
ಕೋಲಾರ: ಕಾಡುಹಂದಿಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ನರಳಾಡಿದ ಮನಕಲುಕುವ ಘಟನೆ ಜಿಲ್ಲೆಯ
ಚಿಕ್ಕಅಯ್ಯೂರು ಗ್ರಾಮದ ಬಳಿ ನಡೆದಿದೆ.
ಉರುಳಿಗೆ ಸಿಕ್ಕಿಬಿದ್ದ ಚಿರತೆಯನ್ನು ನೋಡಲು ಸುತ್ತಮುತ್ತಲ ಹಳ್ಳಿಗಳಿಂದ ನೂರಾರು ಜನರು ಜಮಾಯಿಸಿದರು. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸುವ ಯತ್ನದಲ್ಲಿ ತೊಡಗಿದರು.