AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆಯೇ ಇರಲಿ ಮಳೆಯೇ ಬರಲಿ… ಕೆಲಸಕ್ಕೆ ರೆಡಿಯಾದ್ರು ಲೈನ್​ಮನ್​!

GESCOM ನೌಕರರು ವಿಭಿನ್ನವಾಗಿ ಕೆಸರು ಗದ್ದೆಯ ಜಮೀನಿನಲ್ಲಿ ತೆರಳಿ ವಿದ್ಯುತ್ ದುರಸ್ತಿ ಮಾಡಿರುವ ಕಾರ್ಯಕ್ಕೆ ಈಗ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಬಳಿ ಜಮೀನಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ GESCOM ನೌಕರರಾದ ಶರಣಬಸವ ಮತ್ತು ಸಿದ್ದಯ್ಯ ಇಬ್ಬರು ವಿದ್ಯುತ್ ದುರಸ್ತಿಗಾಗಿ ಒಬ್ಬರ ಬೆನ್ನ ಮೇಲೆ ಒಬ್ಬರು ಹತ್ತಿ ಜಮೀನಿನ ಒಳಕ್ಕೆ ತೆರಳಿದ್ದಾರೆ. ಜಮೀನಿನಲ್ಲಿ ಕೆಸರು ಮಿಶ್ರಿತ ನೀರು ನಿಂತಿದ್ದ ಕಾರಣ ವಿದ್ಯುತ್ ಕಂಬ ಏರುವಾಗ ಅವಘಡ ಸಂಭವಿಸಬಾರದು ಅಂತಾ […]

ನೆರೆಯೇ ಇರಲಿ ಮಳೆಯೇ ಬರಲಿ... ಕೆಲಸಕ್ಕೆ ರೆಡಿಯಾದ್ರು ಲೈನ್​ಮನ್​!
KUSHAL V
|

Updated on: Aug 23, 2020 | 10:45 AM

Share

GESCOM ನೌಕರರು ವಿಭಿನ್ನವಾಗಿ ಕೆಸರು ಗದ್ದೆಯ ಜಮೀನಿನಲ್ಲಿ ತೆರಳಿ ವಿದ್ಯುತ್ ದುರಸ್ತಿ ಮಾಡಿರುವ ಕಾರ್ಯಕ್ಕೆ ಈಗ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಬಳಿ ಜಮೀನಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ GESCOM ನೌಕರರಾದ ಶರಣಬಸವ ಮತ್ತು ಸಿದ್ದಯ್ಯ ಇಬ್ಬರು ವಿದ್ಯುತ್ ದುರಸ್ತಿಗಾಗಿ ಒಬ್ಬರ ಬೆನ್ನ ಮೇಲೆ ಒಬ್ಬರು ಹತ್ತಿ ಜಮೀನಿನ ಒಳಕ್ಕೆ ತೆರಳಿದ್ದಾರೆ. ಜಮೀನಿನಲ್ಲಿ ಕೆಸರು ಮಿಶ್ರಿತ ನೀರು ನಿಂತಿದ್ದ ಕಾರಣ ವಿದ್ಯುತ್ ಕಂಬ ಏರುವಾಗ ಅವಘಡ ಸಂಭವಿಸಬಾರದು ಅಂತಾ ಈ ರೀತಿ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಇವರಿಬ್ಬರ ಪ್ಲಾನ್​ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತ ಬೆಳಿಗಾವಿಯಲ್ಲಿ ನವಿಲುತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮುನವಳ್ಳಿಯ ಯಲಿಗಾರ ಓಣಿಗೆ ನದಿಯ ನೀರು ನುಗ್ಗಿದೆ. ಜೊತೆಗೆ, ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲೂ ಸಹ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಈ ನಡುವೆ ಜಲಾವೃತವಾಗಿರುವ ಪ್ರದೇಶದಲ್ಲಿ ಸಹ ಲೈನ್‌ಮ್ಯಾನ್‌ಗಳು ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ.

ನೀರಿನಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ದುರಸ್ತಿ ಕಾರ್ಯ ಮಾಡುತ್ತಿರುವ ಬೆಳಗಾವಿಯ ಲೈನ್​ಮನ್​ಗಳು ನೀರಿನ ಮಧ್ಯೆ ಇರುವ ವಿದ್ಯುತ್ ಕಂಬಗಳನ್ನ ಏರಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ. ಮುಳಗಡೆಯಾದ ಪ್ರದೇಶದಲ್ಲಿ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಪವರ್​ಮನ್​ಗಳ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ