AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಸಂಸದನಾಗಿ, ಇಂದು ಶಾಸಕನಾಗಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಲಾಲ್ಡುಹೋಮಾಗೆ ಗೇಟ್​ಪಾಸ್

ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಂಡ ಪ್ರಪ್ರಥಮ ಲೋಕಸಭಾ ಸದಸ್ಯ ಎಂಬ ಅಪಖ್ಯಾತಿಗೂ ಇವರು ಪಾತ್ರರಾಗಬೇಕಾಯಿತು. ಇದೀಗ, ಇದೇ ಕಾಯ್ದೆಯಡಿಯಲ್ಲಿ ಶಾಸಕನಾಗಿ ಅನರ್ಹಗೊಂಡಿದ್ದಾರೆ.

ಅಂದು ಸಂಸದನಾಗಿ, ಇಂದು ಶಾಸಕನಾಗಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಲಾಲ್ಡುಹೋಮಾಗೆ ಗೇಟ್​ಪಾಸ್
ಸ್ವತಂತ್ರ ಶಾಸಕ ಲಾಲ್ಡುಹೋಮಾ
shruti hegde
| Updated By: KUSHAL V|

Updated on: Nov 29, 2020 | 3:42 PM

Share

ಐಜ್ವಾಲ್​: ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಶಾಸಕ ಲಾಲ್ಡುಹೋಮಾರನ್ನು ಕಳೆದ ಶುಕ್ರವಾರ ಮಿಜೋರಾಂ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದಿದ್ದ ಲಾಲ್ಡುಹೋಮಾ ತದ ನಂತರ ಜೊರಾಂ ಪೀಪಲ್ಸ್ ಮೂವ್​ಮೆಂಟ್(ZPM) ಪಕ್ಷ ಸೇರಿದ್ದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಲಾಗಿದೆ.

ಲಾಲ್ಡುಹೋಮಾ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಹಿಂದೆ ತಾವಿದ್ದ ಕಾಂಗ್ರೆಸ್​ ಪಕ್ಷವನ್ನು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿದ್ದರು.

ಆದರೆ ಇದೀಗ, ಜೊರಾಂ ಪೀಪಲ್ಸ್ ಮೂವ್​ಮೆಂಟ್(ZPM) ಪಕ್ಷ ಸೇರಿದ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಲಾಲ್ಡುಹೋಮಾರ ಸದಸ್ಯತ್ವ ರದ್ದಾಗಿದೆ ಎಂದು ಸ್ಪೀಕರ್ ಲಾಲ್ರೆನ್ಲಿಯಾನಾ ಸೈಲೊ ಹೇಳಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಲಾಲ್ಡುಹೋಮಾ 1988ರಲ್ಲಿ ಲೋಕಸಭಾ ಸದಸ್ಯರಾಗಿದ್ದಾಗ ಕಾಂಗ್ರೆಸ್​ ಪಕ್ಷದಿಂದ ರಾಜೀನಾಮೆ ನೀಡಿದ್ದಕ್ಕೆ ಇದೇ ಕಾಯ್ದೆ ಅಡಿಯಲ್ಲಿ ಇವರನ್ನು ಸಂಸದನಾಗಿ ಅನರ್ಹಗೊಳಿಸಲಾಗಿತ್ತು. ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಂಡ ಪ್ರಪ್ರಥಮ ಲೋಕಸಭಾ ಸದಸ್ಯ ಎಂಬ ಅಪಖ್ಯಾತಿಗೂ ಇವರು ಪಾತ್ರರಾಗಬೇಕಾಯಿತು. ಇದೀಗ, ಇದೇ ಕಾಯ್ದೆಯಡಿಯಲ್ಲಿ ಶಾಸಕನಾಗಿ ಅನರ್ಹಗೊಂಡಿದ್ದಾರೆ.

ಸಂವಿಧಾನದ 10ನೇ ಶೆಡ್ಯೂಲ್​ನ ಪ್ಯಾರಾ2(2) ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಲಾಲ್ಡುಹೋಮಾರನ್ನು ಅನರ್ಹಗೊಳಿಸುವಂತೆ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್​ಎಫ್​) ನ 12 ಶಾಸಕರು ಸ್ಪೀಕರ್​ಗೆ ಅರ್ಜಿ ಸಲ್ಲಿಸಿದ್ದರು. ಪರಿಶೀಲನೆಯ ಆಧಾರದ ಮೇಲೆ ಲಾಲ್ಡುಹೋಮಾ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ ಎಂದು ಸ್ಪೀಕರ್ ಸೈಲೋ ಹೇಳಿದ್ದಾರೆ.

ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ