ಸಕ್ಕರೆ ನಾಡಿನಲ್ಲಿ ಅಮೂಲ್ಯ ನಿಕ್ಷೇಪ ಪತ್ತೆ!

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಬ್ಯಾಟರಿಗೆ ಬಳಸುವ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಮತ್ತು ಮರಳಗಾಲ ವ್ಯಾಪ್ತಿಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಸುಮಾರು 150 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕರೀಘಟ್ಟ ಬೆಟ್ಟದ ಹಿಂಭಾಗದ ತಪ್ಪಲಿನ ಪ್ರದೇಶದಲ್ಲಿ ಲಿಥಿಯಂ ನಿಕ್ಷೇಪವಿದ್ದು, ಪ್ರಧಾನ ಮಂತ್ರಿ ಸಚಿವಾಲಯದ ಅಡಿಯಲ್ಲಿ ಕಾರ್ಯ‌ ನಿರ್ವಹಿಸುತ್ತಿರುವ ಅಟಾಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಲಿಥಿಯಂ ಸಂಪತ್ತು ವಿದ್ಯುತ್ ಚಾಲಿತ ಕಾರು ಮತ್ತು ಬೈಕ್​ಗಳ ಬ್ಯಾಟರಿಗೆ ಅವಶ್ಯಕವಾಗಿದೆ. ದೇಶದಲ್ಲೇ […]

ಸಕ್ಕರೆ ನಾಡಿನಲ್ಲಿ ಅಮೂಲ್ಯ ನಿಕ್ಷೇಪ ಪತ್ತೆ!
ಸಾಧು ಶ್ರೀನಾಥ್​

Updated on: Feb 19, 2020 | 4:00 PM

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಬ್ಯಾಟರಿಗೆ ಬಳಸುವ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಮತ್ತು ಮರಳಗಾಲ ವ್ಯಾಪ್ತಿಯಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಸುಮಾರು 150 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಕರೀಘಟ್ಟ ಬೆಟ್ಟದ ಹಿಂಭಾಗದ ತಪ್ಪಲಿನ ಪ್ರದೇಶದಲ್ಲಿ ಲಿಥಿಯಂ ನಿಕ್ಷೇಪವಿದ್ದು, ಪ್ರಧಾನ ಮಂತ್ರಿ ಸಚಿವಾಲಯದ ಅಡಿಯಲ್ಲಿ ಕಾರ್ಯ‌ ನಿರ್ವಹಿಸುತ್ತಿರುವ ಅಟಾಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ಲಿಥಿಯಂ ಸಂಪತ್ತು ವಿದ್ಯುತ್ ಚಾಲಿತ ಕಾರು ಮತ್ತು ಬೈಕ್​ಗಳ ಬ್ಯಾಟರಿಗೆ ಅವಶ್ಯಕವಾಗಿದೆ. ದೇಶದಲ್ಲೇ ಅಪರೂಪದ ಖನಿಜ‌ ನಿಕ್ಷೇಪ ಮಂಡ್ಯದಲ್ಲಿ ಪತ್ತೆಯಾಗಿದೆ ಎನ್ನಲಾಗ್ತಿದೆ. ಆದ್ರೆ ಈ ಬಗ್ಗೆ ಒಂದಿಷ್ಟೂ ಮಾಹಿತಿಯನ್ನು ವಿಜ್ಞಾನಿಗಳ ತಂಡ ಬಿಟ್ಟುಕೊಡುತ್ತಿಲ್ಲ.







 

Published On - 3:06 pm, Wed, 19 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us