AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಿಸಿ, ವಿಡಿಯೋ ಕಾಲ್ ಮೂಲಕ ನವಜೋಡಿ ನಿಖಾ

ಧಾರವಾಡ: ಕೊರೊನಾ ವೈರೆಸ್ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶ ಲಾಕ್​ಡೌನ್ ಆಗಿದೆ. ಅದರಲ್ಲೂ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಪ್ರಣಯ ಪಕ್ಷಿಗಳಿಗೆ ಬಂದು ರೀತಿಯ ವನವಾಸವಾಗಿದೆ. ಈ ಸಮಯದಲ್ಲಿ ಮದುವೆ ನಿಶ್ಚಯವಾಗಿರುವವರಂತೂ ಈ ಕಡೆ ಮದುವೆಯೂ ಮಾಡಿಕೊಳ್ಳಲಾಗದೆ, ಮದುವೆಯನ್ನು ಮುಂದಕ್ಕೂ ಹಾಕಲಾಗದೆ ಪರದಾಡುತ್ತಿದ್ದಾರೆ. ಇನ್ನು ಕೆಲವರು ಸರ್ಕಾರದ ಆದೇಶವನ್ನು ಪಾಲಿಸಿ ಬೆರಳೆಣಿಕೆಯಷ್ಟು ವ್ಯಕ್ತಿಗಳ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಅದೇ ರೀತಿ ಲಾಕ್​ಡೌನ್ ಹಿನ್ನೆಲೆ ಜೋಡಿಯೊಂದು ವಿಡಿಯೋ ಕಾಲ್‌ ಮುಖಾಂತರ ನಿಖಾ ಮಾಡಿಕೊಂಡಿದೆ. ಧಾರವಾಡದ ಆದರ್ಶ ನಗರದ ವರ […]

ಕೊರೊನಾ ಬಿಸಿ, ವಿಡಿಯೋ ಕಾಲ್ ಮೂಲಕ ನವಜೋಡಿ ನಿಖಾ
ಸಾಧು ಶ್ರೀನಾಥ್​
|

Updated on: Apr 21, 2020 | 11:45 AM

Share

ಧಾರವಾಡ: ಕೊರೊನಾ ವೈರೆಸ್ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶ ಲಾಕ್​ಡೌನ್ ಆಗಿದೆ. ಅದರಲ್ಲೂ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಪ್ರಣಯ ಪಕ್ಷಿಗಳಿಗೆ ಬಂದು ರೀತಿಯ ವನವಾಸವಾಗಿದೆ. ಈ ಸಮಯದಲ್ಲಿ ಮದುವೆ ನಿಶ್ಚಯವಾಗಿರುವವರಂತೂ ಈ ಕಡೆ ಮದುವೆಯೂ ಮಾಡಿಕೊಳ್ಳಲಾಗದೆ, ಮದುವೆಯನ್ನು ಮುಂದಕ್ಕೂ ಹಾಕಲಾಗದೆ ಪರದಾಡುತ್ತಿದ್ದಾರೆ. ಇನ್ನು ಕೆಲವರು ಸರ್ಕಾರದ ಆದೇಶವನ್ನು ಪಾಲಿಸಿ ಬೆರಳೆಣಿಕೆಯಷ್ಟು ವ್ಯಕ್ತಿಗಳ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.

ಅದೇ ರೀತಿ ಲಾಕ್​ಡೌನ್ ಹಿನ್ನೆಲೆ ಜೋಡಿಯೊಂದು ವಿಡಿಯೋ ಕಾಲ್‌ ಮುಖಾಂತರ ನಿಖಾ ಮಾಡಿಕೊಂಡಿದೆ. ಧಾರವಾಡದ ಆದರ್ಶ ನಗರದ ವರ ಇಮ್ರಾನ್ ಹಾಗೂ ಕೊಪ್ಪಳದ ವಧು ತಾಜಮಾ ಬೇಗಂ ಸಾಂಪ್ರದಾಯಿಕವಾಗಿ ವಿಡಿಯೋ‌ ಕಾಲ್‌ ಮುಖಾಂತರ ಮದುವೆಯಾಗಿದ್ದಾರೆ.

ವಧು- ವರರಿಬ್ಬರನ್ನೂ ಅವರವರ ಮನೆಯಲ್ಲಿಯೇ ಕೂರಿಸಿ ಎರಡೂ ಕುಟುಂಬದವರು ವಿಡಿಯೋ ಕಾಲ್ ಮೂಲಕ ಪರಸ್ಪರರ ಒಪ್ಪಿಗೆ ಪಡೆದು ಮದುವೆ ಕಾರ್ಯ ಮುಗಿಸಿದ್ದಾರೆ. ಲಾಕ್‌ಡೌನ್ ಮುಗಿದ ಬಳಿಕ ಸೊಸೆಯನ್ನು ಮನೆಗೆ ಕರೆತರಲು ವರನ ಕುಟುಂಬ ನಿರ್ಧರಿಸಿದೆ. ಧಾರವಾಡ ಆದರ್ಶನಗರ ಜಮಾತ್‌ ಖಾಜಿ ಸಿಕಂದರ ಅಂಕಲಗಿ ಹಾಗೂ ಕೊಪ್ಪಳ ಜಮಾತ್ ನ ಖಾಜಿಗಳು ಈ ಆನ್‌ಲೈನ್‌ ಮದುವೆಗೆ ಸಾಕ್ಷಿ ಆಗಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​