ರಾತ್ರೋರಾತ್ರಿ ಆಗಸದಲ್ಲಿ ಬೆಳ್ಳನೆಬೆಳಕು! ಕೊರೊನಾ ಭೀತಿಯಲ್ಲಿ ಬೆಚ್ಚಿಬಿದ್ದ ಗ್ರಾಮಸ್ಥರು

ಮಂಡ್ಯ: ರಾತ್ರೋ ರಾತ್ರಿ ಆಗಸದಲ್ಲಿ ದಿಢೀರ್ ಬೆಳಕು ಮೂಡಿ ಅಚ್ಚರಿಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೆರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಸುಮಾರು ಸಂಜೆ 7.15ರ ಸಮಯದಲ್ಲಿ ಸುಮಾರು 5 ನಿಮಿಷಗಳ ಕಾಲ ಬೆಳಕು ಕಾಣಿಸಿಕೊಂಡಿದೆ. ಕತ್ತಲಲ್ಲಿ ದಿಢೀರ್ ಬೆಳಕು ನೋಡಿ ಬೆಳಗ್ಗೆಯಂತೆ ಗ್ರಾಮಸ್ಥರು ಅಚ್ಚರಿಗೊಳಗಾಗಿದ್ದಾರೆ. ಕತ್ತಲೆಯಾದ್ದರಿಂದ ಎಲ್ಲಾ ಗ್ರಾಮಸ್ಥರು ಮನೆಯೊಳಗೆ ಸೇರಿದ್ದರು. ದಿಢೀರ್ ಬೆಳಕು ಕಂಡು ನಿಬ್ಬೆರಗಾಗಿ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಲ್ಲದೆ ನಾಲ್ಕೈದು ದಿನಗಳ ಹಿಂದೆ ಮಧ್ಯಾಹ್ನದ ವೇಳೆ ಭಾರೀ ಸದ್ದು ಕೇಳಿಸಿತ್ತು. ಇದು […]

ರಾತ್ರೋರಾತ್ರಿ ಆಗಸದಲ್ಲಿ ಬೆಳ್ಳನೆಬೆಳಕು! ಕೊರೊನಾ ಭೀತಿಯಲ್ಲಿ ಬೆಚ್ಚಿಬಿದ್ದ ಗ್ರಾಮಸ್ಥರು
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: May 26, 2020 | 12:01 PM

ಮಂಡ್ಯ: ರಾತ್ರೋ ರಾತ್ರಿ ಆಗಸದಲ್ಲಿ ದಿಢೀರ್ ಬೆಳಕು ಮೂಡಿ ಅಚ್ಚರಿಗೊಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೆರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಸುಮಾರು ಸಂಜೆ 7.15ರ ಸಮಯದಲ್ಲಿ ಸುಮಾರು 5 ನಿಮಿಷಗಳ ಕಾಲ ಬೆಳಕು ಕಾಣಿಸಿಕೊಂಡಿದೆ. ಕತ್ತಲಲ್ಲಿ ದಿಢೀರ್ ಬೆಳಕು ನೋಡಿ ಬೆಳಗ್ಗೆಯಂತೆ ಗ್ರಾಮಸ್ಥರು ಅಚ್ಚರಿಗೊಳಗಾಗಿದ್ದಾರೆ.

ಕತ್ತಲೆಯಾದ್ದರಿಂದ ಎಲ್ಲಾ ಗ್ರಾಮಸ್ಥರು ಮನೆಯೊಳಗೆ ಸೇರಿದ್ದರು. ದಿಢೀರ್ ಬೆಳಕು ಕಂಡು ನಿಬ್ಬೆರಗಾಗಿ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ. ಅಲ್ಲದೆ ನಾಲ್ಕೈದು ದಿನಗಳ ಹಿಂದೆ ಮಧ್ಯಾಹ್ನದ ವೇಳೆ ಭಾರೀ ಸದ್ದು ಕೇಳಿಸಿತ್ತು. ಇದು ಮಂಡ್ಯ ಜಿಲ್ಲೆಯಲ್ಲಿ ವಾರದಲ್ಲೇ ಎರಡನೇ ಅಚ್ಚರಿಯಾಗಿದೆ.

Published On - 11:31 am, Tue, 26 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us