AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದಿಂದ ರಕ್ಷಣೆ ಇದ್ದೇ ಇರುತ್ತದೆ: ರವಿ

ಚಿಕ್ಕಮಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧದ ಕಾರ್ಯಾಚರಣೆ ಈಗ ಸ್ಯಾಂಡಲ್ವುಡ್ ಬುಡವನ್ನೇ ಅಲುಗಾಡಿಸುತ್ತಿದ್ದು, ಈ ಜಾಲದ ಬಗ್ಗೆ ಸಚಿವ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಡ್ರಗ್ಸ್ ಮಾಫಿಯಾದಲ್ಲಿ ಕೆಲವು ದಿನಗಳಿಂದ ಸ್ಯಾಂಡಲ್ವುಡ್​ನ ಸೈಡ್ ಆಕ್ಟರ್​ಗಳು ಮಾತ್ರ ಸಿಕ್ಕಿಬೀಳುತ್ತಿದ್ದರು. ಈಗ ಮೇನ್ ಆಕ್ಟರ್​ಗಳು ಸಿಕ್ಕಿಬೀಳುತ್ತಾರಾ? ಎಂಬುದನ್ನು ನೋಡಬೇಕಾಗಿದೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದ ರಕ್ಷಣೆ  ಡ್ರಗ್ಸ್ ಜಾಲದ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್ ಲಂಕೇಶ್ ಅವರಿಗೆ ಸರ್ಕಾರದಿಂದ […]

ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದಿಂದ ರಕ್ಷಣೆ ಇದ್ದೇ ಇರುತ್ತದೆ: ರವಿ
ಸಾಧು ಶ್ರೀನಾಥ್​
|

Updated on:Aug 29, 2020 | 3:54 PM

Share

ಚಿಕ್ಕಮಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧದ ಕಾರ್ಯಾಚರಣೆ ಈಗ ಸ್ಯಾಂಡಲ್ವುಡ್ ಬುಡವನ್ನೇ ಅಲುಗಾಡಿಸುತ್ತಿದ್ದು, ಈ ಜಾಲದ ಬಗ್ಗೆ ಸಚಿವ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಡ್ರಗ್ಸ್ ಮಾಫಿಯಾದಲ್ಲಿ ಕೆಲವು ದಿನಗಳಿಂದ ಸ್ಯಾಂಡಲ್ವುಡ್​ನ ಸೈಡ್ ಆಕ್ಟರ್​ಗಳು ಮಾತ್ರ ಸಿಕ್ಕಿಬೀಳುತ್ತಿದ್ದರು. ಈಗ ಮೇನ್ ಆಕ್ಟರ್​ಗಳು ಸಿಕ್ಕಿಬೀಳುತ್ತಾರಾ? ಎಂಬುದನ್ನು ನೋಡಬೇಕಾಗಿದೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿಕೆ ನೀಡಿದ್ದಾರೆ.

ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದ ರಕ್ಷಣೆ  ಡ್ರಗ್ಸ್ ಜಾಲದ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್ ಲಂಕೇಶ್ ಅವರಿಗೆ ಸರ್ಕಾರದಿಂದ ರಕ್ಷಣೆ ಇದ್ದೇ ಇರುತ್ತದೆ. ಇದು ವ್ಯವಸ್ಥಿತವಾದ ರಾಜ್ಯ ಹಾಗೂ ಅಂತರಾಷ್ಟ್ರೀಯ ಜಾಲವಾಗಿದೆ. ಹಾಗಾಗಿ ಇಂದ್ರಜಿತ್ ಲಂಕೇಶ್ ಅವರು ಯಾರಿಗೂ ಭಯಪಡದೆ ತನಿಖೆಗೆ ಸಹಕರಿಸಬೇಕೆಂದು ಕೇಳಿಕೊಂಡಿದ್ದಾರೆ.

ಈ ಜಾಲವನ್ನು ಬಗ್ಗುಬಡಿಯಲು ಹಾಗೂ ಮತ್ತಷ್ಟು ಜನ ಡ್ರಗ್ಸ್ ಚಟಕ್ಕೆ ಬಿದ್ದು ಬಲಿಯಾಗದಿರಲು ಇಂದ್ರಜಿತ್ ಲಂಕೇಶ್ ಅವರ ಸಹಕಾರ ಬೇಕಾಗಿದೆ. ಜೊತೆಗೆ ಈ ಪ್ರಕರಣದ ತನಿಖೆಯನ್ನು ಪೊಲೀಸರು ಗಂಭೀರವಾಗಿ ನಡೆಸುತ್ತಿದ್ದಾರೆ. ಇದರಿಂದಾಗಿ ಈ ರಾಕೆಟ್​ನಲ್ಲಿ ಯಾರು ಯಾರಿದ್ದಾರೆ, ಹಾಗೂ ಈ ವ್ಯಾಪಾರ ಯಾರದ್ದು ಎಂಬುದು ತನಿಖೆ ನಂತರ ತಿಳಿಯಲಿದೆ ಎಂದಿದ್ದಾರೆ.

Published On - 3:53 pm, Sat, 29 August 20

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ