AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?

ದೆಹಲಿ: ವಸೂಲಾಗದ ಸಾಲದ ಪ್ರಮಾಣ ಹೆಚ್ಚಾದ ಕಾರಣ ಆರ್ಥಿಕ ಸಂಕಷ್ಟ ಸ್ಥಿತಿಯಲ್ಲಿದ್ದ ಲಕ್ಷ್ಮೀ ವಿಲಾಸ್​ ಬ್ಯಾಂಕ್​ ಮೇಲೆ ಭಾರತೀಯ ರಿಸರ್ವ್​ ಬ್ಯಾಂಕ್ ಮೊರಟೋರಿಯಂ ಹೇರಿದ ನಂತರ ಷೇರುಪೇಟೆಯಲ್ಲಿ ಕಂಪನಿಯ ಷೇರು ಮೌಲ್ಯ ನಿರಂತರ ಕುಸಿತ ಕಂಡಿದೆ. ಗ್ರಾಹಕರಿಗೆ ತಿಂಗಳಿಗೆ ₹ 25,000ದವರೆಗೆ ಮಾತ್ರ ಹಣ ಹಿಂಪಡೆಯಲು ಆರ್​ಬಿಐ ಅವಕಾಶ ನೀಡಿದ್ದು ಠೇವಣಿ ಇಟ್ಟಿರುವ ಹಣ ಏನಾಗಬಹುದು ಎಂಬ ಆತಂಕವನ್ನು ಗ್ರಾಹಕರು ಎದುರಿಸುತ್ತಿದ್ದಾರೆ. ನಿರಂತರವಾಗಿ ಕುಸಿಯುತ್ತಿರುವ ಷೇರುಮೌಲ್ಯವು ಹೂಡಿಕೆದಾರರ ಹಣವನ್ನು ಡೋಲಾಯಮಾನ ಪರಿಸ್ಥಿತಿಗೆ ತಳ್ಳಿದೆ. ಬ್ಯಾಂಕ್​ನ ಷೇರುಮೌಲ್ಯವು ಸತತ […]

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?
ಸಿಂಗಾಪುರ ಮೂಲದ ಬ್ಯಾಂಕ್​ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನ
Skanda
| Edited By: ಆಯೇಷಾ ಬಾನು|

Updated on:Nov 24, 2020 | 4:19 PM

Share

ದೆಹಲಿ: ವಸೂಲಾಗದ ಸಾಲದ ಪ್ರಮಾಣ ಹೆಚ್ಚಾದ ಕಾರಣ ಆರ್ಥಿಕ ಸಂಕಷ್ಟ ಸ್ಥಿತಿಯಲ್ಲಿದ್ದ ಲಕ್ಷ್ಮೀ ವಿಲಾಸ್​ ಬ್ಯಾಂಕ್​ ಮೇಲೆ ಭಾರತೀಯ ರಿಸರ್ವ್​ ಬ್ಯಾಂಕ್ ಮೊರಟೋರಿಯಂ ಹೇರಿದ ನಂತರ ಷೇರುಪೇಟೆಯಲ್ಲಿ ಕಂಪನಿಯ ಷೇರು ಮೌಲ್ಯ ನಿರಂತರ ಕುಸಿತ ಕಂಡಿದೆ. ಗ್ರಾಹಕರಿಗೆ ತಿಂಗಳಿಗೆ ₹ 25,000ದವರೆಗೆ ಮಾತ್ರ ಹಣ ಹಿಂಪಡೆಯಲು ಆರ್​ಬಿಐ ಅವಕಾಶ ನೀಡಿದ್ದು ಠೇವಣಿ ಇಟ್ಟಿರುವ ಹಣ ಏನಾಗಬಹುದು ಎಂಬ ಆತಂಕವನ್ನು ಗ್ರಾಹಕರು ಎದುರಿಸುತ್ತಿದ್ದಾರೆ. ನಿರಂತರವಾಗಿ ಕುಸಿಯುತ್ತಿರುವ ಷೇರುಮೌಲ್ಯವು ಹೂಡಿಕೆದಾರರ ಹಣವನ್ನು ಡೋಲಾಯಮಾನ ಪರಿಸ್ಥಿತಿಗೆ ತಳ್ಳಿದೆ.

ಬ್ಯಾಂಕ್​ನ ಷೇರುಮೌಲ್ಯವು ಸತತ ಆರನೇ ದಿನ ಕುಸಿತ ಕಂಡಿದೆ. ನಕಾರಾತ್ಮಕ ಸುದ್ದಿಗಳ ಪರಿಣಾಮ ಈವರೆಗೆ ಷೇರುಮೌಲ್ಯ ಶೇ.53ರಷ್ಟು ಕುಸಿದಿದೆ. ಮಂಗಳವಾರ ಒಂದೇ ದಿನದ ವಹಿವಾಟಿನಲ್ಲಿ ಷೇರುಮೌಲ್ಯ ಶೇ.9.88 ಕಡಿಮೆಯಾಗಿದೆ. ಇದೀಗ ಪ್ರತಿ ಷೇರಿನ ಮೌಲ್ಯ ₹ 7.30ರ ಆಸುಪಾಸಿನಲ್ಲಿ ವಹಿವಾಟಾಗುತ್ತಿದೆ. ಸಿಂಗಾಪುರ ಮೂಲದ ಡಿಬಿಎಸ್​ ಬ್ಯಾಂಕ್​ ಜತೆಗೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನ ಮಾಡಲು ಆರ್​ಬಿಐ ನಿರ್ಧರಿಸಿದೆ. ಡಿಬಿಎಸ್​ ಬ್ಯಾಂಕ್​ ಲಕ್ಷ್ಮೀ ವಿಲಾಸ್​ ಬ್ಯಾಂಕ್​ನಲ್ಲಿ ಸುಮಾರು ₹2000 ಕೋಟಿಯಷ್ಟು ಬಂಡವಾಳ ಹೂಡುವ ನಿರೀಕ್ಷೆಯಿದ್ದು, ನಂತರವಷ್ಟೇ ಆರ್​ಬಿಐ ಮೊರಟೋರಿಯಂ ತೆರವುಗೊಳಿಸಿ, ಗ್ರಾಹಕರಿಗೆ ಹಣಹಿಂಪಡೆಯಲು ವಿಧಿಸಿರುವ ನಿರ್ಬಂಧವನ್ನು ಹಿಂಪಡೆಯಬಹುದು.

ಕಳೆದ ವರ್ಷದ ಸೆಪ್ಟೆಂಬರ್​ನಿಂದ ಈಚೆಗೆ ಮೊರಟೋರಿಯಂ ನಿರ್ಬಂಧಕ್ಕೆ ಒಳಪಟ್ಟ ಮೂರನೇ ಬ್ಯಾಂಕ್​ ಇದಾಗಿದ್ದು ಈ ಹಿಂದೆ ಯೆಸ್​ ಬ್ಯಾಂಕ್ ಮತ್ತು ಪಿಎಂಸಿ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ ವಿಧಿಸಿತ್ತು. ಸ್ಟೇಟ್ ​ಬ್ಯಾಂಕ್ ಆಫ್​ ಇಂಡಿಯಾ ನೇತೃತ್ವದಲ್ಲಿ ಇತರ ಬ್ಯಾಂಕ್​ಗಳು ಬಂಡವಾಳ ಒದಗಿಸಿ ಯೆಸ್​ ಬ್ಯಾಂಕ್​ ಅನ್ನು ಮೇಲೆತ್ತಿದವು. ಆದರೆ ಪಿಎಂಸಿ ಇನ್ನೂ ಸಂಕಷ್ಟದಲ್ಲಿಯೇ ಇದೆ. ಆಡಳಿತ ಮಂಡಳಿಗಳ ಬೇಜವಾಬ್ದಾರಿಯಿಂದಾಗಿ ಬ್ಯಾಂಕ್​ಗಳು ಸಂಕಷ್ಟಕ್ಕೀಡಾದರೆ ನಮ್ಮ ಹಣದ ಗತಿಯೇನು ಎಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

https://www.facebook.com/Tv9Kannada/videos/248333016630058/

Published On - 2:31 pm, Tue, 24 November 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು