AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ಲವ್ ಆಗಿ, ಪೊಲೀಸ್ ಠಾಣೆ ಬಳಿ ಮದುವೆಯಾದ್ರು

ಹಾವೇರಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಪ್ರೀತಿ ಪ್ರೇಮ ಪ್ರಣಯ ಎಂದು ಸುತ್ತಾಡಿದ್ದ ಜೋಡಿಯೊಂದು ಪೊಲೀಸ್ ಠಾಣೆ ಮೆಟ್ಟಿಲೇರಿ ಲಾಕ್​ಡೌನ್ ಸಮಯದಲ್ಲಿ ಸರಳ ಮದುವೆಯಾದ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಯುವಕ ಹಾಗೂ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಯುವತಿ ಫೇಸ್​ಬುಕ್, ವಾಟ್ಸಪ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಪರಿಚಯ ಸ್ನೇಹ, ಪ್ರೀತಿಗೆ ತಿರುಗಿತ್ತು. ಇಬ್ಬರ ನಡುವೆ ಪ್ರೀತಿ, ಪ್ರೇಮ, ಪ್ರಣಯ ಎಂದೆಲ್ಲ ನಡೆದು ಇಬ್ಬರೂ ಬೆಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ […]

ಫೇಸ್​ಬುಕ್​ನಲ್ಲಿ ಲವ್ ಆಗಿ, ಪೊಲೀಸ್ ಠಾಣೆ ಬಳಿ ಮದುವೆಯಾದ್ರು
ಆಯೇಷಾ ಬಾನು
|

Updated on:May 31, 2020 | 2:29 PM

Share

ಹಾವೇರಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಪ್ರೀತಿ ಪ್ರೇಮ ಪ್ರಣಯ ಎಂದು ಸುತ್ತಾಡಿದ್ದ ಜೋಡಿಯೊಂದು ಪೊಲೀಸ್ ಠಾಣೆ ಮೆಟ್ಟಿಲೇರಿ ಲಾಕ್​ಡೌನ್ ಸಮಯದಲ್ಲಿ ಸರಳ ಮದುವೆಯಾದ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಯುವಕ ಹಾಗೂ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಯುವತಿ ಫೇಸ್​ಬುಕ್, ವಾಟ್ಸಪ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಪರಿಚಯ ಸ್ನೇಹ, ಪ್ರೀತಿಗೆ ತಿರುಗಿತ್ತು. ಇಬ್ಬರ ನಡುವೆ ಪ್ರೀತಿ, ಪ್ರೇಮ, ಪ್ರಣಯ ಎಂದೆಲ್ಲ ನಡೆದು ಇಬ್ಬರೂ ಬೆಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು.

ಪ್ರೀತಿಸಿದವನ ಮನೆ ಹುಡುಕಿಕೊಂಡು ಬಂದಳು ಪ್ರೇಯಸಿ: ಅದ್ಯಾಕೋ ಏನೋ ಇತ್ತೀಚೆಗೆ ಯುವಕ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ದೂರ ಮಾಡಿದ್ದ. ಕಳೆದ ಐದಾರು ತಿಂಗಳಿನಿಂದ ಮೊಬೈಲ್ ಸ್ವಿಚ್ಡ್ ಆಪ್ ಮಾಡಿಕೊಂಡು ಆಕೆಯ ಕೈಗೆ ಸಿಗದಂತಾದ. ತಾನು ಪ್ರೀತಿಸುತ್ತಿದ್ದ ಯುವಕನ ಮನೆ ಹುಡುಕಿಕೊಂಡು ಬಂದ ಯುವತಿ ನಡೆದ ಸಂಗತಿಯನ್ನು ಯುವಕನ ಮನೆಯವರಿಗೆ ತಿಳಿಸಿದ್ದಾಳೆ.

ಯುವಕನೊಂದಿಗೆ ಮದುವೆ ಮಾಡಿಸುವಂತೆ ಒತ್ತಾಯಿಸಿದ್ದಾಳೆ. ಆಗ ಯುವಕನ ಮನೆಯವರು ಯುವತಿಗೆ ತಮ್ಮ ಮನೆಯವರನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಯುವತಿ ತನ್ನ ಮನೆಯವರನ್ನು ಕರೆದುಕೊಂಡು ಬಂದು ತಾನು ಪ್ರೀತಿಸುತ್ತಿದ್ದ ಯುವಕನ ಜೊತೆ ಮದುವೆ ಮಾಡುವಂತೆ ಕೇಳಿದ್ದಾಳೆ. ಆಗ ಯುವಕನ ಮನೆಯವರು ಒಪ್ಪದಿದ್ದಾಗ ಪ್ರಕರಣ ಬಂಕಾಪುರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಮದುವೆಯಾಗುವ ಭರವಸೆ ನೀಡಿದ್ದ ಯುವಕ ತನ್ನನ್ನು ಮದುವೆ ಮಾಡಿಕೊಳ್ಳದಿದ್ದರೆ ಪ್ರಕರಣ ದಾಖಲಿಸುವುದಾಗಿ ಪಟ್ಟು ಹಿಡಿದಿದ್ದಳು. ನಂತರ ಸುಮ್ಮನೆ ಕೇಸು ಅಂತ ಅಲೆಯೋದು ಬೇಡ ಎಂದು ಕುಟುಂಬದವರ ಸಮ್ಮುಖದಲ್ಲಿ ಪೊಲೀಸ್ ಠಾಣೆ ಬಳಿ ಯುವಕ ಯುವತಿಯನ್ನು ಮದುವೆಯಾಗಿದ್ದಾನೆ. ಲಾಕ್​ಡೌನ್ ಇರುವುದರಿಂದ ಕುಟುಂಬಸ್ಥರು ಪೊಲೀಸ್ ಠಾಣೆ ಬಳಿಯೇ ಸರಳವಾಗಿ ಇಬ್ಬರಿಗೂ ಪರಸ್ಪರ ಹಾರ ಬದಲಾಯಿಸಿ, ಮದುವೆ ಮಾಡಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣದ ಮೂಲಕ ಆರಂಭವಾದ ಪ್ರೇಮ ಪ್ರಕರಣ ಸುಖಾಂತ್ಯ ಕಾಣುವಂತೆ ಮಾಡಿದ್ದಾರೆ.

Published On - 12:54 pm, Sun, 31 May 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?