AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದಿಂದ ರಕ್ಷಣೆ ಇದ್ದೇ ಇರುತ್ತದೆ: ರವಿ

ಚಿಕ್ಕಮಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧದ ಕಾರ್ಯಾಚರಣೆ ಈಗ ಸ್ಯಾಂಡಲ್ವುಡ್ ಬುಡವನ್ನೇ ಅಲುಗಾಡಿಸುತ್ತಿದ್ದು, ಈ ಜಾಲದ ಬಗ್ಗೆ ಸಚಿವ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಡ್ರಗ್ಸ್ ಮಾಫಿಯಾದಲ್ಲಿ ಕೆಲವು ದಿನಗಳಿಂದ ಸ್ಯಾಂಡಲ್ವುಡ್​ನ ಸೈಡ್ ಆಕ್ಟರ್​ಗಳು ಮಾತ್ರ ಸಿಕ್ಕಿಬೀಳುತ್ತಿದ್ದರು. ಈಗ ಮೇನ್ ಆಕ್ಟರ್​ಗಳು ಸಿಕ್ಕಿಬೀಳುತ್ತಾರಾ? ಎಂಬುದನ್ನು ನೋಡಬೇಕಾಗಿದೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದ ರಕ್ಷಣೆ  ಡ್ರಗ್ಸ್ ಜಾಲದ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್ ಲಂಕೇಶ್ ಅವರಿಗೆ ಸರ್ಕಾರದಿಂದ […]

ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದಿಂದ ರಕ್ಷಣೆ ಇದ್ದೇ ಇರುತ್ತದೆ: ರವಿ
ಸಾಧು ಶ್ರೀನಾಥ್​
|

Updated on:Aug 29, 2020 | 3:54 PM

Share

ಚಿಕ್ಕಮಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧದ ಕಾರ್ಯಾಚರಣೆ ಈಗ ಸ್ಯಾಂಡಲ್ವುಡ್ ಬುಡವನ್ನೇ ಅಲುಗಾಡಿಸುತ್ತಿದ್ದು, ಈ ಜಾಲದ ಬಗ್ಗೆ ಸಚಿವ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಡ್ರಗ್ಸ್ ಮಾಫಿಯಾದಲ್ಲಿ ಕೆಲವು ದಿನಗಳಿಂದ ಸ್ಯಾಂಡಲ್ವುಡ್​ನ ಸೈಡ್ ಆಕ್ಟರ್​ಗಳು ಮಾತ್ರ ಸಿಕ್ಕಿಬೀಳುತ್ತಿದ್ದರು. ಈಗ ಮೇನ್ ಆಕ್ಟರ್​ಗಳು ಸಿಕ್ಕಿಬೀಳುತ್ತಾರಾ? ಎಂಬುದನ್ನು ನೋಡಬೇಕಾಗಿದೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿಕೆ ನೀಡಿದ್ದಾರೆ.

ಡ್ರಗ್ಸ್ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್​ಗೆ ಸರ್ಕಾರದ ರಕ್ಷಣೆ  ಡ್ರಗ್ಸ್ ಜಾಲದ ಬಗ್ಗೆ ಮೌನ ಮುರಿದಿರುವ ಇಂದ್ರಜಿತ್ ಲಂಕೇಶ್ ಅವರಿಗೆ ಸರ್ಕಾರದಿಂದ ರಕ್ಷಣೆ ಇದ್ದೇ ಇರುತ್ತದೆ. ಇದು ವ್ಯವಸ್ಥಿತವಾದ ರಾಜ್ಯ ಹಾಗೂ ಅಂತರಾಷ್ಟ್ರೀಯ ಜಾಲವಾಗಿದೆ. ಹಾಗಾಗಿ ಇಂದ್ರಜಿತ್ ಲಂಕೇಶ್ ಅವರು ಯಾರಿಗೂ ಭಯಪಡದೆ ತನಿಖೆಗೆ ಸಹಕರಿಸಬೇಕೆಂದು ಕೇಳಿಕೊಂಡಿದ್ದಾರೆ.

ಈ ಜಾಲವನ್ನು ಬಗ್ಗುಬಡಿಯಲು ಹಾಗೂ ಮತ್ತಷ್ಟು ಜನ ಡ್ರಗ್ಸ್ ಚಟಕ್ಕೆ ಬಿದ್ದು ಬಲಿಯಾಗದಿರಲು ಇಂದ್ರಜಿತ್ ಲಂಕೇಶ್ ಅವರ ಸಹಕಾರ ಬೇಕಾಗಿದೆ. ಜೊತೆಗೆ ಈ ಪ್ರಕರಣದ ತನಿಖೆಯನ್ನು ಪೊಲೀಸರು ಗಂಭೀರವಾಗಿ ನಡೆಸುತ್ತಿದ್ದಾರೆ. ಇದರಿಂದಾಗಿ ಈ ರಾಕೆಟ್​ನಲ್ಲಿ ಯಾರು ಯಾರಿದ್ದಾರೆ, ಹಾಗೂ ಈ ವ್ಯಾಪಾರ ಯಾರದ್ದು ಎಂಬುದು ತನಿಖೆ ನಂತರ ತಿಳಿಯಲಿದೆ ಎಂದಿದ್ದಾರೆ.

Published On - 3:53 pm, Sat, 29 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ