AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಮಳೆಗೆ ಉತ್ತರ ಕನ್ನಡದಲ್ಲಿ 1.5ಕಿ.ಮೀ. ಭೂಕುಸಿತ, ಆತಂಕದಲ್ಲಿ ಸ್ಥಳೀಯರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುಡ್ಡ ಕುಸಿತ ಆರಂಭವಾಗಿದೆ. ಕಾರವಾರದಿಂದ 35 ಕಿಲೋಮೀಟರ್ ದೂರದ ಅರಣ್ಯ ಭಾಗದಲ್ಲಿರುವ ನಗೆ ಗ್ರಾಮದ ಗುಡ್ಡ ಪ್ರದೇಶದಲ್ಲಿ ಸುಮಾರು ಒಂದೂವರೆ ಕಿಲೋಮೀಟರ್ ಭೂಕುಸಿತವಾಗಿದೆ. ಕುಸಿತದ ಪರಿಣಾಮ ಮರಗಳು, ಬೃಹತ್ ಬಂಡೆ ಕಲ್ಲುಗಳು ಮಣ್ಣಿನಲ್ಲಿ ಕೊಚ್ಚಿಕೊಂಡು ಕೆಳಕ್ಕೆ ಬಂದು ಸೇರಿವೆ. ಅದೃಷ್ಟವಶಾತ್ ಗ್ರಾಮದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಸ್ಥಳೀಯರ ಗದ್ದೆ, ತೋಟಗಳತ್ತ ಮಣ್ಣು ಕುಸಿತವಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಭೂಮಿ […]

ಸತತ ಮಳೆಗೆ ಉತ್ತರ ಕನ್ನಡದಲ್ಲಿ 1.5ಕಿ.ಮೀ. ಭೂಕುಸಿತ, ಆತಂಕದಲ್ಲಿ ಸ್ಥಳೀಯರು
Guru
|

Updated on: Aug 09, 2020 | 5:44 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುಡ್ಡ ಕುಸಿತ ಆರಂಭವಾಗಿದೆ.

ಕಾರವಾರದಿಂದ 35 ಕಿಲೋಮೀಟರ್ ದೂರದ ಅರಣ್ಯ ಭಾಗದಲ್ಲಿರುವ ನಗೆ ಗ್ರಾಮದ ಗುಡ್ಡ ಪ್ರದೇಶದಲ್ಲಿ ಸುಮಾರು ಒಂದೂವರೆ ಕಿಲೋಮೀಟರ್ ಭೂಕುಸಿತವಾಗಿದೆ. ಕುಸಿತದ ಪರಿಣಾಮ ಮರಗಳು, ಬೃಹತ್ ಬಂಡೆ ಕಲ್ಲುಗಳು ಮಣ್ಣಿನಲ್ಲಿ ಕೊಚ್ಚಿಕೊಂಡು ಕೆಳಕ್ಕೆ ಬಂದು ಸೇರಿವೆ. ಅದೃಷ್ಟವಶಾತ್ ಗ್ರಾಮದ ಮನೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಸ್ಥಳೀಯರ ಗದ್ದೆ, ತೋಟಗಳತ್ತ ಮಣ್ಣು ಕುಸಿತವಾಗಿದೆ. ಈಗ ಸುರಿಯುತ್ತಿರುವ ಮಳೆಯಿಂದ ಮತ್ತಷ್ಟು ಭೂಮಿ ಕುಸಿತವಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಗದ್ದೆ, ತೋಟಗಳು ನಾಶವಾಗುವ ಭೀತಿಯಲ್ಲಿ ಗ್ರಾಮದ ಜನ ಆತಂಕಗೊಂಡಿದ್ದಾರೆ. ಕಾರವಾರ ಅಲ್ಲದೇ ಶಿರಸಿಯ ಜಾಜಿಗುಡ್ಡ ವ್ಯಾಪ್ತಿಯಲ್ಲೂ ಕೂಡ ಗುಡ್ಡ ಬಿರುಕು ಬಿಟ್ಚಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಸ್ಥಳೀಯ ಜನರಿದ್ದಾರೆ. ಕಾರವಾರ ಹಾಗೂ ಶಿರಸಿ ಭಾಗದ ಅರಣ್ಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾಗೇನೆ ಸ್ಥಳೀಯರಿಗೆ ಕುಸಿತದ ಸ್ಥಳಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ