AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಹುಲಿ ಅರ್ಧ ಸಿಂಹದ LIGERನಲ್ಲಿ ಫೈಟರ್​ ಆದ ವಿಜಯ್​ ದೇವರಕೊಂಡ: ಕನ್ನಡದಲ್ಲೂ ರಿಲೀಸ್​ ಆಗಲಿದೆ ಸಿನಿಮಾ

ಫಸ್ಟ್​ ಪೋಸ್ಟರ್​ನಲ್ಲಿ ವಿಜಯ್ ದೇವರಕೊಂಡ ಬಾಕ್ಸಿಂಗ್​ ಗ್ಲೌಸ್​ ತೊಟ್ಟು ಕಾಣಿಸಿಕೊಂಡಿದ್ದಾರೆ. ದೇವರಕೊಂಡ ಬಾಕ್ಸಿಂಗ್ ಉಡುಗೆ ಹಾಕಿರುವುದರಿಂದ ಇದು ಕ್ರೀಡಾಧಾರಿತ ಚಿತ್ರ ಎನ್ನುವುದು ಖಚಿತವಾದಂತಾಗಿದೆ.

ಅರ್ಧ ಹುಲಿ ಅರ್ಧ ಸಿಂಹದ LIGERನಲ್ಲಿ ಫೈಟರ್​ ಆದ ವಿಜಯ್​ ದೇವರಕೊಂಡ: ಕನ್ನಡದಲ್ಲೂ ರಿಲೀಸ್​ ಆಗಲಿದೆ ಸಿನಿಮಾ
ಲೈಗರ್ ಪೋಸ್ಟರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 4:49 PM

Share

ವಿಜಯ್ ​ ದೇವರಕೊಂಡ ಹಾಗೂ ಅನನ್ಯ ಪಾಂಡೆ ಸಿನಿಮಾಗೆ ಟೈಟಲ್​ ಫೈನಲ್​ ಆಗಿದೆ. ಚಿತ್ರಕ್ಕೆ LIGER ಎಂದು ಹೆಸರಿಡಲಾಗಿದ್ದು, ವಿಜಯ್​ ಬಾಕ್ಸಿಂಗ್​ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇಂದು ಈ ಚಿತ್ರದ ಫಸ್ಟ್​ ಲುಕ್​ ಬಿಡುಗಡೆ ಆಗಿದೆ. ಈ ವೇಳೆ ಟೈಟಲ್​ ಕೂಡ ರಿಲೀಸ್​ ಮಾಡಿದೆ ಚಿತ್ರತಂಡ. ವಿಶೇಷ ಎಂದರೆ, ಈ ಚಿತ್ರ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ.

ಈ ಬಗ್ಗೆ ಬಾಲಿವುಡ್​ ನಿರ್ಮಾಪಕ ಕರಣ್​ ಜೋಹರ್​ ಟ್ವೀಟ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿರುವ ಚಿತ್ರದ ಹೆಸರು ಲೈಗರ್​. ಚಿತ್ರವನ್ನು ಜಗನಾಥ್​​ ನಿರ್ದೇಶನ ಮಾಡುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂನಲ್ಲಿ ಚಿತ್ರ ತೆರೆಗೆ ಬರುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಫಸ್ಟ್​ ಪೋಸ್ಟರ್​ನಲ್ಲಿ ವಿಜಯ್ ದೇವರಕೊಂಡ ಬಾಕ್ಸಿಂಗ್​ ಗ್ಲೌಸ್​ ತೊಟ್ಟು ಕಾಣಿಸಿಕೊಂಡಿದ್ದಾರೆ. ದೇವರಕೊಂಡ ಬಾಕ್ಸಿಂಗ್ ಉಡುಗೆ ಹಾಕಿರುವುದರಿಂದ ಇದು ಕ್ರೀಡಾಧಾರಿತ ಚಿತ್ರ ಎನ್ನುವುದು ಖಚಿತವಾದಂತಾಗಿದೆ.

ಅಷ್ಟಕ್ಕೂ LIGER ಶಬ್ದದ ಅರ್ಥವೇನು ಎನ್ನುವ ಪ್ರಶ್ನೆಗೂ ಉತ್ತರವಿದೆ. ಸಿಂಹ ಹಾಗೂ ಹುಲಿಯಿಂದ ಹುಟ್ಟಿದ ತಳಿಗೆ LIGER ಎಂದು ಕರೆಯಲಾಗುತ್ತದೆ.  ಈ ಕಾರಣಕ್ಕೆ ಅವರ ಪೋಸ್ಟರ್​ ಹಿಂಭಾಗದಲ್ಲಿ ಅರ್ಧ ಹುಲಿ ಅರ್ಧ ಸಿಂಹದ ಚಿತ್ರವಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ