AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?

ದೆಹಲಿ: ವಸೂಲಾಗದ ಸಾಲದ ಪ್ರಮಾಣ ಹೆಚ್ಚಾದ ಕಾರಣ ಆರ್ಥಿಕ ಸಂಕಷ್ಟ ಸ್ಥಿತಿಯಲ್ಲಿದ್ದ ಲಕ್ಷ್ಮೀ ವಿಲಾಸ್​ ಬ್ಯಾಂಕ್​ ಮೇಲೆ ಭಾರತೀಯ ರಿಸರ್ವ್​ ಬ್ಯಾಂಕ್ ಮೊರಟೋರಿಯಂ ಹೇರಿದ ನಂತರ ಷೇರುಪೇಟೆಯಲ್ಲಿ ಕಂಪನಿಯ ಷೇರು ಮೌಲ್ಯ ನಿರಂತರ ಕುಸಿತ ಕಂಡಿದೆ. ಗ್ರಾಹಕರಿಗೆ ತಿಂಗಳಿಗೆ ₹ 25,000ದವರೆಗೆ ಮಾತ್ರ ಹಣ ಹಿಂಪಡೆಯಲು ಆರ್​ಬಿಐ ಅವಕಾಶ ನೀಡಿದ್ದು ಠೇವಣಿ ಇಟ್ಟಿರುವ ಹಣ ಏನಾಗಬಹುದು ಎಂಬ ಆತಂಕವನ್ನು ಗ್ರಾಹಕರು ಎದುರಿಸುತ್ತಿದ್ದಾರೆ. ನಿರಂತರವಾಗಿ ಕುಸಿಯುತ್ತಿರುವ ಷೇರುಮೌಲ್ಯವು ಹೂಡಿಕೆದಾರರ ಹಣವನ್ನು ಡೋಲಾಯಮಾನ ಪರಿಸ್ಥಿತಿಗೆ ತಳ್ಳಿದೆ. ಬ್ಯಾಂಕ್​ನ ಷೇರುಮೌಲ್ಯವು ಸತತ […]

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?
ಸಿಂಗಾಪುರ ಮೂಲದ ಬ್ಯಾಂಕ್​ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನ
Skanda
| Updated By: ಆಯೇಷಾ ಬಾನು|

Updated on:Nov 24, 2020 | 4:19 PM

Share

ದೆಹಲಿ: ವಸೂಲಾಗದ ಸಾಲದ ಪ್ರಮಾಣ ಹೆಚ್ಚಾದ ಕಾರಣ ಆರ್ಥಿಕ ಸಂಕಷ್ಟ ಸ್ಥಿತಿಯಲ್ಲಿದ್ದ ಲಕ್ಷ್ಮೀ ವಿಲಾಸ್​ ಬ್ಯಾಂಕ್​ ಮೇಲೆ ಭಾರತೀಯ ರಿಸರ್ವ್​ ಬ್ಯಾಂಕ್ ಮೊರಟೋರಿಯಂ ಹೇರಿದ ನಂತರ ಷೇರುಪೇಟೆಯಲ್ಲಿ ಕಂಪನಿಯ ಷೇರು ಮೌಲ್ಯ ನಿರಂತರ ಕುಸಿತ ಕಂಡಿದೆ. ಗ್ರಾಹಕರಿಗೆ ತಿಂಗಳಿಗೆ ₹ 25,000ದವರೆಗೆ ಮಾತ್ರ ಹಣ ಹಿಂಪಡೆಯಲು ಆರ್​ಬಿಐ ಅವಕಾಶ ನೀಡಿದ್ದು ಠೇವಣಿ ಇಟ್ಟಿರುವ ಹಣ ಏನಾಗಬಹುದು ಎಂಬ ಆತಂಕವನ್ನು ಗ್ರಾಹಕರು ಎದುರಿಸುತ್ತಿದ್ದಾರೆ. ನಿರಂತರವಾಗಿ ಕುಸಿಯುತ್ತಿರುವ ಷೇರುಮೌಲ್ಯವು ಹೂಡಿಕೆದಾರರ ಹಣವನ್ನು ಡೋಲಾಯಮಾನ ಪರಿಸ್ಥಿತಿಗೆ ತಳ್ಳಿದೆ.

ಬ್ಯಾಂಕ್​ನ ಷೇರುಮೌಲ್ಯವು ಸತತ ಆರನೇ ದಿನ ಕುಸಿತ ಕಂಡಿದೆ. ನಕಾರಾತ್ಮಕ ಸುದ್ದಿಗಳ ಪರಿಣಾಮ ಈವರೆಗೆ ಷೇರುಮೌಲ್ಯ ಶೇ.53ರಷ್ಟು ಕುಸಿದಿದೆ. ಮಂಗಳವಾರ ಒಂದೇ ದಿನದ ವಹಿವಾಟಿನಲ್ಲಿ ಷೇರುಮೌಲ್ಯ ಶೇ.9.88 ಕಡಿಮೆಯಾಗಿದೆ. ಇದೀಗ ಪ್ರತಿ ಷೇರಿನ ಮೌಲ್ಯ ₹ 7.30ರ ಆಸುಪಾಸಿನಲ್ಲಿ ವಹಿವಾಟಾಗುತ್ತಿದೆ. ಸಿಂಗಾಪುರ ಮೂಲದ ಡಿಬಿಎಸ್​ ಬ್ಯಾಂಕ್​ ಜತೆಗೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನ ಮಾಡಲು ಆರ್​ಬಿಐ ನಿರ್ಧರಿಸಿದೆ. ಡಿಬಿಎಸ್​ ಬ್ಯಾಂಕ್​ ಲಕ್ಷ್ಮೀ ವಿಲಾಸ್​ ಬ್ಯಾಂಕ್​ನಲ್ಲಿ ಸುಮಾರು ₹2000 ಕೋಟಿಯಷ್ಟು ಬಂಡವಾಳ ಹೂಡುವ ನಿರೀಕ್ಷೆಯಿದ್ದು, ನಂತರವಷ್ಟೇ ಆರ್​ಬಿಐ ಮೊರಟೋರಿಯಂ ತೆರವುಗೊಳಿಸಿ, ಗ್ರಾಹಕರಿಗೆ ಹಣಹಿಂಪಡೆಯಲು ವಿಧಿಸಿರುವ ನಿರ್ಬಂಧವನ್ನು ಹಿಂಪಡೆಯಬಹುದು.

ಕಳೆದ ವರ್ಷದ ಸೆಪ್ಟೆಂಬರ್​ನಿಂದ ಈಚೆಗೆ ಮೊರಟೋರಿಯಂ ನಿರ್ಬಂಧಕ್ಕೆ ಒಳಪಟ್ಟ ಮೂರನೇ ಬ್ಯಾಂಕ್​ ಇದಾಗಿದ್ದು ಈ ಹಿಂದೆ ಯೆಸ್​ ಬ್ಯಾಂಕ್ ಮತ್ತು ಪಿಎಂಸಿ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ ವಿಧಿಸಿತ್ತು. ಸ್ಟೇಟ್ ​ಬ್ಯಾಂಕ್ ಆಫ್​ ಇಂಡಿಯಾ ನೇತೃತ್ವದಲ್ಲಿ ಇತರ ಬ್ಯಾಂಕ್​ಗಳು ಬಂಡವಾಳ ಒದಗಿಸಿ ಯೆಸ್​ ಬ್ಯಾಂಕ್​ ಅನ್ನು ಮೇಲೆತ್ತಿದವು. ಆದರೆ ಪಿಎಂಸಿ ಇನ್ನೂ ಸಂಕಷ್ಟದಲ್ಲಿಯೇ ಇದೆ. ಆಡಳಿತ ಮಂಡಳಿಗಳ ಬೇಜವಾಬ್ದಾರಿಯಿಂದಾಗಿ ಬ್ಯಾಂಕ್​ಗಳು ಸಂಕಷ್ಟಕ್ಕೀಡಾದರೆ ನಮ್ಮ ಹಣದ ಗತಿಯೇನು ಎಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

https://www.facebook.com/Tv9Kannada/videos/248333016630058/

Published On - 2:31 pm, Tue, 24 November 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್