ಮದುವೆಗೆ ಒಪ್ಪದಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯ ಹತ್ಯೆ, ಯುವಕ ಎಸ್ಕೇಪ್‌

ಹೇಮಂತ್ ಎಂಬ ಆರೋಪಿ ಸಿದ್ದಾಪುರದಲ್ಲಿ ಸುಸ್ಮಿತಾ(20) ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ಕಳೆದ ಮೂರು ವರ್ಷಗಳಿಂದ ಆರೋಪಿಯು ಸುಸ್ಮಿತಾಳನ್ನು ಪ್ರೀತಿಸುತ್ತಿದ್ದರ ಬಗ್ಗೆ ಮಾಹಿತಿಯಿದೆ.

ಮದುವೆಗೆ ಒಪ್ಪದಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯ ಹತ್ಯೆ, ಯುವಕ ಎಸ್ಕೇಪ್‌
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jan 28, 2021 | 3:30 PM

ಹಾಸನ:ಯುವತಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಹೇಮಂತ್ ಎಂಬ ಆರೋಪಿ ಸಿದ್ದಾಪುರದಲ್ಲಿ ಸುಸ್ಮಿತಾ(20) ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ಕಳೆದ ಮೂರು ವರ್ಷಗಳಿಂದ ಆರೋಪಿಯು ಸುಸ್ಮಿತಾಳನ್ನು ಪ್ರೀತಿಸುತ್ತಿದ್ದರ ಬಗ್ಗೆ ಮಾಹಿತಿಯಿದೆ.

ಮದುವೆಗೆ ಒಪ್ಪದಿದ್ದಕ್ಕೆ ಸುಸ್ಮಿತಾಳನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ. ಆರೋಪಿ ಹೇಮಂತ್ ಪ್ರೇಯಸಿಯನ್ನ ಕೊಲೆಗೈದು ಎಸ್ಕೇಪ್‌ ಆಗಿದ್ದಾನೆ. ಘಟನಾ ಸ್ಥಳಕ್ಕೆ ಸಕಲೇಶಪುರ ನಗರ ಠಾಣೆ ಪೊಲೀಸರ ಭೇಟಿ ನೀಡಿದ್ದಾರೆ.

‘ಪ್ರೀತಿ ಕೊಂದ ಪ್ರೇಯಸಿ’ಯನ್ನೇ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಪ್ರೇಮಿ!

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us