Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಸಭಾಪತಿ ಉತ್ತರ ತಿರಸ್ಕರಿಸಿದ ಅಯನೂರು ಮಂಜುನಾಥ್: ಹಕ್ಕುಚ್ಯುತಿಯ ಪ್ರಸ್ತಾವ

ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಮಂಡನೆ ಸೂಚನೆಯನ್ನು ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪ್​ಚಂದ್ರ ಶೆಟ್ಟಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ಸುದೀರ್ಘ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಉತ್ತರ ತಿರಸ್ಕರಿಸಿದ ಅಯನೂರು ಮಂಜುನಾಥ್: ಹಕ್ಕುಚ್ಯುತಿಯ ಪ್ರಸ್ತಾವ
ಅಯನೂರು ಮಂಜುನಾಥ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 14, 2020 | 10:44 PM

ಬೆಂಗಳೂರು: ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಮಂಡನೆ ಸೂಚನೆಯನ್ನು ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪ್​ಚಂದ್ರ ಶೆಟ್ಟಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ಸುದೀರ್ಘ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ ಸದಸ್ಯರೊಬ್ಬರ ಗೊತ್ತುವಳಿಗೆ ಅಧಿಕಾರಿಗಳ ಮೂಲಕ ಪ್ರತಿಕ್ರಿಯಿಸಿರುವ ಸಭಾಪತಿಯಿಂದ ನನ್ನ ಹಕ್ಕುಚ್ಯುತಿಯಾಗಿದೆ, ಇದು ಸದಸ್ಯರಿಗೆ ಸಭಾಪತಿ ಮಾಡಿದ ಅವಮಾನ ಎಂದು ಮಂಜುನಾಥ್ ದೂರಿದ್ದಾರೆ.

ತಮ್ಮ ವಿರುದ್ಧದ ಆರೋಪಗಳಿಗೆ ಸದನದಲ್ಲಿ ಉತ್ತರ ನೀಡದೇ, ಕಡತಗಳಲ್ಲಿ ತೀರ್ಮಾನ ಕೈಗೊಂಡಿರುವುದು ಅಕ್ಷಮ್ಯ ಅಪರಾಧ ಮತ್ತು ಸಂವಿಧಾನ ವಿರೋಧಿ ಕ್ರಮ. ಸದನದಲ್ಲಿ ಇನ್ನೂ ಕಲಾಪಗಳು ಬಾಕಿಯಿದ್ದು, ಜಾನುವಾರುಗಳ ಹತ್ಯೆಗೆ ಸಂಬಂಧಿಸಿದ ಮಸೂದೆಯು ಪರ್ಯಾಲೋಚನೆಗೆ ಬಾಕಿಯಿರುವಾಗಲೇ ಸದನದ ಮುಂದೆ ಯಾವುದೇ ಕಲಾಪಗಳು ಬಾಕಿಯಿರುವುದಿಲ್ಲ ಎಂದು ಸಭಾಪತಿ ಘೋಷಿಸಿದ್ದಾರೆ. ಹೀಗೆ ಸುಳ್ಳು ಹೇಳುವ ಮೂಲಕ ತಮ್ಮ ಮೂಲ (ಕಾಂಗ್ರೆಸ್) ಮಾತೃಪಕ್ಷದ ಆಶಯಕ್ಕೆ ಅನುಗುಣವಾಗಿ ವರ್ತಿಸಿ, ಪಕ್ಷಪಾತ ಧೋರಣೆಯನ್ನು ಅನುಸರಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಸಭಾಪತಿ ಅಥವಾ ಉಪಸಭಾಪತಿಯನ್ನು ಪದದಿಂದ ತೆಗೆದು ಹಾಕುವ ನಿರ್ಣಯವು ಪರ್ಯಾಲೋಚನೆಯಲ್ಲಿರುವಾಗ ಸಂಬಂಧಿಸಿದ ಸಭಾಪತಿ ಅಥವಾ ಉಪಸಭಾಪತಿ ಸದನದಲ್ಲಿ ಹಾಜರಿದ್ದರೂ ಅಧ್ಯಕ್ಷತೆ ವಹಿಸತಕ್ಕದ್ದಲ್ಲ ಎಂದು ಸಂವಿಧಾನದ ಅನುಚ್ಛೇದಗಳು ಹೇಳುತ್ತವೆ. ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆಯಾಗಿರುವುದರಿಂದ ಅವರಿಗೆ ಹಿಂಬರಹ ನೀಡಲು ಅವಕಾಶ ಇರುವುದಿಲ್ಲ. ಅದನ್ನು ತಿರಸ್ಕರಿಸುತ್ತೇನೆ ಎಂದು ಅಯನೂರು ಮಂಜುನಾಥ್ ಹೇಳಿದ್ದಾರೆ.

ರಾಜಕೀಯ ತಂತ್ರ

ಮಂಗಳವಾರ (ಡಿ.15) ಆರಂಭವಾಗಲಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಕಾಂಗ್ರೆಸ್​ ಮೂಲದ ಸಭಾಪತಿಯಿಂದ ತಮ್ಮ ನಡೆಗೆ ತೊಂದರೆಯಾಗುವುದನ್ನು ತಪ್ಪಿಸಲು ಬಿಜೆಪಿ ಈ ತಂತ್ರಕ್ಕೆ ಮೊರೆಹೋಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಗೋಹತ್ಯೆ ತಡೆ ಕಾನೂನನ್ನು ಪರಿಷತ್​ನಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಡಿ.15ರಂದು ಪರಿಷತ್ ಅಧಿವೇಶನ ಕರೆಯುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸರ್ಕಾರ ಪತ್ರ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ