AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ನನ್ನ ತಂದೆಯ ವಿರುದ್ಧ ಖಂಡಿತ ಕಾನೂನು ಕ್ರಮ ಕೈಗೊಳ್ಳಲಾಗುವುದು‘-ಬ್ರಾಹ್ಮಣ ಸಮುದಾಯಕ್ಕೆ ಭರವಸೆ ನೀಡಿದ ಚತ್ತೀಸ್​ಗಡ​ ಸಿಎಂ

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​, ವಿವಿಧ ಸಮುದಾಯಗಳ ನಡುವಿನ ಸಾಮರಸ್ಯ ಕಾಪಾಡುವ ಹೊಣೆ ನನ್ನ ಮೇಲಿದೆ.

’ನನ್ನ ತಂದೆಯ ವಿರುದ್ಧ ಖಂಡಿತ ಕಾನೂನು ಕ್ರಮ ಕೈಗೊಳ್ಳಲಾಗುವುದು‘-ಬ್ರಾಹ್ಮಣ ಸಮುದಾಯಕ್ಕೆ ಭರವಸೆ ನೀಡಿದ ಚತ್ತೀಸ್​ಗಡ​ ಸಿಎಂ
ಸಿಎಂ ಭೂಪೇಶ್ ಬಾಘೇಲ್​
TV9 Web
| Edited By: |

Updated on:Sep 05, 2021 | 6:52 PM

Share

ರಾಯಪುರ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ನನ್ನ ತಂದೆ ನಂದಕುಮಾರ್ ಬಾಘೇಲ್​ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚತ್ತೀಸ್​ಗಡ್​ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್ (Chhattisgarh CM Bhupesh Baghel)​ ತಿಳಿಸಿದ್ದಾರೆ. ಸಿಎಂ ಭೂಪೇಶ್​ ತಂದೆ ನಂದಕುಮಾರ್ ವಿರುದ್ಧ ಸರ್ವ ಬ್ರಾಹ್ಮಿಣ್​ ಸಮಾಜ ದೂರು ದಾಖಲು ಮಾಡಿದ್ದು, ಕ್ರಮಕ್ಕೆ ಆಗ್ರಹಿಸಿದೆ.

ಇತ್ತೀಚೆಗೆ ನಂದಕುಮಾರ್ ಬಾಘೇಲ್​ ಉತ್ತರಪ್ರದೇಶದಲ್ಲಿ ಸಮಾರಂಭವೊಂದರಲ್ಲಿ ಮಾತನಾಡುವಾಗ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಬ್ರಾಹ್ಮಣರು ವಿದೇಶಿಗರು..ಅವರನ್ನು ಭಾರತದಿಂದ ಹೊರಗೆ ಕಳಿಸಬೇಕು. ಈಗಿರುವ ಬ್ರಾಹ್ಮಣರು ನಿಮ್ಮ ಹಳ್ಳಿಗಳನ್ನು ಪ್ರವೇಶಿಸಲು ಅವಕಾಶ ಕೊಡಬೇಡಿ. ಅವರನ್ನು ಬಹಿಷ್ಕರಿಸಿ ಎಂದು ಜನರಿಗೆ ಕರೆ ಕೊಟ್ಟಿದ್ದರು ಎಂದು ಅವರ ವಿರುದ್ಧ ದಾಖಲಾದ ದೂರಿನಲ್ಲಿ ಉಲ್ಲೇಖವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದೂರುದಾರ, ದೀನ ದಯಾಳ್​ ವಿಪ್ರ ಸಮಾಜದ ಸದಸ್ಯ ನವೀನ್​ ಶರ್ಮಾ, ನಂದಕುಮಾರ್ ಬಾಘೇಲ್​ ಬ್ರಾಹ್ಮಣರ ವಿರುದ್ಧ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಅವರು ಬ್ರಾಹ್ಮಣರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಲ್ಲದೆ, ಸಮಾಜವನ್ನು ಒಡೆಯಲು ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾನೂನು ಕ್ರಮ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​, ವಿವಿಧ ಸಮುದಾಯಗಳ ನಡುವಿನ ಸಾಮರಸ್ಯ ಕಾಪಾಡುವ ಹೊಣೆ ನನ್ನ ಮೇಲಿದೆ. ನನ್ನ ತಂದೆ ಯಾವುದೇ ಸಮಾಜದ ವಿರುದ್ಧ ಹೀಗೆ ಅವಹೇಳನ ಮಾಡಿದ್ದೇ ಹೌದಾದರೆ ನಿಜಕ್ಕೂ ನಾನು ಕ್ಷಮೆ ಕೇಳುತ್ತೇನೆ. ಅವರ ವಿರುದ್ಧ ಖಂಡಿತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ‘ಉತ್ತರ ಪ್ರದೇಶದ ಆಸ್ಪತ್ರೆಗಳಲ್ಲಿದ್ದಾರೆ ವೈರಲ್ ಜ್ವರ, ದೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿರುವ 171 ಮಕ್ಕಳು’

ಬಾಗಲಕೋಟೆಯಲ್ಲಿ ಎಗ್​ರೈಸ್​ ತಿಂದು ಹಣ ಕೊಡಲಿಲ್ಲವೆಂದು ಯುವಕನಿಗೆ ಥಳಿತ; ಅಂಗಡಿ ಮಾಲೀಕ ಪೊಲೀಸರ ವಶಕ್ಕೆ

Published On - 6:48 pm, Sun, 5 September 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ