AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಗಿದೆ ಲಾಬಿ.. ಸಂಸದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗಾಗಿ!

ಬೆಳಗಾವಿ: ಕೊರೊನಾ ಮಹಾಮಾರಿಯಿಂದ ಅಕಾಲಿಕ ಸಾವು ಕಂಡ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅದಾಗಲೇ ರಾಜಕೀಯ ಗರಿಗೆದರಿದೆ. ಬೆಳಗಾವಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗೆ ಸೈಲೆಂಟ್‌ ಆಗಿ ಲಾಬಿ ಆರಂಭಗೊಂಡಿದೆ. ಅಂಗಡಿ ಪತ್ನಿ ಮಂಗಲಾ ಪರ ಕಾರ್ಯಕರ್ತರ ಒಲವು ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಂಗಲಾ ಪರ ಒಲವು ಹೆಚ್ಚಾಗಿದ್ದು, ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದಲೂ ಲಾಬಿ ಶುರುವಾಗಿದೆ. ಆದ್ರೆ, RSS ಮುಖಂಡರು ಸಮ್ಮತಿಸಿದ […]

ಶುರುವಾಗಿದೆ ಲಾಬಿ.. ಸಂಸದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗಾಗಿ!
ಸಾಧು ಶ್ರೀನಾಥ್​
|

Updated on:Sep 29, 2020 | 12:14 PM

Share

ಬೆಳಗಾವಿ: ಕೊರೊನಾ ಮಹಾಮಾರಿಯಿಂದ ಅಕಾಲಿಕ ಸಾವು ಕಂಡ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅದಾಗಲೇ ರಾಜಕೀಯ ಗರಿಗೆದರಿದೆ. ಬೆಳಗಾವಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗೆ ಸೈಲೆಂಟ್‌ ಆಗಿ ಲಾಬಿ ಆರಂಭಗೊಂಡಿದೆ. ಅಂಗಡಿ ಪತ್ನಿ ಮಂಗಲಾ ಪರ ಕಾರ್ಯಕರ್ತರ ಒಲವು ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಂಗಲಾ ಪರ ಒಲವು ಹೆಚ್ಚಾಗಿದ್ದು, ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದಲೂ ಲಾಬಿ ಶುರುವಾಗಿದೆ. ಆದ್ರೆ, RSS ಮುಖಂಡರು ಸಮ್ಮತಿಸಿದ ಅಭ್ಯರ್ಥಿ ಹೆಸರೇ ಬಹುತೇಕ ಅಂತಿಮಗೊಳ್ಳಲಿದೆ ಎನ್ನಲಾಗಿದೆ.

ಹೊಸ ಮುಖವನ್ನು ಪರಿಚಯಿಸುವ ಬಗ್ಗೆ ನಾಯಕರ ಒಲವು ಹೆಚ್ಚಾಗಿದೆ. ಟಿಕೆಟ್ ರೇಸ್‌ನಲ್ಲಿ ಇಬ್ಬರು ಯುವ ಪದಾಧಿಕಾರಿಗಳ ಹೆಸರು ಚಾಲ್ತಿಯಲ್ಲಿದೆ. ಈ ಪೈಕಿ ಓರ್ವ ಆಟೋಮೊಬೈಲ್ ಉದ್ಯಮಿ ಆಗಿದ್ದಾರೆ.

ಇಂದು ಬೆಳಗಾವಿಗೆ ಆಗಮಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ಅಂಗಡಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಜಿಲ್ಲಾ ಮುಖಂಡರ ಜತೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇತ್ತ ಕಾಂಗ್ರೆಸ್ ಪಕ್ಷದಿಂದ ಯಾರು ಅಭ್ಯರ್ಥಿಯಾಗ್ತಾರೆ ಎಂಬ ಬಗ್ಗೆಯೂ ಕುತೂಹಲ ಗರಿಗೆದರಿದೆ. ಕಾಂಗ್ರೆಸ್ ನಿಂದ ಮಾಜಿ ಶಾಸಕ ಸೇರಿದಂತೆ ಮೂರು ಜ‌ನ ಟಿಕೆಟ್ ರೇಸ್ ನಲ್ಲಿದ್ದಾರೆ. ಇನ್ನು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ. ಒಟ್ಟಾರೆಯಾಗಿ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸೈಲೆಂಟ್ ಆಗಿಯೇ ಲಾಬಿ ಶುರುವಾಗಿದೆ.

Published On - 10:26 am, Tue, 29 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್