Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ನಾಯಿಯಲ್ಲ ಚಿರತೆಯೇ.. ಕಾಂಕ್ರೀಟ್​​ ಕಾಡಿನ ಅಪಾರ್ಟ್​ಮೆಂಟ್​ನಲ್ಲಿ ಚಿರತೆ ಪ್ರತ್ಯಕ್ಷ.. ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ

ಚಿರತೆ ಅಪಾರ್ಟ್ಮೆಂಟ್​ನಲ್ಲಿ ಇರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಆಪರೇಷನ್ ಚೀತಾಗೆ ಮುಂದಾಗಿದೆ. ಚಿರತೆ ಅಪಾರ್ಟ್ಮೆಂಟ್ ಒಳಗೆ ಬರುವ ಮಾರ್ಗದಲ್ಲಿ ಬೋನ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಚಿರತೆಯನ್ನ ಸೆಳೆಯಲು ಬೋನ್ ಒಳಗೆ ಕುರಿ ಮರಿಯನ್ನು ಕಟ್ಟಲಾಗಿದೆ. ಹಾಗೂ ಬೋನ್ ಸುತ್ತಲೂ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಅದು ನಾಯಿಯಲ್ಲ ಚಿರತೆಯೇ.. ಕಾಂಕ್ರೀಟ್​​ ಕಾಡಿನ ಅಪಾರ್ಟ್​ಮೆಂಟ್​ನಲ್ಲಿ ಚಿರತೆ ಪ್ರತ್ಯಕ್ಷ.. ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jan 27, 2021 | 12:43 PM

ಬೆಂಗಳೂರು: ಕಾಂಕ್ರೀಟ್​ ಕಾಡಾಗಿರುವ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವನ್ಯಮೃಗಗಳು ನುಸುಳುವುದು ಹೊಸದೇನೂ ಅಲ್ಲ. ಆಗಾಗ ಕಾಡಿನಲ್ಲಿರಬೇಕಾದ ಪ್ರಾಣಿಗಳು ರಾಜಧಾನಿಗೆ ವಿಸಿಟ್ ಹಾಕುತ್ತಿರುತ್ತವೆ. ಕಳೆದ ನಾಲ್ಕಾರು ದಿನಗಳ ಹಿಂದೆಯೂ ಹೀಗೇ ಆಗಿದೆ. ಚಿರತೆಯೊಂದು ಬೆಂಗಳೂರು ದಕ್ಷಿಣ ಭಾಗದ ಅಪಾರ್ಟ್​ಮೆಂಟ್​ನೊಳಕ್ಕೆ ನುಸುಳಿದೆ. ಅದು ರಾತ್ರಿ ವೇಳೆ ನುಸುಳಿದ್ದರಿಂದ ಕತ್ತಲೆಯಲ್ಲಿ ಸಿಸಿಟಿವಿಯಲ್ಲಿ ಕಂಡುಬಂದ ಪ್ರಾಣಿ ಚಿರತೆಯಲ್ಲ; ನಾಯಿ ಎಂದು ಅಧಿಕಾರಿಗಳು ಸೇರಿದಂತೆ ಸ್ಥಳೀಯರು ಯಾಮಾರಿದ್ದರು. ಆದರೆ ಈಗ ಅಪಾರ್ಟ್​ಮೆಂಟ್​ನೊಳಕ್ಕೆ ನುಸುಳಿರುವುದು ಚಿರತೆಯೇ ಸರಿ ಎಂಬುದು ಪಕ್ಕಾ ಆಗಿದೆ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ.

ಚಿರತೆಯ ಹೆಸರು ಕೇಳಿದರೇನೆ ಜನರಲ್ಲಿ ನಡುಕು ಹುಟ್ಟುತ್ತೆ. ನಗರದ ಬೇಗೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್​ನ prestige apartment ಒಳಗೆ ಚಿರತೆ ಕಾಣಿಸಿಕೊಂಡಿದ್ದು ಜನರ ಜೀವ ಬಾಯಿಗೆ ಬಂದಂತಾಗಿದೆ. ಸದ್ಯ ಈಗ ಚಿರತೆಯನ್ನು ಸೆರೆ ಹಿಡಿಯಲು ನಾನಾ ಕಸರತ್ತುಗಳನ್ನು ಮಾಡಲಾಗುತ್ತಿದೆ.

ಆಪರೇಷನ್ ಚೀತಾ ಆರಂಭ, ಬೋನ್ ಒಳಗೆ ಕುರಿ ಮರಿ ಇಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಅಪಾರ್ಟ್​ಮೆಂಟ್​ನಲ್ಲಿ ಠಿಕಾಣಿ ಹೂಡಿರುವ ಬಗ್ಗೆ ಮಾಹಿತಿ ಖಚಿತಪಡುತ್ತಿದ್ದಂತೆ ಅರಣ್ಯ ಇಲಾಖೆ ಆಪರೇಷನ್ ಚೀತಾಗೆ Operation Cheetah ಮುಂದಾಗಿದೆ. ಚಿರತೆ ಅಪಾರ್ಟ್​ಮೆಂಟ್ ಒಳಗೆ ಬರುವ ಮಾರ್ಗದಲ್ಲಿ ಬೋನ್ ಅಳವಡಿಸಲಾಗಿದೆ. ಜೊತೆಗೆ ಚಿರತೆಯನ್ನ ಸೆಳೆಯಲು ಬೋನ್ ಒಳಗೆ ಕುರಿ ಮರಿಯನ್ನು ಕಟ್ಟಲಾಗಿದೆ. ಹಾಗೂ ಬೋನ್ ಸುತ್ತಲೂ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಕೆಲ ದಿನಗಳ ಹಿಂದೆಯೇ ಚಿರತೆ ಇರುವಿಕೆಯು ಕಂಡುಬಂದಿತ್ತು. ಆದ್ರೆ ಸಿಸಿಟಿವಿಯಲ್ಲಿ ಚಿರತೆ ನೋಡಿದ ಕೆಲ ಜನ ಅದು ನಾಯಿ ಎಂದು ನಿರ್ಲಕ್ಷ್ಯ ಮಾಡಿದ್ರು. ಇನ್ನು ಕೆಲ ಮಂದಿ ಆತಂಕದಲ್ಲೇ ದಿನ ಕಳೆಯುತ್ತಿದ್ದರು. ಸದ್ಯ ಈಗ ಮತ್ತೆ ಚಿರತೆಯೊಂದು ತಾನಿರುವ ಸುಳಿವನ್ನು ಕೊಟ್ಟಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.

ಬನ್ನೇರುಘಟ್ಟ ಅಭಯಾರಣ್ಯದಿಂದ ಚಿರತೆ ಬಂದಿರಬಹುದು ಪ್ರೆಸ್ಟೀಜ್ ಅಪಾರ್ಟ್​ಮೆಂಟ್​ ಬಳಿ ಚಿರತೆ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿತ್ತು. ರಾತ್ರಿ ವೇಳೆ ಅಪಾರ್ಟ್​ಮೆಂಟ್ ಸುತ್ತಾಮುತ್ತಾ ಏರಿಯಾದಲ್ಲಿ ಚಿರತೆಯ ಓಡಾಟ ಹೆಚ್ಚಾಗಿತ್ತು. ಇದರಿಂದ ಜನ ಬೆಚ್ಚಿಬಿದ್ದಿದ್ದು ಫ್ಲ್ಯಾಟ್‌ಗಳಿಂದ ಹೊರಬರುವುದಕ್ಕೂ ಸಹ ಹೆದರುತಿದ್ದರು.

ಬನ್ನೇರುಘಟ್ಟ ಅಭಯಾರಣ್ಯದಿಂದ ಈ ಚಿರತೆ ಬಂದಿರಬಹುದು ಎಂದು ಕೆಲವರು ಶಂಕೆ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗ ಅಧಿಕಾರಿಗಳು ಚಿರತೆಯನ್ನು ಯಶಸ್ವಿಯಾಗಿ ಸೆರ ಹಿಡಿದು ಜನರ ಆತಂಕವನ್ನು ದೂರ ಮಾಡಬೇಕಿದೆ.

ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್​ಮೆಂಟ್ ಬಳಿ ಚಿರತೆ ಮತ್ತೆ ಪ್ರತ್ಯಕ್ಷ!

Published On - 12:30 pm, Wed, 27 January 21

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್