AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಮಳೆಗೆ ಉತ್ತರ ಕನ್ನಡದಲ್ಲಿ 1.5ಕಿ.ಮೀ. ಭೂಕುಸಿತ, ಆತಂಕದಲ್ಲಿ ಸ್ಥಳೀಯರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುಡ್ಡ ಕುಸಿತ ಆರಂಭವಾಗಿದೆ. ಕಾರವಾರದಿಂದ 35 ಕಿಲೋಮೀಟರ್ ದೂರದ ಅರಣ್ಯ ಭಾಗದಲ್ಲಿರುವ ನಗೆ ಗ್ರಾಮದ ಗುಡ್ಡ ಪ್ರದೇಶದಲ್ಲಿ ಸುಮಾರು ಒಂದೂವರೆ ಕಿಲೋಮೀಟರ್ ಭೂಕುಸಿತವಾಗಿದೆ. ಕುಸಿತದ ಪರಿಣಾಮ ಮರಗಳು, ಬೃಹತ್ ಬಂಡೆ ಕಲ್ಲುಗಳು ಮಣ್ಣಿನಲ್ಲಿ ಕೊಚ್ಚಿಕೊಂಡು ಕೆಳಕ್ಕೆ ಬಂದು ಸೇರಿವೆ. ಅದೃಷ್ಟವಶಾತ್ ಗ್ರಾಮದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಸ್ಥಳೀಯರ ಗದ್ದೆ, ತೋಟಗಳತ್ತ ಮಣ್ಣು ಕುಸಿತವಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಭೂಮಿ […]

ಸತತ ಮಳೆಗೆ ಉತ್ತರ ಕನ್ನಡದಲ್ಲಿ 1.5ಕಿ.ಮೀ. ಭೂಕುಸಿತ, ಆತಂಕದಲ್ಲಿ ಸ್ಥಳೀಯರು
Guru
|

Updated on: Aug 09, 2020 | 5:44 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುಡ್ಡ ಕುಸಿತ ಆರಂಭವಾಗಿದೆ.

ಕಾರವಾರದಿಂದ 35 ಕಿಲೋಮೀಟರ್ ದೂರದ ಅರಣ್ಯ ಭಾಗದಲ್ಲಿರುವ ನಗೆ ಗ್ರಾಮದ ಗುಡ್ಡ ಪ್ರದೇಶದಲ್ಲಿ ಸುಮಾರು ಒಂದೂವರೆ ಕಿಲೋಮೀಟರ್ ಭೂಕುಸಿತವಾಗಿದೆ. ಕುಸಿತದ ಪರಿಣಾಮ ಮರಗಳು, ಬೃಹತ್ ಬಂಡೆ ಕಲ್ಲುಗಳು ಮಣ್ಣಿನಲ್ಲಿ ಕೊಚ್ಚಿಕೊಂಡು ಕೆಳಕ್ಕೆ ಬಂದು ಸೇರಿವೆ. ಅದೃಷ್ಟವಶಾತ್ ಗ್ರಾಮದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಸ್ಥಳೀಯರ ಗದ್ದೆ, ತೋಟಗಳತ್ತ ಮಣ್ಣು ಕುಸಿತವಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಭೂಮಿ ಕುಸಿತವಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಗದ್ದೆ, ತೋಟಗಳು ನಾಶವಾಗುವ ಭೀತಿಯಲ್ಲಿ ಗ್ರಾಮದ ಜನ ಆತಂಕಗೊಂಡಿದ್ದಾರೆ. ಕಾರವಾರ ಅಲ್ಲದೇ ಶಿರಸಿಯ ಜಾಜಿಗುಡ್ಡ ವ್ಯಾಪ್ತಿಯಲ್ಲೂ ಕೂಡ ಗುಡ್ಡ ಬಿರುಕು ಬಿಟ್ಚಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಸ್ಥಳೀಯ ಜನರಿದ್ದಾರೆ. ಕಾರವಾರ ಹಾಗೂ ಶಿರಸಿ ಭಾಗದ ಅರಣ್ಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾಗೇನೆ ಸ್ಥಳೀಯರಿಗೆ ಕುಸಿತದ ಸ್ಥಳಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?