AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಗಿದೆ ಲಾಬಿ.. ಸಂಸದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗಾಗಿ!

ಬೆಳಗಾವಿ: ಕೊರೊನಾ ಮಹಾಮಾರಿಯಿಂದ ಅಕಾಲಿಕ ಸಾವು ಕಂಡ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅದಾಗಲೇ ರಾಜಕೀಯ ಗರಿಗೆದರಿದೆ. ಬೆಳಗಾವಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗೆ ಸೈಲೆಂಟ್‌ ಆಗಿ ಲಾಬಿ ಆರಂಭಗೊಂಡಿದೆ. ಅಂಗಡಿ ಪತ್ನಿ ಮಂಗಲಾ ಪರ ಕಾರ್ಯಕರ್ತರ ಒಲವು ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮಂಗಲಾ ಪರ ಒಲವು ಹೆಚ್ಚಾಗಿದ್ದು, ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದಲೂ ಲಾಬಿ ಶುರುವಾಗಿದೆ. ಆದ್ರೆ, RSS ಮುಖಂಡರು ಸಮ್ಮತಿಸಿದ […]

ಶುರುವಾಗಿದೆ ಲಾಬಿ.. ಸಂಸದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗಾಗಿ!
ಸಾಧು ಶ್ರೀನಾಥ್​
|

Updated on:Sep 29, 2020 | 12:14 PM

Share

ಬೆಳಗಾವಿ: ಕೊರೊನಾ ಮಹಾಮಾರಿಯಿಂದ ಅಕಾಲಿಕ ಸಾವು ಕಂಡ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅದಾಗಲೇ ರಾಜಕೀಯ ಗರಿಗೆದರಿದೆ. ಬೆಳಗಾವಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ಕ್ಷೇತ್ರದ ಟಿಕೆಟ್‌ಗೆ ಸೈಲೆಂಟ್‌ ಆಗಿ ಲಾಬಿ ಆರಂಭಗೊಂಡಿದೆ. ಅಂಗಡಿ ಪತ್ನಿ ಮಂಗಲಾ ಪರ ಕಾರ್ಯಕರ್ತರ ಒಲವು ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಂಗಲಾ ಪರ ಒಲವು ಹೆಚ್ಚಾಗಿದ್ದು, ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದಲೂ ಲಾಬಿ ಶುರುವಾಗಿದೆ. ಆದ್ರೆ, RSS ಮುಖಂಡರು ಸಮ್ಮತಿಸಿದ ಅಭ್ಯರ್ಥಿ ಹೆಸರೇ ಬಹುತೇಕ ಅಂತಿಮಗೊಳ್ಳಲಿದೆ ಎನ್ನಲಾಗಿದೆ.

ಹೊಸ ಮುಖವನ್ನು ಪರಿಚಯಿಸುವ ಬಗ್ಗೆ ನಾಯಕರ ಒಲವು ಹೆಚ್ಚಾಗಿದೆ. ಟಿಕೆಟ್ ರೇಸ್‌ನಲ್ಲಿ ಇಬ್ಬರು ಯುವ ಪದಾಧಿಕಾರಿಗಳ ಹೆಸರು ಚಾಲ್ತಿಯಲ್ಲಿದೆ. ಈ ಪೈಕಿ ಓರ್ವ ಆಟೋಮೊಬೈಲ್ ಉದ್ಯಮಿ ಆಗಿದ್ದಾರೆ.

ಇಂದು ಬೆಳಗಾವಿಗೆ ಆಗಮಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ಅಂಗಡಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಜಿಲ್ಲಾ ಮುಖಂಡರ ಜತೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇತ್ತ ಕಾಂಗ್ರೆಸ್ ಪಕ್ಷದಿಂದ ಯಾರು ಅಭ್ಯರ್ಥಿಯಾಗ್ತಾರೆ ಎಂಬ ಬಗ್ಗೆಯೂ ಕುತೂಹಲ ಗರಿಗೆದರಿದೆ. ಕಾಂಗ್ರೆಸ್ ನಿಂದ ಮಾಜಿ ಶಾಸಕ ಸೇರಿದಂತೆ ಮೂರು ಜ‌ನ ಟಿಕೆಟ್ ರೇಸ್ ನಲ್ಲಿದ್ದಾರೆ. ಇನ್ನು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ. ಒಟ್ಟಾರೆಯಾಗಿ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸೈಲೆಂಟ್ ಆಗಿಯೇ ಲಾಬಿ ಶುರುವಾಗಿದೆ.

Published On - 10:26 am, Tue, 29 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ