿದೆ. ಇದೀಗ ಪ್ರತಿ ಷೇರಿನ ಮೌಲ್ಯ ₹ 7.30ರ ಆಸುಪಾಸಿನಲ್ಲಿ ವಹಿವಾಟಾಗುತ್ತಿದೆ. ಸಿಂಗಾಪುರ ಮೂಲದ ಡಿಬಿಎಸ್​ ಬ್ಯಾಂಕ್​ ಜತೆಗೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನ ಮಾಡಲು ಆರ್​ಬಿಐ ನಿರ್ಧರಿಸಿದೆ. ಡಿಬಿಎಸ್​ ಬ್ಯಾಂಕ್​ ಲಕ್ಷ್ಮೀ ವಿಲಾಸ್​ ಬ್ಯಾಂಕ್​ನಲ್ಲಿ ಸುಮಾರು ₹2000 ಕೋಟಿಯಷ್ಟು ಬಂಡವಾಳ ಹೂಡುವ ನಿರೀಕ್ಷೆಯಿದ್ದು, ನಂತರವಷ್ಟೇ ಆರ್​ಬಿಐ ಮೊರಟೋರಿಯಂ ತೆರವುಗೊಳಿಸಿ, ಗ್ರಾಹಕರಿಗೆ ಹಣಹಿಂಪಡೆಯಲು ವಿಧಿಸಿರುವ ನಿರ್ಬಂಧವನ್ನು ಹಿಂಪಡೆಯಬಹುದು.

ಕಳೆದ ವರ್ಷದ ಸೆಪ್ಟೆಂಬರ್​ನಿಂದ ಈಚೆಗೆ ಮೊರಟೋರಿಯಂ ನಿರ್ಬಂಧಕ್ಕೆ ಒಳಪಟ್ಟ ಮೂರನೇ ಬ್ಯಾಂಕ್​ ಇದಾಗಿದ್ದು ಈ ಹಿಂದೆ ಯೆಸ್​ ಬ್ಯಾಂಕ್ ಮತ್ತು ಪಿಎಂಸಿ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ ವಿಧಿಸಿತ್ತು. ಸ್ಟೇಟ್ ​ಬ್ಯಾಂಕ್ ಆಫ್​ ಇಂಡಿಯಾ ನೇತೃತ್ವದಲ್ಲಿ ಇತರ ಬ್ಯಾಂಕ್​ಗಳು ಬಂಡವಾಳ ಒದಗಿಸಿ ಯೆಸ್​ ಬ್ಯಾಂಕ್​ ಅನ್ನು ಮೇಲೆತ್ತಿದವು. ಆದರೆ ಪಿಎಂಸಿ ಇನ್ನೂ ಸಂಕಷ್ಟದಲ್ಲಿಯೇ ಇದೆ. ಆಡಳಿತ ಮಂಡಳಿಗಳ ಬೇಜವಾಬ್ದಾರಿಯಿಂದಾಗಿ ಬ್ಯಾಂಕ್​ಗಳು ಸಂಕಷ್ಟಕ್ಕೀಡಾದರೆ ನಮ್ಮ ಹಣದ ಗತಿಯೇನು ಎಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

https://www.facebook.com/Tv9Kannada/videos/248333016630058/

Published On - 2:31 pm, Tue, 24 November 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ