ಬೆಂಗಳೂರು ಪಕ್ಕದಲ್ಲೇ ಚಿರತೆ ಹೆಜ್ಜೆ, ಆತಂಕದಲ್ಲಿ ಜನ

ಆನೇಕಲ್: ಮಹಾಮಾರಿ ಕೊರೊನಾ ಸಮಯದಲ್ಲಿ ಇಡೀ ವಿಶ್ವವೇ ಸ್ತಬ್ಧಗೊಂಡಿದೆ. ಮನುಷ್ಯರಂತೂ ರಸ್ತೆಗೆ ಬರದೆ ಮನೆಯಲ್ಲೇ ಲಾಕ್​ ಆಗಿದ್ದಾರೆ. ಇಂತಹ ಸಮಯದಲ್ಲಿ ಪ್ರಾಣಿಗಳು ರಾಜಾರೋಷವಾಗಿ ಹೆಜ್ಜೆ ಹಾಕುತ್ತಿವೆ. ನಿನ್ನೆಯಷ್ಟೇ ನೆಲಮಂಗಲದಲ್ಲಿ ಕಾಡುಪಾಪ ಕಂಡು ಬಂದಿತ್ತು. ಇದೀಗ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲೂ ಸಹ ಚಿರತೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ನೆರಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ರಿಗುಪ್ಪೆ ಗ್ರಾಮದ ಸುತ್ತ ಮುತ್ತ ಹೆಜ್ಜೆ ಗುರುತು ಕಂಡುಬಂದಿದ್ದು, ಒಂದಕ್ಕಿಂತ ಹೆಚ್ಚು ಚಿರತೆಗಳು ಇರುವ ಶಂಕೆ ವ್ಯಕ್ತವಾಗಿದೆ. ರಾಮನಾಯಕನಹಳ್ಳಿ ಕೆರೆಯ ಪಕ್ಕದಲ್ಲಿ ಹೆಜ್ಜೆ ಗುರುತು […]

ಬೆಂಗಳೂರು ಪಕ್ಕದಲ್ಲೇ ಚಿರತೆ ಹೆಜ್ಜೆ, ಆತಂಕದಲ್ಲಿ ಜನ
ಸಾಧು ಶ್ರೀನಾಥ್​

Updated on: May 08, 2020 | 12:24 PM

ಆನೇಕಲ್: ಮಹಾಮಾರಿ ಕೊರೊನಾ ಸಮಯದಲ್ಲಿ ಇಡೀ ವಿಶ್ವವೇ ಸ್ತಬ್ಧಗೊಂಡಿದೆ. ಮನುಷ್ಯರಂತೂ ರಸ್ತೆಗೆ ಬರದೆ ಮನೆಯಲ್ಲೇ ಲಾಕ್​ ಆಗಿದ್ದಾರೆ. ಇಂತಹ ಸಮಯದಲ್ಲಿ ಪ್ರಾಣಿಗಳು ರಾಜಾರೋಷವಾಗಿ ಹೆಜ್ಜೆ ಹಾಕುತ್ತಿವೆ. ನಿನ್ನೆಯಷ್ಟೇ ನೆಲಮಂಗಲದಲ್ಲಿ ಕಾಡುಪಾಪ ಕಂಡು ಬಂದಿತ್ತು.

ಇದೀಗ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲೂ ಸಹ ಚಿರತೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ನೆರಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ರಿಗುಪ್ಪೆ ಗ್ರಾಮದ ಸುತ್ತ ಮುತ್ತ ಹೆಜ್ಜೆ ಗುರುತು ಕಂಡುಬಂದಿದ್ದು, ಒಂದಕ್ಕಿಂತ ಹೆಚ್ಚು ಚಿರತೆಗಳು ಇರುವ ಶಂಕೆ ವ್ಯಕ್ತವಾಗಿದೆ.

ರಾಮನಾಯಕನಹಳ್ಳಿ ಕೆರೆಯ ಪಕ್ಕದಲ್ಲಿ ಹೆಜ್ಜೆ ಗುರುತು ಪತ್ತೆಯಾಗಿರುವ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಫರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮದ ಸುತ್ತ ಯಾರೂ ಓಡಾಡದಂತೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆಯವರು ಎಚ್ಚರಿಕೆಯ ಜಾಗೃತಿ ಫಲಕ ಹಾಕಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

Published On - 11:43 am, Fri, 8 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us