ಪಿತೃಪಕ್ಷದ ಪೂಜೆಗೆ ತೆರಳಿದ್ದ ವಕೀಲನ ಮನೆಗೆ ಕನ್ನ: ಚಿನ್ನಾಭರಣ, ಬೆಳ್ಳಿ ಹೊತ್ತೊಯ್ದ ಖದೀಮರು

ಬೆಂಗಳೂರು ಗ್ರಾಮಾಂತರ: ಪಿತೃಪಕ್ಷದ ಪೂಜಾ ಕಾರ್ಯಕ್ಕೆ ತೆರಳಿದ್ದಾಗ ವಕೀಲನ ಮನೆ ಕಳ್ಳತನವಾಗಿರುವ ಘಟನೆ ಜಿಲ್ಲೆಯ ನೆಲಮಂಗಲದ ಸುಭಾಷ್ ನಗರದಲ್ಲಿ ನಡೆದಿದೆ. ಸುಭಾಷ್​ನಗರದ ವಕೀಲ ಹನುಮಂತರಾಜು ಮನೆಯಲ್ಲಿ ಕೃತ್ಯ ನಡೆದಿದೆ. ಹನುಮಂತರಾಜು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಪಿತೃಪಕ್ಷದ ಪೂಜಾ ಕಾರ್ಯ ಮುಗಿಸಿ ವಾಪಸ್ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲು ಮೀಟಿದ್ದ ಕಳ್ಳರು ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ.  ಸ್ಥಳಕ್ಕಾಗಮಿಸಿದ ನೆಲಮಂಗಲ ನಗರ […]

ಪಿತೃಪಕ್ಷದ ಪೂಜೆಗೆ ತೆರಳಿದ್ದ ವಕೀಲನ ಮನೆಗೆ ಕನ್ನ: ಚಿನ್ನಾಭರಣ, ಬೆಳ್ಳಿ ಹೊತ್ತೊಯ್ದ ಖದೀಮರು
ಸಾಧು ಶ್ರೀನಾಥ್​ Edited By:

Updated on: Sep 13, 2020 | 6:25 PM

ಬೆಂಗಳೂರು ಗ್ರಾಮಾಂತರ: ಪಿತೃಪಕ್ಷದ ಪೂಜಾ ಕಾರ್ಯಕ್ಕೆ ತೆರಳಿದ್ದಾಗ ವಕೀಲನ ಮನೆ ಕಳ್ಳತನವಾಗಿರುವ ಘಟನೆ ಜಿಲ್ಲೆಯ ನೆಲಮಂಗಲದ ಸುಭಾಷ್ ನಗರದಲ್ಲಿ ನಡೆದಿದೆ.

ಸುಭಾಷ್​ನಗರದ ವಕೀಲ ಹನುಮಂತರಾಜು ಮನೆಯಲ್ಲಿ ಕೃತ್ಯ ನಡೆದಿದೆ. ಹನುಮಂತರಾಜು ಬೆಂಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಪಿತೃಪಕ್ಷದ ಪೂಜಾ ಕಾರ್ಯ ಮುಗಿಸಿ ವಾಪಸ್ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಬಾಗಿಲು ಮೀಟಿದ್ದ ಕಳ್ಳರು ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ, 1 ಕೆ.ಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ.  ಸ್ಥಳಕ್ಕಾಗಮಿಸಿದ ನೆಲಮಂಗಲ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 6:25 pm, Sun, 13 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us