AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Losar Festival 2021| ಮೈಸೂರಿನ ಲಾಮಾ ಕ್ಯಾಂಪ್‌ನಲ್ಲಿ ಲೋಸರ್ ಹಬ್ಬದ ಸಂಭ್ರಮ

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿರುವ ಟಿಬೆಟಿಯನ್ ಲಾಮಾ ಕ್ಯಾಂಪ್​ನಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಾಂಪ್ರದಾಯಿಕವಾಗಿ ಲೋಸರ್ ಹಬ್ಬ ಆಚರಣೆ ಮಾಡಲಾಗಿದೆ.

Losar Festival 2021| ಮೈಸೂರಿನ ಲಾಮಾ ಕ್ಯಾಂಪ್‌ನಲ್ಲಿ ಲೋಸರ್ ಹಬ್ಬದ ಸಂಭ್ರಮ
ಲಾಮಾ ಕ್ಯಾಂಪ್‌ನಲ್ಲಿ ಲೋಸರ್ ಹಬ್ಬದ ಸಂಭ್ರಮ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 14, 2021 | 2:09 PM

Share

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿರುವ ಟಿಬೆಟಿಯನ್ ಲಾಮಾ ಕ್ಯಾಂಪ್​ನಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಾಂಪ್ರದಾಯಿಕವಾಗಿ ಲೋಸರ್ ಹಬ್ಬ ಆಚರಣೆ ಮಾಡಲಾಗಿದೆ. ಪ್ರತಿ ವರ್ಷ ಟಿಬೆಟ್‌ನಿಂದ ಅತಿಥಿಗಳು ಬರುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಟಿಬೆಟಿಯನ್ನರಿಗೆ ಹೊಸ ವರ್ಷದ ಸಂಭ್ರಮ ಟಿಬೆಟಿಯನ್ನರು ಹೊಸ ವರ್ಷವನ್ನು ಲೋಸರ್ ಹಬ್ಬವಾಗಿ ಆಚರಿಸುತ್ತಾರೆ. ಈ ಹಬ್ಬವನ್ನು 15 ದಿನಗಳ ಕಾಲ ಆಚರಿಸಲಾಗುತ್ತದೆ. ಆದ್ರೆ ಮೊದಲ ಮೂರು ದಿನಗಳು ಅದ್ದೂರಿಯಾಗಿ ನಡೆಯುತ್ತೆ. ಇದು ಹೆಚ್ಚಾಗಿ ಫೆಬ್ರವರಿ ತಿಂಗಳಲ್ಲಿ ಹಾಗೂ ನೇಪಾಳ, ಟಿಬೆಟ್, ಸಿಕ್ಕಿಂ ಮತ್ತು ಭೂತಾನ್​ನಲ್ಲಿ ಆಚರಿಸಲಾಗುತ್ತೆ. ಈ ಹಬ್ಬದಲ್ಲಿ ಪ್ರಾರ್ಥನೆ, ಸಮಾರಂಭ, ನೃತ್ಯ ಸೇರಿದಂತೆ ಅದ್ದೂರಿ ಆಚರಣೆಗಳನ್ನು ನೋಡಬಹುದು. ಆರಂಭದಲ್ಲಿ ಈ ಹಬ್ಬವನ್ನು ಹೆಚ್ಚಾಗಿ ರೈತರು ಆಚರಿಸುತ್ತಿದ್ದರು. ಬಳಿಕ ಲೋಸರ್ ಹಬ್ಬ ಹೊಸ ವರ್ಷದ ಆರಂಭದಲ್ಲಿ ಆಚರಿಸುವ ಬೌದ್ಧ ಧರ್ಮದ ಪ್ರಮುಖ ಹಬ್ಬವಾಯಿತು. ಲೋಸರ್​ರನ್ನು ದೇವರಿಗೆ ಕೃತಜ್ಞತೆಯ ಸಂಕೇತವಾಗಿ ಆಚರಿಸಲಾಗುತ್ತೆ.

ಲೋಸರ್ ಅರ್ಥ ಲೋ ಎಂಬ ಪದದ ಅರ್ಥ “ವರ್ಷ” ಮತ್ತು ಸಾರ್ ಎಂಬ ಪದವು “ಹೊಸ” ಎಂಬ ಅರ್ಥವನ್ನು ನೀಡುತ್ತದೆ. ಹೀಗಾಗಿ ಲೋಸರ್ ಪದದ ಅರ್ಥ ಹೊಸ ವರ್ಷವೆಂದು ವ್ಯಾಖ್ಯಾನಿಸಲಾಗಿದೆ. Losar Festival 2021Losar Festival 2021Losar Festival 2021Losar Festival 2021Losar Festival 2021Losar Festival 2021Losar Festival 2021Losar Festival 2021

ಇದನ್ನೂ ಓದಿ: Guru Sevalal Jayanti 2021 |ಸಂತ ಸೇವಾಲಾಲ್ ಜಯಂತ್ಯುತ್ಸವಕ್ಕೆ ಕ್ಷಣಗಣನೆ.. ಇಂದಿನಿಂದ 2 ದಿನ ನಡೆಯಲಿದೆ ಜಾತ್ರೆ 

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ