AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಮಳೆಗೆ ಉತ್ತರ ಕನ್ನಡದಲ್ಲಿ 1.5ಕಿ.ಮೀ. ಭೂಕುಸಿತ, ಆತಂಕದಲ್ಲಿ ಸ್ಥಳೀಯರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುಡ್ಡ ಕುಸಿತ ಆರಂಭವಾಗಿದೆ. ಕಾರವಾರದಿಂದ 35 ಕಿಲೋಮೀಟರ್ ದೂರದ ಅರಣ್ಯ ಭಾಗದಲ್ಲಿರುವ ನಗೆ ಗ್ರಾಮದ ಗುಡ್ಡ ಪ್ರದೇಶದಲ್ಲಿ ಸುಮಾರು ಒಂದೂವರೆ ಕಿಲೋಮೀಟರ್ ಭೂಕುಸಿತವಾಗಿದೆ. ಕುಸಿತದ ಪರಿಣಾಮ ಮರಗಳು, ಬೃಹತ್ ಬಂಡೆ ಕಲ್ಲುಗಳು ಮಣ್ಣಿನಲ್ಲಿ ಕೊಚ್ಚಿಕೊಂಡು ಕೆಳಕ್ಕೆ ಬಂದು ಸೇರಿವೆ. ಅದೃಷ್ಟವಶಾತ್ ಗ್ರಾಮದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಸ್ಥಳೀಯರ ಗದ್ದೆ, ತೋಟಗಳತ್ತ ಮಣ್ಣು ಕುಸಿತವಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಭೂಮಿ […]

ಸತತ ಮಳೆಗೆ ಉತ್ತರ ಕನ್ನಡದಲ್ಲಿ 1.5ಕಿ.ಮೀ. ಭೂಕುಸಿತ, ಆತಂಕದಲ್ಲಿ ಸ್ಥಳೀಯರು
Guru
|

Updated on: Aug 09, 2020 | 5:44 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುಡ್ಡ ಕುಸಿತ ಆರಂಭವಾಗಿದೆ.

ಕಾರವಾರದಿಂದ 35 ಕಿಲೋಮೀಟರ್ ದೂರದ ಅರಣ್ಯ ಭಾಗದಲ್ಲಿರುವ ನಗೆ ಗ್ರಾಮದ ಗುಡ್ಡ ಪ್ರದೇಶದಲ್ಲಿ ಸುಮಾರು ಒಂದೂವರೆ ಕಿಲೋಮೀಟರ್ ಭೂಕುಸಿತವಾಗಿದೆ. ಕುಸಿತದ ಪರಿಣಾಮ ಮರಗಳು, ಬೃಹತ್ ಬಂಡೆ ಕಲ್ಲುಗಳು ಮಣ್ಣಿನಲ್ಲಿ ಕೊಚ್ಚಿಕೊಂಡು ಕೆಳಕ್ಕೆ ಬಂದು ಸೇರಿವೆ. ಅದೃಷ್ಟವಶಾತ್ ಗ್ರಾಮದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಸ್ಥಳೀಯರ ಗದ್ದೆ, ತೋಟಗಳತ್ತ ಮಣ್ಣು ಕುಸಿತವಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಭೂಮಿ ಕುಸಿತವಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಗದ್ದೆ, ತೋಟಗಳು ನಾಶವಾಗುವ ಭೀತಿಯಲ್ಲಿ ಗ್ರಾಮದ ಜನ ಆತಂಕಗೊಂಡಿದ್ದಾರೆ. ಕಾರವಾರ ಅಲ್ಲದೇ ಶಿರಸಿಯ ಜಾಜಿಗುಡ್ಡ ವ್ಯಾಪ್ತಿಯಲ್ಲೂ ಕೂಡ ಗುಡ್ಡ ಬಿರುಕು ಬಿಟ್ಚಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಸ್ಥಳೀಯ ಜನರಿದ್ದಾರೆ. ಕಾರವಾರ ಹಾಗೂ ಶಿರಸಿ ಭಾಗದ ಅರಣ್ಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾಗೇನೆ ಸ್ಥಳೀಯರಿಗೆ ಕುಸಿತದ ಸ್ಥಳಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​